1:11 AM Thursday23 - April 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ…

ಇತ್ತೀಚಿನ ಸುದ್ದಿ

ರಾಹುಲ್ ವಿರುದ್ಧ ಹೇಳಿಕೆ ಶಾಸಕ ಡಾ. ಭರತ್ ಶೆಟ್ಟಿ ಅವರ ಸಂಸ್ಕೃತಿಯನ್ನು ಬಿಂಬಿಸುತ್ತದೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ

09/07/2024, 17:51

ಮಂಗಳೂರು(reporterkarnataka.com): ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯವರ ಕಪಾಳಕ್ಕೆ ಹೊಡೆಯಬೇಕು ಎಂಬ ಬಿಜೆಪಿ ಶಾಸಕ ಡಾ.ಭರತ್ ಶೆಟ್ಟಿ ಅವರ ಹೇಳಿಕೆ ಅವರ ಸಂಸ್ಕೃತಿ ಏನು ಎಂಬುದನ್ನು ತಿಳಿಸುತ್ತದೆ. ಶಾಸಕರು ದ್ವೇಷ ಬಿತ್ತುವುದನ್ನು ಕೈಬಿಟ್ಟು ಕೂಡಲೇ ರಾಹುಲ್ ಗಾಂಧಿಯವರ ವಿರುದ್ಧ ಹೇಳಿಕೆಗೆ ಕ್ಷಮೆ ಕೇಳಲಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಆಗ್ರಹಿಸಿದ್ದಾರೆ.

ಶಾಸಕರು ಮಾತಾಡುವಾಗ ತಾನೊಬ್ಬ ಸುಶಿಕ್ಷಿತ, ವೈದ್ಯ, ಶಾಸಕನಾಗಿದ್ದೇನೆ ಎಂಬುದ್ದಕ್ಕಾದರೂ ಬೆಲೆ ಕೊಡಬೇಕಿತ್ತು. ಅವರು ಮಾತನಾಡುದ ಮಾತು ಹಿಂದು ಸಮಾಜ ತಿಳಿಸಿಕೊಟ್ಟ ಸಂಸ್ಕೃತಿಯೇ? ಒಬ್ಬ ಹಿಂದು ಸಮಾಜದ ವ್ಯಕ್ತಿ ಎಂದು ಬಿಂಬಿಸಿಕೊಳ್ಳುತ್ತಿರುವ ವ್ಯಕ್ತಿ ಸಂವಿಧಾನದ ಹುದ್ದೆಗಾದರೂ ಗೌರವ ಕೊಡಬೇಕಿತ್ತು ಎಂದು ಅವರು ನುಡಿದರು.
ಪ್ರತಿಭಟನೆ ವೇಳೆ ಸಂಸದ ಬೃಜೇಶ್ ಚೌಟ ಅವರೂ ಇದ್ದರು. ಚೌಟರು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ಮಾಡುವುದಕ್ಕಿಂತ, ರಾಹುಲ್ ‌ಗಾಂಧಿಯವರು ಏನು ಮಾತನಾಡಿದ್ದಾರೆ, ಆ ಬಗ್ಗೆ ಸದನದಲ್ಲಿ ಪ್ರತಿಕ್ರಿಯಿಸುವ ಅವಕಾಶ ಇದೆ. ಅಲ್ಲಿ ಈ ವಿಚಾರದ ಬಗ್ಗೆ ಮಾತಾಡಲಿ. ಅದು ಬಿಟ್ಟು ರಸ್ತೆಯಲ್ಲಿ ನಿಂತು ಪ್ರತಿಭಟಿಸುವುದಲ್ಲ ಎಂದು ಪದ್ಮರಾಜ್ ನುಡಿದಿದ್ದಾರೆ.

ಪ್ರತಿಪಕ್ಷದ ನಾಯಕನಾಗಿ ರಾಹುಲ್‌ಗಾಂಧಿ ಸದನದಲ್ಲಿ ಮಾತನಾಡಿರುವುದನ್ನು ಹಿಂದು ಸಮಾಜ ಸೇರಿ ಸ್ವಾಮೀಜಿಗಳು ಸ್ವಾಗತಿಸಿದ್ದಾರೆ. ರಾಹುಲ್ ಗಾಂಧಿ ಹಿಂದು ಸಮಾಜವನ್ನು ಎಂದೂ ದೂಷಣೆ ಮಾಡಿಲ್ಲ. ಹಿಂದು ಸಮಾಜದ ಹೆಸರು ಹೇಳಿಕೊಂಡು ದ್ವೇಷಕಾರುತ್ತಿರುವ ಬಿಜೆಪಿ, ಆರ್.ಎಸ್.ಎಸ್.ನ ದ್ವೇಷದ ರಾಜಕಾರಣವನ್ನು ವಿರೋಧಿಸಿದ್ದಾರೆ ಎಂಬುದು ಸಮಸ್ತ ಭಾರತೀಯರಿಗೆ ತಿಳಿದಿದೆ. ಅದನ್ನು ಶಾಸಕರು ವಿಷಯಾಂತರ ಮಾಡಿ ಮತ್ತೆ ದ್ವೇಷ ಬಿತ್ತುವುದನ್ನು ಶಾಸಕರು ಕೈಬಿಟ್ಟು ಕೂಡಲೇ ರಾಹುಲ್ ಗಾಂಧಿಯವರ ವಿರುದ್ಧ ಹೇಳಿಕೆಗೆ ಕ್ಷಮೆ ಕೇಳಲಿ ಎಂದು ಈ ಮೂಲಕ ಆಗ್ರಹಿಸುತ್ತೇನೆ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು