11:50 PM Monday20 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ…

ಇತ್ತೀಚಿನ ಸುದ್ದಿ

ರಾಹುಲ್ ವಿರುದ್ಧ ಹೇಳಿಕೆ ಶಾಸಕ ಡಾ. ಭರತ್ ಶೆಟ್ಟಿ ಅವರ ಸಂಸ್ಕೃತಿಯನ್ನು ಬಿಂಬಿಸುತ್ತದೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ

09/07/2024, 17:51

ಮಂಗಳೂರು(reporterkarnataka.com): ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯವರ ಕಪಾಳಕ್ಕೆ ಹೊಡೆಯಬೇಕು ಎಂಬ ಬಿಜೆಪಿ ಶಾಸಕ ಡಾ.ಭರತ್ ಶೆಟ್ಟಿ ಅವರ ಹೇಳಿಕೆ ಅವರ ಸಂಸ್ಕೃತಿ ಏನು ಎಂಬುದನ್ನು ತಿಳಿಸುತ್ತದೆ. ಶಾಸಕರು ದ್ವೇಷ ಬಿತ್ತುವುದನ್ನು ಕೈಬಿಟ್ಟು ಕೂಡಲೇ ರಾಹುಲ್ ಗಾಂಧಿಯವರ ವಿರುದ್ಧ ಹೇಳಿಕೆಗೆ ಕ್ಷಮೆ ಕೇಳಲಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಆಗ್ರಹಿಸಿದ್ದಾರೆ.

ಶಾಸಕರು ಮಾತಾಡುವಾಗ ತಾನೊಬ್ಬ ಸುಶಿಕ್ಷಿತ, ವೈದ್ಯ, ಶಾಸಕನಾಗಿದ್ದೇನೆ ಎಂಬುದ್ದಕ್ಕಾದರೂ ಬೆಲೆ ಕೊಡಬೇಕಿತ್ತು. ಅವರು ಮಾತನಾಡುದ ಮಾತು ಹಿಂದು ಸಮಾಜ ತಿಳಿಸಿಕೊಟ್ಟ ಸಂಸ್ಕೃತಿಯೇ? ಒಬ್ಬ ಹಿಂದು ಸಮಾಜದ ವ್ಯಕ್ತಿ ಎಂದು ಬಿಂಬಿಸಿಕೊಳ್ಳುತ್ತಿರುವ ವ್ಯಕ್ತಿ ಸಂವಿಧಾನದ ಹುದ್ದೆಗಾದರೂ ಗೌರವ ಕೊಡಬೇಕಿತ್ತು ಎಂದು ಅವರು ನುಡಿದರು.
ಪ್ರತಿಭಟನೆ ವೇಳೆ ಸಂಸದ ಬೃಜೇಶ್ ಚೌಟ ಅವರೂ ಇದ್ದರು. ಚೌಟರು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ಮಾಡುವುದಕ್ಕಿಂತ, ರಾಹುಲ್ ‌ಗಾಂಧಿಯವರು ಏನು ಮಾತನಾಡಿದ್ದಾರೆ, ಆ ಬಗ್ಗೆ ಸದನದಲ್ಲಿ ಪ್ರತಿಕ್ರಿಯಿಸುವ ಅವಕಾಶ ಇದೆ. ಅಲ್ಲಿ ಈ ವಿಚಾರದ ಬಗ್ಗೆ ಮಾತಾಡಲಿ. ಅದು ಬಿಟ್ಟು ರಸ್ತೆಯಲ್ಲಿ ನಿಂತು ಪ್ರತಿಭಟಿಸುವುದಲ್ಲ ಎಂದು ಪದ್ಮರಾಜ್ ನುಡಿದಿದ್ದಾರೆ.

ಪ್ರತಿಪಕ್ಷದ ನಾಯಕನಾಗಿ ರಾಹುಲ್‌ಗಾಂಧಿ ಸದನದಲ್ಲಿ ಮಾತನಾಡಿರುವುದನ್ನು ಹಿಂದು ಸಮಾಜ ಸೇರಿ ಸ್ವಾಮೀಜಿಗಳು ಸ್ವಾಗತಿಸಿದ್ದಾರೆ. ರಾಹುಲ್ ಗಾಂಧಿ ಹಿಂದು ಸಮಾಜವನ್ನು ಎಂದೂ ದೂಷಣೆ ಮಾಡಿಲ್ಲ. ಹಿಂದು ಸಮಾಜದ ಹೆಸರು ಹೇಳಿಕೊಂಡು ದ್ವೇಷಕಾರುತ್ತಿರುವ ಬಿಜೆಪಿ, ಆರ್.ಎಸ್.ಎಸ್.ನ ದ್ವೇಷದ ರಾಜಕಾರಣವನ್ನು ವಿರೋಧಿಸಿದ್ದಾರೆ ಎಂಬುದು ಸಮಸ್ತ ಭಾರತೀಯರಿಗೆ ತಿಳಿದಿದೆ. ಅದನ್ನು ಶಾಸಕರು ವಿಷಯಾಂತರ ಮಾಡಿ ಮತ್ತೆ ದ್ವೇಷ ಬಿತ್ತುವುದನ್ನು ಶಾಸಕರು ಕೈಬಿಟ್ಟು ಕೂಡಲೇ ರಾಹುಲ್ ಗಾಂಧಿಯವರ ವಿರುದ್ಧ ಹೇಳಿಕೆಗೆ ಕ್ಷಮೆ ಕೇಳಲಿ ಎಂದು ಈ ಮೂಲಕ ಆಗ್ರಹಿಸುತ್ತೇನೆ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು