2:14 PM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ರಾಹುಲ್ ವಿರುದ್ಧ ಹೇಳಿಕೆ ಶಾಸಕ ಡಾ. ಭರತ್ ಶೆಟ್ಟಿ ಅವರ ಸಂಸ್ಕೃತಿಯನ್ನು ಬಿಂಬಿಸುತ್ತದೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ

09/07/2024, 17:51

ಮಂಗಳೂರು(reporterkarnataka.com): ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯವರ ಕಪಾಳಕ್ಕೆ ಹೊಡೆಯಬೇಕು ಎಂಬ ಬಿಜೆಪಿ ಶಾಸಕ ಡಾ.ಭರತ್ ಶೆಟ್ಟಿ ಅವರ ಹೇಳಿಕೆ ಅವರ ಸಂಸ್ಕೃತಿ ಏನು ಎಂಬುದನ್ನು ತಿಳಿಸುತ್ತದೆ. ಶಾಸಕರು ದ್ವೇಷ ಬಿತ್ತುವುದನ್ನು ಕೈಬಿಟ್ಟು ಕೂಡಲೇ ರಾಹುಲ್ ಗಾಂಧಿಯವರ ವಿರುದ್ಧ ಹೇಳಿಕೆಗೆ ಕ್ಷಮೆ ಕೇಳಲಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಆಗ್ರಹಿಸಿದ್ದಾರೆ.

ಶಾಸಕರು ಮಾತಾಡುವಾಗ ತಾನೊಬ್ಬ ಸುಶಿಕ್ಷಿತ, ವೈದ್ಯ, ಶಾಸಕನಾಗಿದ್ದೇನೆ ಎಂಬುದ್ದಕ್ಕಾದರೂ ಬೆಲೆ ಕೊಡಬೇಕಿತ್ತು. ಅವರು ಮಾತನಾಡುದ ಮಾತು ಹಿಂದು ಸಮಾಜ ತಿಳಿಸಿಕೊಟ್ಟ ಸಂಸ್ಕೃತಿಯೇ? ಒಬ್ಬ ಹಿಂದು ಸಮಾಜದ ವ್ಯಕ್ತಿ ಎಂದು ಬಿಂಬಿಸಿಕೊಳ್ಳುತ್ತಿರುವ ವ್ಯಕ್ತಿ ಸಂವಿಧಾನದ ಹುದ್ದೆಗಾದರೂ ಗೌರವ ಕೊಡಬೇಕಿತ್ತು ಎಂದು ಅವರು ನುಡಿದರು.
ಪ್ರತಿಭಟನೆ ವೇಳೆ ಸಂಸದ ಬೃಜೇಶ್ ಚೌಟ ಅವರೂ ಇದ್ದರು. ಚೌಟರು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ಮಾಡುವುದಕ್ಕಿಂತ, ರಾಹುಲ್ ‌ಗಾಂಧಿಯವರು ಏನು ಮಾತನಾಡಿದ್ದಾರೆ, ಆ ಬಗ್ಗೆ ಸದನದಲ್ಲಿ ಪ್ರತಿಕ್ರಿಯಿಸುವ ಅವಕಾಶ ಇದೆ. ಅಲ್ಲಿ ಈ ವಿಚಾರದ ಬಗ್ಗೆ ಮಾತಾಡಲಿ. ಅದು ಬಿಟ್ಟು ರಸ್ತೆಯಲ್ಲಿ ನಿಂತು ಪ್ರತಿಭಟಿಸುವುದಲ್ಲ ಎಂದು ಪದ್ಮರಾಜ್ ನುಡಿದಿದ್ದಾರೆ.

ಪ್ರತಿಪಕ್ಷದ ನಾಯಕನಾಗಿ ರಾಹುಲ್‌ಗಾಂಧಿ ಸದನದಲ್ಲಿ ಮಾತನಾಡಿರುವುದನ್ನು ಹಿಂದು ಸಮಾಜ ಸೇರಿ ಸ್ವಾಮೀಜಿಗಳು ಸ್ವಾಗತಿಸಿದ್ದಾರೆ. ರಾಹುಲ್ ಗಾಂಧಿ ಹಿಂದು ಸಮಾಜವನ್ನು ಎಂದೂ ದೂಷಣೆ ಮಾಡಿಲ್ಲ. ಹಿಂದು ಸಮಾಜದ ಹೆಸರು ಹೇಳಿಕೊಂಡು ದ್ವೇಷಕಾರುತ್ತಿರುವ ಬಿಜೆಪಿ, ಆರ್.ಎಸ್.ಎಸ್.ನ ದ್ವೇಷದ ರಾಜಕಾರಣವನ್ನು ವಿರೋಧಿಸಿದ್ದಾರೆ ಎಂಬುದು ಸಮಸ್ತ ಭಾರತೀಯರಿಗೆ ತಿಳಿದಿದೆ. ಅದನ್ನು ಶಾಸಕರು ವಿಷಯಾಂತರ ಮಾಡಿ ಮತ್ತೆ ದ್ವೇಷ ಬಿತ್ತುವುದನ್ನು ಶಾಸಕರು ಕೈಬಿಟ್ಟು ಕೂಡಲೇ ರಾಹುಲ್ ಗಾಂಧಿಯವರ ವಿರುದ್ಧ ಹೇಳಿಕೆಗೆ ಕ್ಷಮೆ ಕೇಳಲಿ ಎಂದು ಈ ಮೂಲಕ ಆಗ್ರಹಿಸುತ್ತೇನೆ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು