2:50 PM Tuesday17 - February 2026
ಬ್ರೇಕಿಂಗ್ ನ್ಯೂಸ್
ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,…

ಇತ್ತೀಚಿನ ಸುದ್ದಿ

ರಾಹುಲ್ ವಿರುದ್ಧ ಹೇಳಿಕೆ ಶಾಸಕ ಡಾ. ಭರತ್ ಶೆಟ್ಟಿ ಅವರ ಸಂಸ್ಕೃತಿಯನ್ನು ಬಿಂಬಿಸುತ್ತದೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ

09/07/2024, 17:51

ಮಂಗಳೂರು(reporterkarnataka.com): ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯವರ ಕಪಾಳಕ್ಕೆ ಹೊಡೆಯಬೇಕು ಎಂಬ ಬಿಜೆಪಿ ಶಾಸಕ ಡಾ.ಭರತ್ ಶೆಟ್ಟಿ ಅವರ ಹೇಳಿಕೆ ಅವರ ಸಂಸ್ಕೃತಿ ಏನು ಎಂಬುದನ್ನು ತಿಳಿಸುತ್ತದೆ. ಶಾಸಕರು ದ್ವೇಷ ಬಿತ್ತುವುದನ್ನು ಕೈಬಿಟ್ಟು ಕೂಡಲೇ ರಾಹುಲ್ ಗಾಂಧಿಯವರ ವಿರುದ್ಧ ಹೇಳಿಕೆಗೆ ಕ್ಷಮೆ ಕೇಳಲಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಆಗ್ರಹಿಸಿದ್ದಾರೆ.

ಶಾಸಕರು ಮಾತಾಡುವಾಗ ತಾನೊಬ್ಬ ಸುಶಿಕ್ಷಿತ, ವೈದ್ಯ, ಶಾಸಕನಾಗಿದ್ದೇನೆ ಎಂಬುದ್ದಕ್ಕಾದರೂ ಬೆಲೆ ಕೊಡಬೇಕಿತ್ತು. ಅವರು ಮಾತನಾಡುದ ಮಾತು ಹಿಂದು ಸಮಾಜ ತಿಳಿಸಿಕೊಟ್ಟ ಸಂಸ್ಕೃತಿಯೇ? ಒಬ್ಬ ಹಿಂದು ಸಮಾಜದ ವ್ಯಕ್ತಿ ಎಂದು ಬಿಂಬಿಸಿಕೊಳ್ಳುತ್ತಿರುವ ವ್ಯಕ್ತಿ ಸಂವಿಧಾನದ ಹುದ್ದೆಗಾದರೂ ಗೌರವ ಕೊಡಬೇಕಿತ್ತು ಎಂದು ಅವರು ನುಡಿದರು.
ಪ್ರತಿಭಟನೆ ವೇಳೆ ಸಂಸದ ಬೃಜೇಶ್ ಚೌಟ ಅವರೂ ಇದ್ದರು. ಚೌಟರು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ಮಾಡುವುದಕ್ಕಿಂತ, ರಾಹುಲ್ ‌ಗಾಂಧಿಯವರು ಏನು ಮಾತನಾಡಿದ್ದಾರೆ, ಆ ಬಗ್ಗೆ ಸದನದಲ್ಲಿ ಪ್ರತಿಕ್ರಿಯಿಸುವ ಅವಕಾಶ ಇದೆ. ಅಲ್ಲಿ ಈ ವಿಚಾರದ ಬಗ್ಗೆ ಮಾತಾಡಲಿ. ಅದು ಬಿಟ್ಟು ರಸ್ತೆಯಲ್ಲಿ ನಿಂತು ಪ್ರತಿಭಟಿಸುವುದಲ್ಲ ಎಂದು ಪದ್ಮರಾಜ್ ನುಡಿದಿದ್ದಾರೆ.

ಪ್ರತಿಪಕ್ಷದ ನಾಯಕನಾಗಿ ರಾಹುಲ್‌ಗಾಂಧಿ ಸದನದಲ್ಲಿ ಮಾತನಾಡಿರುವುದನ್ನು ಹಿಂದು ಸಮಾಜ ಸೇರಿ ಸ್ವಾಮೀಜಿಗಳು ಸ್ವಾಗತಿಸಿದ್ದಾರೆ. ರಾಹುಲ್ ಗಾಂಧಿ ಹಿಂದು ಸಮಾಜವನ್ನು ಎಂದೂ ದೂಷಣೆ ಮಾಡಿಲ್ಲ. ಹಿಂದು ಸಮಾಜದ ಹೆಸರು ಹೇಳಿಕೊಂಡು ದ್ವೇಷಕಾರುತ್ತಿರುವ ಬಿಜೆಪಿ, ಆರ್.ಎಸ್.ಎಸ್.ನ ದ್ವೇಷದ ರಾಜಕಾರಣವನ್ನು ವಿರೋಧಿಸಿದ್ದಾರೆ ಎಂಬುದು ಸಮಸ್ತ ಭಾರತೀಯರಿಗೆ ತಿಳಿದಿದೆ. ಅದನ್ನು ಶಾಸಕರು ವಿಷಯಾಂತರ ಮಾಡಿ ಮತ್ತೆ ದ್ವೇಷ ಬಿತ್ತುವುದನ್ನು ಶಾಸಕರು ಕೈಬಿಟ್ಟು ಕೂಡಲೇ ರಾಹುಲ್ ಗಾಂಧಿಯವರ ವಿರುದ್ಧ ಹೇಳಿಕೆಗೆ ಕ್ಷಮೆ ಕೇಳಲಿ ಎಂದು ಈ ಮೂಲಕ ಆಗ್ರಹಿಸುತ್ತೇನೆ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು