12:11 PM Saturday4 - April 2026
ಬ್ರೇಕಿಂಗ್ ನ್ಯೂಸ್
ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ

ಇತ್ತೀಚಿನ ಸುದ್ದಿ

ರಾಹುಲ್ ವಿರುದ್ಧ ಹೇಳಿಕೆ ಶಾಸಕ ಡಾ. ಭರತ್ ಶೆಟ್ಟಿ ಅವರ ಸಂಸ್ಕೃತಿಯನ್ನು ಬಿಂಬಿಸುತ್ತದೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ

09/07/2024, 17:51

ಮಂಗಳೂರು(reporterkarnataka.com): ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯವರ ಕಪಾಳಕ್ಕೆ ಹೊಡೆಯಬೇಕು ಎಂಬ ಬಿಜೆಪಿ ಶಾಸಕ ಡಾ.ಭರತ್ ಶೆಟ್ಟಿ ಅವರ ಹೇಳಿಕೆ ಅವರ ಸಂಸ್ಕೃತಿ ಏನು ಎಂಬುದನ್ನು ತಿಳಿಸುತ್ತದೆ. ಶಾಸಕರು ದ್ವೇಷ ಬಿತ್ತುವುದನ್ನು ಕೈಬಿಟ್ಟು ಕೂಡಲೇ ರಾಹುಲ್ ಗಾಂಧಿಯವರ ವಿರುದ್ಧ ಹೇಳಿಕೆಗೆ ಕ್ಷಮೆ ಕೇಳಲಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಆಗ್ರಹಿಸಿದ್ದಾರೆ.

ಶಾಸಕರು ಮಾತಾಡುವಾಗ ತಾನೊಬ್ಬ ಸುಶಿಕ್ಷಿತ, ವೈದ್ಯ, ಶಾಸಕನಾಗಿದ್ದೇನೆ ಎಂಬುದ್ದಕ್ಕಾದರೂ ಬೆಲೆ ಕೊಡಬೇಕಿತ್ತು. ಅವರು ಮಾತನಾಡುದ ಮಾತು ಹಿಂದು ಸಮಾಜ ತಿಳಿಸಿಕೊಟ್ಟ ಸಂಸ್ಕೃತಿಯೇ? ಒಬ್ಬ ಹಿಂದು ಸಮಾಜದ ವ್ಯಕ್ತಿ ಎಂದು ಬಿಂಬಿಸಿಕೊಳ್ಳುತ್ತಿರುವ ವ್ಯಕ್ತಿ ಸಂವಿಧಾನದ ಹುದ್ದೆಗಾದರೂ ಗೌರವ ಕೊಡಬೇಕಿತ್ತು ಎಂದು ಅವರು ನುಡಿದರು.
ಪ್ರತಿಭಟನೆ ವೇಳೆ ಸಂಸದ ಬೃಜೇಶ್ ಚೌಟ ಅವರೂ ಇದ್ದರು. ಚೌಟರು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ಮಾಡುವುದಕ್ಕಿಂತ, ರಾಹುಲ್ ‌ಗಾಂಧಿಯವರು ಏನು ಮಾತನಾಡಿದ್ದಾರೆ, ಆ ಬಗ್ಗೆ ಸದನದಲ್ಲಿ ಪ್ರತಿಕ್ರಿಯಿಸುವ ಅವಕಾಶ ಇದೆ. ಅಲ್ಲಿ ಈ ವಿಚಾರದ ಬಗ್ಗೆ ಮಾತಾಡಲಿ. ಅದು ಬಿಟ್ಟು ರಸ್ತೆಯಲ್ಲಿ ನಿಂತು ಪ್ರತಿಭಟಿಸುವುದಲ್ಲ ಎಂದು ಪದ್ಮರಾಜ್ ನುಡಿದಿದ್ದಾರೆ.

ಪ್ರತಿಪಕ್ಷದ ನಾಯಕನಾಗಿ ರಾಹುಲ್‌ಗಾಂಧಿ ಸದನದಲ್ಲಿ ಮಾತನಾಡಿರುವುದನ್ನು ಹಿಂದು ಸಮಾಜ ಸೇರಿ ಸ್ವಾಮೀಜಿಗಳು ಸ್ವಾಗತಿಸಿದ್ದಾರೆ. ರಾಹುಲ್ ಗಾಂಧಿ ಹಿಂದು ಸಮಾಜವನ್ನು ಎಂದೂ ದೂಷಣೆ ಮಾಡಿಲ್ಲ. ಹಿಂದು ಸಮಾಜದ ಹೆಸರು ಹೇಳಿಕೊಂಡು ದ್ವೇಷಕಾರುತ್ತಿರುವ ಬಿಜೆಪಿ, ಆರ್.ಎಸ್.ಎಸ್.ನ ದ್ವೇಷದ ರಾಜಕಾರಣವನ್ನು ವಿರೋಧಿಸಿದ್ದಾರೆ ಎಂಬುದು ಸಮಸ್ತ ಭಾರತೀಯರಿಗೆ ತಿಳಿದಿದೆ. ಅದನ್ನು ಶಾಸಕರು ವಿಷಯಾಂತರ ಮಾಡಿ ಮತ್ತೆ ದ್ವೇಷ ಬಿತ್ತುವುದನ್ನು ಶಾಸಕರು ಕೈಬಿಟ್ಟು ಕೂಡಲೇ ರಾಹುಲ್ ಗಾಂಧಿಯವರ ವಿರುದ್ಧ ಹೇಳಿಕೆಗೆ ಕ್ಷಮೆ ಕೇಳಲಿ ಎಂದು ಈ ಮೂಲಕ ಆಗ್ರಹಿಸುತ್ತೇನೆ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು