4:29 PM Thursday25 - December 2025
ಬ್ರೇಕಿಂಗ್ ನ್ಯೂಸ್
ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:… ಮೂಡಿಗೆರೆ ತಾಪಂ ಇಒ ದರ್ಬಾರ್‌: ಸರ್ಕಾರಿ ಜೀಪ್‌ ಖಾಸಗಿಯಾಗಿ ದುರ್ಬಳಕೆ; ನಿತ್ಯ 60… ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ

ಇತ್ತೀಚಿನ ಸುದ್ದಿ

ರಾಹುಲ್ ವಿರುದ್ಧ ಹೇಳಿಕೆ ಶಾಸಕ ಡಾ. ಭರತ್ ಶೆಟ್ಟಿ ಅವರ ಸಂಸ್ಕೃತಿಯನ್ನು ಬಿಂಬಿಸುತ್ತದೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ

09/07/2024, 17:51

ಮಂಗಳೂರು(reporterkarnataka.com): ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯವರ ಕಪಾಳಕ್ಕೆ ಹೊಡೆಯಬೇಕು ಎಂಬ ಬಿಜೆಪಿ ಶಾಸಕ ಡಾ.ಭರತ್ ಶೆಟ್ಟಿ ಅವರ ಹೇಳಿಕೆ ಅವರ ಸಂಸ್ಕೃತಿ ಏನು ಎಂಬುದನ್ನು ತಿಳಿಸುತ್ತದೆ. ಶಾಸಕರು ದ್ವೇಷ ಬಿತ್ತುವುದನ್ನು ಕೈಬಿಟ್ಟು ಕೂಡಲೇ ರಾಹುಲ್ ಗಾಂಧಿಯವರ ವಿರುದ್ಧ ಹೇಳಿಕೆಗೆ ಕ್ಷಮೆ ಕೇಳಲಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಆಗ್ರಹಿಸಿದ್ದಾರೆ.

ಶಾಸಕರು ಮಾತಾಡುವಾಗ ತಾನೊಬ್ಬ ಸುಶಿಕ್ಷಿತ, ವೈದ್ಯ, ಶಾಸಕನಾಗಿದ್ದೇನೆ ಎಂಬುದ್ದಕ್ಕಾದರೂ ಬೆಲೆ ಕೊಡಬೇಕಿತ್ತು. ಅವರು ಮಾತನಾಡುದ ಮಾತು ಹಿಂದು ಸಮಾಜ ತಿಳಿಸಿಕೊಟ್ಟ ಸಂಸ್ಕೃತಿಯೇ? ಒಬ್ಬ ಹಿಂದು ಸಮಾಜದ ವ್ಯಕ್ತಿ ಎಂದು ಬಿಂಬಿಸಿಕೊಳ್ಳುತ್ತಿರುವ ವ್ಯಕ್ತಿ ಸಂವಿಧಾನದ ಹುದ್ದೆಗಾದರೂ ಗೌರವ ಕೊಡಬೇಕಿತ್ತು ಎಂದು ಅವರು ನುಡಿದರು.
ಪ್ರತಿಭಟನೆ ವೇಳೆ ಸಂಸದ ಬೃಜೇಶ್ ಚೌಟ ಅವರೂ ಇದ್ದರು. ಚೌಟರು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ಮಾಡುವುದಕ್ಕಿಂತ, ರಾಹುಲ್ ‌ಗಾಂಧಿಯವರು ಏನು ಮಾತನಾಡಿದ್ದಾರೆ, ಆ ಬಗ್ಗೆ ಸದನದಲ್ಲಿ ಪ್ರತಿಕ್ರಿಯಿಸುವ ಅವಕಾಶ ಇದೆ. ಅಲ್ಲಿ ಈ ವಿಚಾರದ ಬಗ್ಗೆ ಮಾತಾಡಲಿ. ಅದು ಬಿಟ್ಟು ರಸ್ತೆಯಲ್ಲಿ ನಿಂತು ಪ್ರತಿಭಟಿಸುವುದಲ್ಲ ಎಂದು ಪದ್ಮರಾಜ್ ನುಡಿದಿದ್ದಾರೆ.

ಪ್ರತಿಪಕ್ಷದ ನಾಯಕನಾಗಿ ರಾಹುಲ್‌ಗಾಂಧಿ ಸದನದಲ್ಲಿ ಮಾತನಾಡಿರುವುದನ್ನು ಹಿಂದು ಸಮಾಜ ಸೇರಿ ಸ್ವಾಮೀಜಿಗಳು ಸ್ವಾಗತಿಸಿದ್ದಾರೆ. ರಾಹುಲ್ ಗಾಂಧಿ ಹಿಂದು ಸಮಾಜವನ್ನು ಎಂದೂ ದೂಷಣೆ ಮಾಡಿಲ್ಲ. ಹಿಂದು ಸಮಾಜದ ಹೆಸರು ಹೇಳಿಕೊಂಡು ದ್ವೇಷಕಾರುತ್ತಿರುವ ಬಿಜೆಪಿ, ಆರ್.ಎಸ್.ಎಸ್.ನ ದ್ವೇಷದ ರಾಜಕಾರಣವನ್ನು ವಿರೋಧಿಸಿದ್ದಾರೆ ಎಂಬುದು ಸಮಸ್ತ ಭಾರತೀಯರಿಗೆ ತಿಳಿದಿದೆ. ಅದನ್ನು ಶಾಸಕರು ವಿಷಯಾಂತರ ಮಾಡಿ ಮತ್ತೆ ದ್ವೇಷ ಬಿತ್ತುವುದನ್ನು ಶಾಸಕರು ಕೈಬಿಟ್ಟು ಕೂಡಲೇ ರಾಹುಲ್ ಗಾಂಧಿಯವರ ವಿರುದ್ಧ ಹೇಳಿಕೆಗೆ ಕ್ಷಮೆ ಕೇಳಲಿ ಎಂದು ಈ ಮೂಲಕ ಆಗ್ರಹಿಸುತ್ತೇನೆ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು