6:54 PM Saturday27 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್…

ಇತ್ತೀಚಿನ ಸುದ್ದಿ

ರಾಹುಲ್ ಉಡುಗೆ ಬಗ್ಗೆ ವ್ಯಂಗ್ಯವಾಡುವ ಬಿಜೆಪಿ ಮೋದಿಯವರ ದುಬಾರಿ ಸೂಟಿನ ಬಗ್ಗೆಯೂ ಮಾತನಾಡಲಿ; ದಿನೇಶ್ ಗುಂಡೂರಾವ್ 

10/09/2022, 16:55

ಬೆಂಗಳೂರು(reporterkarnataka.com):  ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ದುಬಾರಿ ಟಿ- ಶರ್ಟ್ ಬಗ್ಗೆ ವ್ಯಂಗ್ಯವಾಡುವ ಬಿಜೆಪಿ , ಮೋದಿಯವರ ದುಬಾರಿ ಸೂಟಿನ ಬಗ್ಗೆಯೂ ವ್ಯಂಗ್ಯವಾಡಲಿ. ಸ್ವಯಂಘೋಷಿತ ಫಕೀರ ಮೋದಿಯವರು ಲಕ್ಷಾಂತರ ಬೆಲೆ ಬಾಳುವ ಸೂಟು ಬೂಟು ಧರಿಸುತ್ತಾರೆ. ಅದು  ಬಿಜೆಪಿ ಯವರ ಕಣ್ಣಿಗೆ ಕಾಣುವುದಿಲ್ಲವೆ..? ‘ ಎಂದು ಕಾಂಗ್ರೆಸ್ ನಾಯಕ, ಕೆಪಿಸಿಸಿ ಮಾಜಿ ಅಧ್ಯಕ್ಷ  ದಿನೇಶ್ ಗುಂಡೂರಾವ್ ಪ್ರಶ್ನೆ ಮಾಡಿದ್ದಾರೆ.

ಈ ಕುರತು ಟ್ವೀಟ್ ಮಾಡಿರುವ ಅವರು,‘ಬಿಜೆಪಿ ಯವರಿಗೆ ರಾಹುಲ್ ಗಾಂಧಿಯವರ ಉಡುಗೆ ತೊಡುಗೆ ಬಗ್ಗೆ ಮಾತಾಡಲು ಯಾವ ನೈತಿಕತೆಯಿದೆ.?’ ಎಂದು ಕಿಡಿಕಾರಿದ್ದಾರೆ.

‘ಫಕೀರ ಎಂದರೆ ಸಂತನ ಪ್ರತಿರೂಪ. ಫಕೀರ ಎಂದು ಕರೆಸಿಕೊಳ್ಳುವವರು ಆಡಂಬರ-ಐಷಾರಾಮಿ ಬದುಕು ಸಾಗಿಸಬಾರದು. ಬಿಜೆಪಿ ಯವರು ಮೊದಲು ಸ್ವಯಂಘೋಷಿತ ಫಕೀರ ಮೋದಿಯವರಿಗೆ ದುಬಾರಿ ಜೀವನ ತ್ಯಜಿಸಲು ಹೇಳಲಿ. ನಂತರ ರಾಹುಲ್ ಗಾಂಧಿಯವರ ಬಗ್ಗೆ ಮಾತಾಡಲಿ. ಬಿಜೆಪಿ ಯವರ ತಟ್ಟೆಯಲ್ಲೇ ಹೆಗ್ಗಣ ಬಿದ್ದು ಕೊಳೆತು ನಾರುತ್ತಿದೆ. ಹೀಗಿರುವಾಗ ಇನ್ನೊಬ್ಬರ ತಟ್ಟೆಯ ಚಿಂತೆ ಯಾಕೆ.? ಎಂದು ದಿನೇಶ್ ಗುಂಡೂರಾವ್ ಬಿಜೆಪಿಯನ್ನು ಪ್ರಶ್ನೆ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು