6:12 AM Tuesday2 - June 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ನಡೆ; ಬಿಜೆಪಿಗೆ ಶುರುವಾಯ್ತು ಢವ ಢವ ನಾವು ಪಕ್ಷನಿಷ್ಠರು, ಜಮೀರ್‌ ವಿರುದ್ದ ಬೃಹತ್‌ ಷಡ್ಯಂತ್ರ: ವೈರಲ್‌ ಆಡಿಯೋ ಬಗ್ಗೆ ಸಿರಾಜ್‌… ಪಕ್ಷ ವಿರೋಧಿ ಕೃತ್ಯಕ್ಕೆ ಸಿಕ್ತು ಸಾಕ್ಷ್ಯ: ಜಮೀರ್ ಅಹ್ಮದ್ ಸ್ಫೋಟಕ ಆಡಿಯೋ ವೈರಲ್ ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..!

ಇತ್ತೀಚಿನ ಸುದ್ದಿ

ರಾಹುಲ್ ವಿರುದ್ಧ ಹೇಳಿಕೆ ಶಾಸಕ ಡಾ. ಭರತ್ ಶೆಟ್ಟಿ ಅವರ ಸಂಸ್ಕೃತಿಯನ್ನು ಬಿಂಬಿಸುತ್ತದೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ

09/07/2024, 17:51

ಮಂಗಳೂರು(reporterkarnataka.com): ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯವರ ಕಪಾಳಕ್ಕೆ ಹೊಡೆಯಬೇಕು ಎಂಬ ಬಿಜೆಪಿ ಶಾಸಕ ಡಾ.ಭರತ್ ಶೆಟ್ಟಿ ಅವರ ಹೇಳಿಕೆ ಅವರ ಸಂಸ್ಕೃತಿ ಏನು ಎಂಬುದನ್ನು ತಿಳಿಸುತ್ತದೆ. ಶಾಸಕರು ದ್ವೇಷ ಬಿತ್ತುವುದನ್ನು ಕೈಬಿಟ್ಟು ಕೂಡಲೇ ರಾಹುಲ್ ಗಾಂಧಿಯವರ ವಿರುದ್ಧ ಹೇಳಿಕೆಗೆ ಕ್ಷಮೆ ಕೇಳಲಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಆಗ್ರಹಿಸಿದ್ದಾರೆ.

ಶಾಸಕರು ಮಾತಾಡುವಾಗ ತಾನೊಬ್ಬ ಸುಶಿಕ್ಷಿತ, ವೈದ್ಯ, ಶಾಸಕನಾಗಿದ್ದೇನೆ ಎಂಬುದ್ದಕ್ಕಾದರೂ ಬೆಲೆ ಕೊಡಬೇಕಿತ್ತು. ಅವರು ಮಾತನಾಡುದ ಮಾತು ಹಿಂದು ಸಮಾಜ ತಿಳಿಸಿಕೊಟ್ಟ ಸಂಸ್ಕೃತಿಯೇ? ಒಬ್ಬ ಹಿಂದು ಸಮಾಜದ ವ್ಯಕ್ತಿ ಎಂದು ಬಿಂಬಿಸಿಕೊಳ್ಳುತ್ತಿರುವ ವ್ಯಕ್ತಿ ಸಂವಿಧಾನದ ಹುದ್ದೆಗಾದರೂ ಗೌರವ ಕೊಡಬೇಕಿತ್ತು ಎಂದು ಅವರು ನುಡಿದರು.
ಪ್ರತಿಭಟನೆ ವೇಳೆ ಸಂಸದ ಬೃಜೇಶ್ ಚೌಟ ಅವರೂ ಇದ್ದರು. ಚೌಟರು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ಮಾಡುವುದಕ್ಕಿಂತ, ರಾಹುಲ್ ‌ಗಾಂಧಿಯವರು ಏನು ಮಾತನಾಡಿದ್ದಾರೆ, ಆ ಬಗ್ಗೆ ಸದನದಲ್ಲಿ ಪ್ರತಿಕ್ರಿಯಿಸುವ ಅವಕಾಶ ಇದೆ. ಅಲ್ಲಿ ಈ ವಿಚಾರದ ಬಗ್ಗೆ ಮಾತಾಡಲಿ. ಅದು ಬಿಟ್ಟು ರಸ್ತೆಯಲ್ಲಿ ನಿಂತು ಪ್ರತಿಭಟಿಸುವುದಲ್ಲ ಎಂದು ಪದ್ಮರಾಜ್ ನುಡಿದಿದ್ದಾರೆ.

ಪ್ರತಿಪಕ್ಷದ ನಾಯಕನಾಗಿ ರಾಹುಲ್‌ಗಾಂಧಿ ಸದನದಲ್ಲಿ ಮಾತನಾಡಿರುವುದನ್ನು ಹಿಂದು ಸಮಾಜ ಸೇರಿ ಸ್ವಾಮೀಜಿಗಳು ಸ್ವಾಗತಿಸಿದ್ದಾರೆ. ರಾಹುಲ್ ಗಾಂಧಿ ಹಿಂದು ಸಮಾಜವನ್ನು ಎಂದೂ ದೂಷಣೆ ಮಾಡಿಲ್ಲ. ಹಿಂದು ಸಮಾಜದ ಹೆಸರು ಹೇಳಿಕೊಂಡು ದ್ವೇಷಕಾರುತ್ತಿರುವ ಬಿಜೆಪಿ, ಆರ್.ಎಸ್.ಎಸ್.ನ ದ್ವೇಷದ ರಾಜಕಾರಣವನ್ನು ವಿರೋಧಿಸಿದ್ದಾರೆ ಎಂಬುದು ಸಮಸ್ತ ಭಾರತೀಯರಿಗೆ ತಿಳಿದಿದೆ. ಅದನ್ನು ಶಾಸಕರು ವಿಷಯಾಂತರ ಮಾಡಿ ಮತ್ತೆ ದ್ವೇಷ ಬಿತ್ತುವುದನ್ನು ಶಾಸಕರು ಕೈಬಿಟ್ಟು ಕೂಡಲೇ ರಾಹುಲ್ ಗಾಂಧಿಯವರ ವಿರುದ್ಧ ಹೇಳಿಕೆಗೆ ಕ್ಷಮೆ ಕೇಳಲಿ ಎಂದು ಈ ಮೂಲಕ ಆಗ್ರಹಿಸುತ್ತೇನೆ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು