1:16 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ರಾಹುಲ್ ವಿರುದ್ಧ ಹೇಳಿಕೆ ಶಾಸಕ ಡಾ. ಭರತ್ ಶೆಟ್ಟಿ ಅವರ ಸಂಸ್ಕೃತಿಯನ್ನು ಬಿಂಬಿಸುತ್ತದೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ

09/07/2024, 17:51

ಮಂಗಳೂರು(reporterkarnataka.com): ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯವರ ಕಪಾಳಕ್ಕೆ ಹೊಡೆಯಬೇಕು ಎಂಬ ಬಿಜೆಪಿ ಶಾಸಕ ಡಾ.ಭರತ್ ಶೆಟ್ಟಿ ಅವರ ಹೇಳಿಕೆ ಅವರ ಸಂಸ್ಕೃತಿ ಏನು ಎಂಬುದನ್ನು ತಿಳಿಸುತ್ತದೆ. ಶಾಸಕರು ದ್ವೇಷ ಬಿತ್ತುವುದನ್ನು ಕೈಬಿಟ್ಟು ಕೂಡಲೇ ರಾಹುಲ್ ಗಾಂಧಿಯವರ ವಿರುದ್ಧ ಹೇಳಿಕೆಗೆ ಕ್ಷಮೆ ಕೇಳಲಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಆಗ್ರಹಿಸಿದ್ದಾರೆ.

ಶಾಸಕರು ಮಾತಾಡುವಾಗ ತಾನೊಬ್ಬ ಸುಶಿಕ್ಷಿತ, ವೈದ್ಯ, ಶಾಸಕನಾಗಿದ್ದೇನೆ ಎಂಬುದ್ದಕ್ಕಾದರೂ ಬೆಲೆ ಕೊಡಬೇಕಿತ್ತು. ಅವರು ಮಾತನಾಡುದ ಮಾತು ಹಿಂದು ಸಮಾಜ ತಿಳಿಸಿಕೊಟ್ಟ ಸಂಸ್ಕೃತಿಯೇ? ಒಬ್ಬ ಹಿಂದು ಸಮಾಜದ ವ್ಯಕ್ತಿ ಎಂದು ಬಿಂಬಿಸಿಕೊಳ್ಳುತ್ತಿರುವ ವ್ಯಕ್ತಿ ಸಂವಿಧಾನದ ಹುದ್ದೆಗಾದರೂ ಗೌರವ ಕೊಡಬೇಕಿತ್ತು ಎಂದು ಅವರು ನುಡಿದರು.
ಪ್ರತಿಭಟನೆ ವೇಳೆ ಸಂಸದ ಬೃಜೇಶ್ ಚೌಟ ಅವರೂ ಇದ್ದರು. ಚೌಟರು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ಮಾಡುವುದಕ್ಕಿಂತ, ರಾಹುಲ್ ‌ಗಾಂಧಿಯವರು ಏನು ಮಾತನಾಡಿದ್ದಾರೆ, ಆ ಬಗ್ಗೆ ಸದನದಲ್ಲಿ ಪ್ರತಿಕ್ರಿಯಿಸುವ ಅವಕಾಶ ಇದೆ. ಅಲ್ಲಿ ಈ ವಿಚಾರದ ಬಗ್ಗೆ ಮಾತಾಡಲಿ. ಅದು ಬಿಟ್ಟು ರಸ್ತೆಯಲ್ಲಿ ನಿಂತು ಪ್ರತಿಭಟಿಸುವುದಲ್ಲ ಎಂದು ಪದ್ಮರಾಜ್ ನುಡಿದಿದ್ದಾರೆ.

ಪ್ರತಿಪಕ್ಷದ ನಾಯಕನಾಗಿ ರಾಹುಲ್‌ಗಾಂಧಿ ಸದನದಲ್ಲಿ ಮಾತನಾಡಿರುವುದನ್ನು ಹಿಂದು ಸಮಾಜ ಸೇರಿ ಸ್ವಾಮೀಜಿಗಳು ಸ್ವಾಗತಿಸಿದ್ದಾರೆ. ರಾಹುಲ್ ಗಾಂಧಿ ಹಿಂದು ಸಮಾಜವನ್ನು ಎಂದೂ ದೂಷಣೆ ಮಾಡಿಲ್ಲ. ಹಿಂದು ಸಮಾಜದ ಹೆಸರು ಹೇಳಿಕೊಂಡು ದ್ವೇಷಕಾರುತ್ತಿರುವ ಬಿಜೆಪಿ, ಆರ್.ಎಸ್.ಎಸ್.ನ ದ್ವೇಷದ ರಾಜಕಾರಣವನ್ನು ವಿರೋಧಿಸಿದ್ದಾರೆ ಎಂಬುದು ಸಮಸ್ತ ಭಾರತೀಯರಿಗೆ ತಿಳಿದಿದೆ. ಅದನ್ನು ಶಾಸಕರು ವಿಷಯಾಂತರ ಮಾಡಿ ಮತ್ತೆ ದ್ವೇಷ ಬಿತ್ತುವುದನ್ನು ಶಾಸಕರು ಕೈಬಿಟ್ಟು ಕೂಡಲೇ ರಾಹುಲ್ ಗಾಂಧಿಯವರ ವಿರುದ್ಧ ಹೇಳಿಕೆಗೆ ಕ್ಷಮೆ ಕೇಳಲಿ ಎಂದು ಈ ಮೂಲಕ ಆಗ್ರಹಿಸುತ್ತೇನೆ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು