7:29 AM Tuesday30 - June 2026
ಬ್ರೇಕಿಂಗ್ ನ್ಯೂಸ್
ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ… 2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು

ಇತ್ತೀಚಿನ ಸುದ್ದಿ

ರಾಹುಲ್ ವಿರುದ್ಧ ಹೇಳಿಕೆ ಶಾಸಕ ಡಾ. ಭರತ್ ಶೆಟ್ಟಿ ಅವರ ಸಂಸ್ಕೃತಿಯನ್ನು ಬಿಂಬಿಸುತ್ತದೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ

09/07/2024, 17:51

ಮಂಗಳೂರು(reporterkarnataka.com): ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯವರ ಕಪಾಳಕ್ಕೆ ಹೊಡೆಯಬೇಕು ಎಂಬ ಬಿಜೆಪಿ ಶಾಸಕ ಡಾ.ಭರತ್ ಶೆಟ್ಟಿ ಅವರ ಹೇಳಿಕೆ ಅವರ ಸಂಸ್ಕೃತಿ ಏನು ಎಂಬುದನ್ನು ತಿಳಿಸುತ್ತದೆ. ಶಾಸಕರು ದ್ವೇಷ ಬಿತ್ತುವುದನ್ನು ಕೈಬಿಟ್ಟು ಕೂಡಲೇ ರಾಹುಲ್ ಗಾಂಧಿಯವರ ವಿರುದ್ಧ ಹೇಳಿಕೆಗೆ ಕ್ಷಮೆ ಕೇಳಲಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಆಗ್ರಹಿಸಿದ್ದಾರೆ.

ಶಾಸಕರು ಮಾತಾಡುವಾಗ ತಾನೊಬ್ಬ ಸುಶಿಕ್ಷಿತ, ವೈದ್ಯ, ಶಾಸಕನಾಗಿದ್ದೇನೆ ಎಂಬುದ್ದಕ್ಕಾದರೂ ಬೆಲೆ ಕೊಡಬೇಕಿತ್ತು. ಅವರು ಮಾತನಾಡುದ ಮಾತು ಹಿಂದು ಸಮಾಜ ತಿಳಿಸಿಕೊಟ್ಟ ಸಂಸ್ಕೃತಿಯೇ? ಒಬ್ಬ ಹಿಂದು ಸಮಾಜದ ವ್ಯಕ್ತಿ ಎಂದು ಬಿಂಬಿಸಿಕೊಳ್ಳುತ್ತಿರುವ ವ್ಯಕ್ತಿ ಸಂವಿಧಾನದ ಹುದ್ದೆಗಾದರೂ ಗೌರವ ಕೊಡಬೇಕಿತ್ತು ಎಂದು ಅವರು ನುಡಿದರು.
ಪ್ರತಿಭಟನೆ ವೇಳೆ ಸಂಸದ ಬೃಜೇಶ್ ಚೌಟ ಅವರೂ ಇದ್ದರು. ಚೌಟರು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ಮಾಡುವುದಕ್ಕಿಂತ, ರಾಹುಲ್ ‌ಗಾಂಧಿಯವರು ಏನು ಮಾತನಾಡಿದ್ದಾರೆ, ಆ ಬಗ್ಗೆ ಸದನದಲ್ಲಿ ಪ್ರತಿಕ್ರಿಯಿಸುವ ಅವಕಾಶ ಇದೆ. ಅಲ್ಲಿ ಈ ವಿಚಾರದ ಬಗ್ಗೆ ಮಾತಾಡಲಿ. ಅದು ಬಿಟ್ಟು ರಸ್ತೆಯಲ್ಲಿ ನಿಂತು ಪ್ರತಿಭಟಿಸುವುದಲ್ಲ ಎಂದು ಪದ್ಮರಾಜ್ ನುಡಿದಿದ್ದಾರೆ.

ಪ್ರತಿಪಕ್ಷದ ನಾಯಕನಾಗಿ ರಾಹುಲ್‌ಗಾಂಧಿ ಸದನದಲ್ಲಿ ಮಾತನಾಡಿರುವುದನ್ನು ಹಿಂದು ಸಮಾಜ ಸೇರಿ ಸ್ವಾಮೀಜಿಗಳು ಸ್ವಾಗತಿಸಿದ್ದಾರೆ. ರಾಹುಲ್ ಗಾಂಧಿ ಹಿಂದು ಸಮಾಜವನ್ನು ಎಂದೂ ದೂಷಣೆ ಮಾಡಿಲ್ಲ. ಹಿಂದು ಸಮಾಜದ ಹೆಸರು ಹೇಳಿಕೊಂಡು ದ್ವೇಷಕಾರುತ್ತಿರುವ ಬಿಜೆಪಿ, ಆರ್.ಎಸ್.ಎಸ್.ನ ದ್ವೇಷದ ರಾಜಕಾರಣವನ್ನು ವಿರೋಧಿಸಿದ್ದಾರೆ ಎಂಬುದು ಸಮಸ್ತ ಭಾರತೀಯರಿಗೆ ತಿಳಿದಿದೆ. ಅದನ್ನು ಶಾಸಕರು ವಿಷಯಾಂತರ ಮಾಡಿ ಮತ್ತೆ ದ್ವೇಷ ಬಿತ್ತುವುದನ್ನು ಶಾಸಕರು ಕೈಬಿಟ್ಟು ಕೂಡಲೇ ರಾಹುಲ್ ಗಾಂಧಿಯವರ ವಿರುದ್ಧ ಹೇಳಿಕೆಗೆ ಕ್ಷಮೆ ಕೇಳಲಿ ಎಂದು ಈ ಮೂಲಕ ಆಗ್ರಹಿಸುತ್ತೇನೆ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು