4:43 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ರಾಹುಲ್ ವಿರುದ್ಧ ಹೇಳಿಕೆ ಶಾಸಕ ಡಾ. ಭರತ್ ಶೆಟ್ಟಿ ಅವರ ಸಂಸ್ಕೃತಿಯನ್ನು ಬಿಂಬಿಸುತ್ತದೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ

09/07/2024, 17:51

ಮಂಗಳೂರು(reporterkarnataka.com): ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯವರ ಕಪಾಳಕ್ಕೆ ಹೊಡೆಯಬೇಕು ಎಂಬ ಬಿಜೆಪಿ ಶಾಸಕ ಡಾ.ಭರತ್ ಶೆಟ್ಟಿ ಅವರ ಹೇಳಿಕೆ ಅವರ ಸಂಸ್ಕೃತಿ ಏನು ಎಂಬುದನ್ನು ತಿಳಿಸುತ್ತದೆ. ಶಾಸಕರು ದ್ವೇಷ ಬಿತ್ತುವುದನ್ನು ಕೈಬಿಟ್ಟು ಕೂಡಲೇ ರಾಹುಲ್ ಗಾಂಧಿಯವರ ವಿರುದ್ಧ ಹೇಳಿಕೆಗೆ ಕ್ಷಮೆ ಕೇಳಲಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಆಗ್ರಹಿಸಿದ್ದಾರೆ.

ಶಾಸಕರು ಮಾತಾಡುವಾಗ ತಾನೊಬ್ಬ ಸುಶಿಕ್ಷಿತ, ವೈದ್ಯ, ಶಾಸಕನಾಗಿದ್ದೇನೆ ಎಂಬುದ್ದಕ್ಕಾದರೂ ಬೆಲೆ ಕೊಡಬೇಕಿತ್ತು. ಅವರು ಮಾತನಾಡುದ ಮಾತು ಹಿಂದು ಸಮಾಜ ತಿಳಿಸಿಕೊಟ್ಟ ಸಂಸ್ಕೃತಿಯೇ? ಒಬ್ಬ ಹಿಂದು ಸಮಾಜದ ವ್ಯಕ್ತಿ ಎಂದು ಬಿಂಬಿಸಿಕೊಳ್ಳುತ್ತಿರುವ ವ್ಯಕ್ತಿ ಸಂವಿಧಾನದ ಹುದ್ದೆಗಾದರೂ ಗೌರವ ಕೊಡಬೇಕಿತ್ತು ಎಂದು ಅವರು ನುಡಿದರು.
ಪ್ರತಿಭಟನೆ ವೇಳೆ ಸಂಸದ ಬೃಜೇಶ್ ಚೌಟ ಅವರೂ ಇದ್ದರು. ಚೌಟರು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ಮಾಡುವುದಕ್ಕಿಂತ, ರಾಹುಲ್ ‌ಗಾಂಧಿಯವರು ಏನು ಮಾತನಾಡಿದ್ದಾರೆ, ಆ ಬಗ್ಗೆ ಸದನದಲ್ಲಿ ಪ್ರತಿಕ್ರಿಯಿಸುವ ಅವಕಾಶ ಇದೆ. ಅಲ್ಲಿ ಈ ವಿಚಾರದ ಬಗ್ಗೆ ಮಾತಾಡಲಿ. ಅದು ಬಿಟ್ಟು ರಸ್ತೆಯಲ್ಲಿ ನಿಂತು ಪ್ರತಿಭಟಿಸುವುದಲ್ಲ ಎಂದು ಪದ್ಮರಾಜ್ ನುಡಿದಿದ್ದಾರೆ.

ಪ್ರತಿಪಕ್ಷದ ನಾಯಕನಾಗಿ ರಾಹುಲ್‌ಗಾಂಧಿ ಸದನದಲ್ಲಿ ಮಾತನಾಡಿರುವುದನ್ನು ಹಿಂದು ಸಮಾಜ ಸೇರಿ ಸ್ವಾಮೀಜಿಗಳು ಸ್ವಾಗತಿಸಿದ್ದಾರೆ. ರಾಹುಲ್ ಗಾಂಧಿ ಹಿಂದು ಸಮಾಜವನ್ನು ಎಂದೂ ದೂಷಣೆ ಮಾಡಿಲ್ಲ. ಹಿಂದು ಸಮಾಜದ ಹೆಸರು ಹೇಳಿಕೊಂಡು ದ್ವೇಷಕಾರುತ್ತಿರುವ ಬಿಜೆಪಿ, ಆರ್.ಎಸ್.ಎಸ್.ನ ದ್ವೇಷದ ರಾಜಕಾರಣವನ್ನು ವಿರೋಧಿಸಿದ್ದಾರೆ ಎಂಬುದು ಸಮಸ್ತ ಭಾರತೀಯರಿಗೆ ತಿಳಿದಿದೆ. ಅದನ್ನು ಶಾಸಕರು ವಿಷಯಾಂತರ ಮಾಡಿ ಮತ್ತೆ ದ್ವೇಷ ಬಿತ್ತುವುದನ್ನು ಶಾಸಕರು ಕೈಬಿಟ್ಟು ಕೂಡಲೇ ರಾಹುಲ್ ಗಾಂಧಿಯವರ ವಿರುದ್ಧ ಹೇಳಿಕೆಗೆ ಕ್ಷಮೆ ಕೇಳಲಿ ಎಂದು ಈ ಮೂಲಕ ಆಗ್ರಹಿಸುತ್ತೇನೆ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು