5:10 AM Thursday3 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ರಾಹುಲ್ ವಿರುದ್ಧ ಹೇಳಿಕೆ ಶಾಸಕ ಡಾ. ಭರತ್ ಶೆಟ್ಟಿ ಅವರ ಸಂಸ್ಕೃತಿಯನ್ನು ಬಿಂಬಿಸುತ್ತದೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ

09/07/2024, 17:51

ಮಂಗಳೂರು(reporterkarnataka.com): ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯವರ ಕಪಾಳಕ್ಕೆ ಹೊಡೆಯಬೇಕು ಎಂಬ ಬಿಜೆಪಿ ಶಾಸಕ ಡಾ.ಭರತ್ ಶೆಟ್ಟಿ ಅವರ ಹೇಳಿಕೆ ಅವರ ಸಂಸ್ಕೃತಿ ಏನು ಎಂಬುದನ್ನು ತಿಳಿಸುತ್ತದೆ. ಶಾಸಕರು ದ್ವೇಷ ಬಿತ್ತುವುದನ್ನು ಕೈಬಿಟ್ಟು ಕೂಡಲೇ ರಾಹುಲ್ ಗಾಂಧಿಯವರ ವಿರುದ್ಧ ಹೇಳಿಕೆಗೆ ಕ್ಷಮೆ ಕೇಳಲಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಆಗ್ರಹಿಸಿದ್ದಾರೆ.

ಶಾಸಕರು ಮಾತಾಡುವಾಗ ತಾನೊಬ್ಬ ಸುಶಿಕ್ಷಿತ, ವೈದ್ಯ, ಶಾಸಕನಾಗಿದ್ದೇನೆ ಎಂಬುದ್ದಕ್ಕಾದರೂ ಬೆಲೆ ಕೊಡಬೇಕಿತ್ತು. ಅವರು ಮಾತನಾಡುದ ಮಾತು ಹಿಂದು ಸಮಾಜ ತಿಳಿಸಿಕೊಟ್ಟ ಸಂಸ್ಕೃತಿಯೇ? ಒಬ್ಬ ಹಿಂದು ಸಮಾಜದ ವ್ಯಕ್ತಿ ಎಂದು ಬಿಂಬಿಸಿಕೊಳ್ಳುತ್ತಿರುವ ವ್ಯಕ್ತಿ ಸಂವಿಧಾನದ ಹುದ್ದೆಗಾದರೂ ಗೌರವ ಕೊಡಬೇಕಿತ್ತು ಎಂದು ಅವರು ನುಡಿದರು.
ಪ್ರತಿಭಟನೆ ವೇಳೆ ಸಂಸದ ಬೃಜೇಶ್ ಚೌಟ ಅವರೂ ಇದ್ದರು. ಚೌಟರು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ಮಾಡುವುದಕ್ಕಿಂತ, ರಾಹುಲ್ ‌ಗಾಂಧಿಯವರು ಏನು ಮಾತನಾಡಿದ್ದಾರೆ, ಆ ಬಗ್ಗೆ ಸದನದಲ್ಲಿ ಪ್ರತಿಕ್ರಿಯಿಸುವ ಅವಕಾಶ ಇದೆ. ಅಲ್ಲಿ ಈ ವಿಚಾರದ ಬಗ್ಗೆ ಮಾತಾಡಲಿ. ಅದು ಬಿಟ್ಟು ರಸ್ತೆಯಲ್ಲಿ ನಿಂತು ಪ್ರತಿಭಟಿಸುವುದಲ್ಲ ಎಂದು ಪದ್ಮರಾಜ್ ನುಡಿದಿದ್ದಾರೆ.

ಪ್ರತಿಪಕ್ಷದ ನಾಯಕನಾಗಿ ರಾಹುಲ್‌ಗಾಂಧಿ ಸದನದಲ್ಲಿ ಮಾತನಾಡಿರುವುದನ್ನು ಹಿಂದು ಸಮಾಜ ಸೇರಿ ಸ್ವಾಮೀಜಿಗಳು ಸ್ವಾಗತಿಸಿದ್ದಾರೆ. ರಾಹುಲ್ ಗಾಂಧಿ ಹಿಂದು ಸಮಾಜವನ್ನು ಎಂದೂ ದೂಷಣೆ ಮಾಡಿಲ್ಲ. ಹಿಂದು ಸಮಾಜದ ಹೆಸರು ಹೇಳಿಕೊಂಡು ದ್ವೇಷಕಾರುತ್ತಿರುವ ಬಿಜೆಪಿ, ಆರ್.ಎಸ್.ಎಸ್.ನ ದ್ವೇಷದ ರಾಜಕಾರಣವನ್ನು ವಿರೋಧಿಸಿದ್ದಾರೆ ಎಂಬುದು ಸಮಸ್ತ ಭಾರತೀಯರಿಗೆ ತಿಳಿದಿದೆ. ಅದನ್ನು ಶಾಸಕರು ವಿಷಯಾಂತರ ಮಾಡಿ ಮತ್ತೆ ದ್ವೇಷ ಬಿತ್ತುವುದನ್ನು ಶಾಸಕರು ಕೈಬಿಟ್ಟು ಕೂಡಲೇ ರಾಹುಲ್ ಗಾಂಧಿಯವರ ವಿರುದ್ಧ ಹೇಳಿಕೆಗೆ ಕ್ಷಮೆ ಕೇಳಲಿ ಎಂದು ಈ ಮೂಲಕ ಆಗ್ರಹಿಸುತ್ತೇನೆ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು