9:38 AM Sunday3 - August 2025
ಬ್ರೇಕಿಂಗ್ ನ್ಯೂಸ್
SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ…

ಇತ್ತೀಚಿನ ಸುದ್ದಿ

Raichur | ಅಂಗನವಾಡಿ ಕಾರ್ಯಕರ್ತೆಯರಿಂದ ಮೊಟ್ಟೆ ಹಣ ಸಂಗ್ರಹ ಆರೋಪ: ದೇವದುರ್ಗದ ವಲಯ ಮೇಲ್ವಿಚಾರಕಿ ಅಮಾನತು

05/04/2025, 16:21

ಬೆಂಗಳೂರು(reporterkarnataka.com): ಅಂಗನವಾಡಿ ಮಕ್ಕಳಿಗೆ ನೀಡಲಾಗುವ ಮೊಟ್ಟೆ ಖರೀದಿಯಲ್ಲಿ ನಿಯಮಬಾಹಿರವಾಗಿ ಹಣ ಸಂಗ್ರಹದ ಆರೋಪದಡಿ ದೇವದುರ್ಗ ವಲಯದ ಮೇಲ್ವಿಚಾರಕಿ ಕಮಲಾಕ್ಷಿ ಎಂಬುವವರನ್ನು ಅಮಾನತುಗೊಳಿಸಿ ರಾಯಚೂರು ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಾಂಡ್ವೆ ರಾಹುಲ್ ತುಕಾರಾಮ್ ಆದೇಶ ಹೊರಡಿಸಿದ್ದಾರೆ.
ಕಮಲಾಕ್ಷಿ ಅವರ ವಿರುದ್ಧ ಆರೋಪಗಳ ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಸೇವೆಯಿಂದ ಅಮಾನತುಗೊಳಿಸಲಾಗಿದೆ. ಆಪಾದಿತರು ಕರ್ನಾಟಕ ನಾಗರೀಕ ಸೇವಾ ನಿಯಮಾವಳಿಗಳು 1958ರ ನಿಯಮ 58 ರನ್ವಯ ಜೀವನಾಧಾರ ಭತ್ಯೆಯನ್ನು ಪಡೆಯಲು ಅರ್ಹರಿದ್ದು, ಸಕ್ಷಮ ಪ್ರಾಧಿಕಾರದ ಅನುಮತಿಯಿಲ್ಲದೆ ಕೇಂದ್ರ ಸ್ಥಾನ ಬಿಡುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.* *ಪ್ರಕರಣದ ಹಿನ್ನೆಲೆ:*
ದೇವದುರ್ಗ ವಲಯದ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯ ಮಸರಕಲ್-ಬಿ ವಲಯದ ಅಂಗನವಾಡಿ ಕಾರ್ಯಕರ್ತೆಯರಿಂದ ‘ನಿಯಮಬಾಹಿರ ಮೊಟ್ಟೆ ಹಣ ಸಂಗ್ರಹ’ ಎಂಬ ಶೀರ್ಷಿಕೆಯಡಿ ಕೆಲವು ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಗಳಲ್ಲಿ ಸುದ್ದಿ ಹಾಗೂ ವಿಡಿಯೋ ತುಣುಕು ಪ್ರಸಾರವಾಗಿತ್ತು. ಈ ಕುರಿತು ಸ್ಪಷ್ಟೀಕರಣ ನೀಡುವಂತೆ ಮೇಲ್ವಿಚಾರಕಿ ಕಮಲಾಕ್ಷಿ ಅವರಿಗೆ ನೋಟಿಸ್ ನೀಡಲಾಗಿತ್ತು. ಮಾರ್ಗಸೂಚಿಯನ್ವಯ ಮೊಟ್ಟೆ ಹಣವು ಬಾಲವಿಕಾಸ ಸಲಹಾ ಸಮಿತಿಯ ಜಂಟಿ ಖಾತೆಗೆ ಜಮಾವಾಗಿರುತ್ತದೆ ಮತ್ತು ಅಂಗನವಾಡಿ ಕಾರ್ಯಕರ್ತೆಯರ ವೈಯಕ್ತಿಕ ಖಾತೆಗೆ ಜಮಾ ಆಗಿರುವುದಿಲ್ಲ ಎಂದು ತಿಳಿಸಿದ್ದರು.
ಆದರೆ, ಮೊಟ್ಟೆ ಹಣವನ್ನು ಕಾರ್ಯಕರ್ತೆಯರಿಂದ ಕೇಳಿರುವ ವಿಷಯದ ಬಗ್ಗೆ ಮಾಧ್ಯಮಗಳಲ್ಲಿ ಬಂದ ವರದಿ ಬಗ್ಗೆ ಸೂಕ್ತ ರೀತಿಯ ಉತ್ತರವನ್ನು ನೀಡಿರಲಿಲ್ಲ. ಅಲ್ಲದೆ ಇಲಾಖೆಗೆ ಮುಜುಗರವಾಗುವಂತೆ ವರ್ತಿಸಿದ್ದರು. ಈ ಹಿನ್ನೆಲೆಯಲ್ಲಿ ಕಮಲಾಕ್ಷಿ ವಿರುದ್ಧ ಆರೋಪಗಳ ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ, ಮುಂದಿನ ಆದೇಶದವರೆಗೆ ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು