4:28 PM Saturday22 - November 2025
ಬ್ರೇಕಿಂಗ್ ನ್ಯೂಸ್
ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ

ಇತ್ತೀಚಿನ ಸುದ್ದಿ

ರಾಹುಲ್ ವಿರುದ್ಧ ಹೇಳಿಕೆ ಶಾಸಕ ಡಾ. ಭರತ್ ಶೆಟ್ಟಿ ಅವರ ಸಂಸ್ಕೃತಿಯನ್ನು ಬಿಂಬಿಸುತ್ತದೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ

09/07/2024, 17:51

ಮಂಗಳೂರು(reporterkarnataka.com): ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯವರ ಕಪಾಳಕ್ಕೆ ಹೊಡೆಯಬೇಕು ಎಂಬ ಬಿಜೆಪಿ ಶಾಸಕ ಡಾ.ಭರತ್ ಶೆಟ್ಟಿ ಅವರ ಹೇಳಿಕೆ ಅವರ ಸಂಸ್ಕೃತಿ ಏನು ಎಂಬುದನ್ನು ತಿಳಿಸುತ್ತದೆ. ಶಾಸಕರು ದ್ವೇಷ ಬಿತ್ತುವುದನ್ನು ಕೈಬಿಟ್ಟು ಕೂಡಲೇ ರಾಹುಲ್ ಗಾಂಧಿಯವರ ವಿರುದ್ಧ ಹೇಳಿಕೆಗೆ ಕ್ಷಮೆ ಕೇಳಲಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಆಗ್ರಹಿಸಿದ್ದಾರೆ.

ಶಾಸಕರು ಮಾತಾಡುವಾಗ ತಾನೊಬ್ಬ ಸುಶಿಕ್ಷಿತ, ವೈದ್ಯ, ಶಾಸಕನಾಗಿದ್ದೇನೆ ಎಂಬುದ್ದಕ್ಕಾದರೂ ಬೆಲೆ ಕೊಡಬೇಕಿತ್ತು. ಅವರು ಮಾತನಾಡುದ ಮಾತು ಹಿಂದು ಸಮಾಜ ತಿಳಿಸಿಕೊಟ್ಟ ಸಂಸ್ಕೃತಿಯೇ? ಒಬ್ಬ ಹಿಂದು ಸಮಾಜದ ವ್ಯಕ್ತಿ ಎಂದು ಬಿಂಬಿಸಿಕೊಳ್ಳುತ್ತಿರುವ ವ್ಯಕ್ತಿ ಸಂವಿಧಾನದ ಹುದ್ದೆಗಾದರೂ ಗೌರವ ಕೊಡಬೇಕಿತ್ತು ಎಂದು ಅವರು ನುಡಿದರು.
ಪ್ರತಿಭಟನೆ ವೇಳೆ ಸಂಸದ ಬೃಜೇಶ್ ಚೌಟ ಅವರೂ ಇದ್ದರು. ಚೌಟರು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ಮಾಡುವುದಕ್ಕಿಂತ, ರಾಹುಲ್ ‌ಗಾಂಧಿಯವರು ಏನು ಮಾತನಾಡಿದ್ದಾರೆ, ಆ ಬಗ್ಗೆ ಸದನದಲ್ಲಿ ಪ್ರತಿಕ್ರಿಯಿಸುವ ಅವಕಾಶ ಇದೆ. ಅಲ್ಲಿ ಈ ವಿಚಾರದ ಬಗ್ಗೆ ಮಾತಾಡಲಿ. ಅದು ಬಿಟ್ಟು ರಸ್ತೆಯಲ್ಲಿ ನಿಂತು ಪ್ರತಿಭಟಿಸುವುದಲ್ಲ ಎಂದು ಪದ್ಮರಾಜ್ ನುಡಿದಿದ್ದಾರೆ.

ಪ್ರತಿಪಕ್ಷದ ನಾಯಕನಾಗಿ ರಾಹುಲ್‌ಗಾಂಧಿ ಸದನದಲ್ಲಿ ಮಾತನಾಡಿರುವುದನ್ನು ಹಿಂದು ಸಮಾಜ ಸೇರಿ ಸ್ವಾಮೀಜಿಗಳು ಸ್ವಾಗತಿಸಿದ್ದಾರೆ. ರಾಹುಲ್ ಗಾಂಧಿ ಹಿಂದು ಸಮಾಜವನ್ನು ಎಂದೂ ದೂಷಣೆ ಮಾಡಿಲ್ಲ. ಹಿಂದು ಸಮಾಜದ ಹೆಸರು ಹೇಳಿಕೊಂಡು ದ್ವೇಷಕಾರುತ್ತಿರುವ ಬಿಜೆಪಿ, ಆರ್.ಎಸ್.ಎಸ್.ನ ದ್ವೇಷದ ರಾಜಕಾರಣವನ್ನು ವಿರೋಧಿಸಿದ್ದಾರೆ ಎಂಬುದು ಸಮಸ್ತ ಭಾರತೀಯರಿಗೆ ತಿಳಿದಿದೆ. ಅದನ್ನು ಶಾಸಕರು ವಿಷಯಾಂತರ ಮಾಡಿ ಮತ್ತೆ ದ್ವೇಷ ಬಿತ್ತುವುದನ್ನು ಶಾಸಕರು ಕೈಬಿಟ್ಟು ಕೂಡಲೇ ರಾಹುಲ್ ಗಾಂಧಿಯವರ ವಿರುದ್ಧ ಹೇಳಿಕೆಗೆ ಕ್ಷಮೆ ಕೇಳಲಿ ಎಂದು ಈ ಮೂಲಕ ಆಗ್ರಹಿಸುತ್ತೇನೆ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು