5:53 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

Raichuru | ರಾಜ್ಯದಲ್ಲಿ ಮತ್ತೊಂದು ಘೋರ ದುರಂತ : ನಾಮಫಲಕ ಕುಸಿದು ಬಿದ್ದು ಇಬ್ಬರು ಮಕ್ಕಳು ದಾರುಣ ಸಾವು

19/04/2026, 11:32

ರಾಯಚೂರು(reporterkarnataka.com): ರಾಯಚೂರು ತಾಲೂಕಿನ ಬೈಲ್ ಮರ್ಚಡ್ ಗ್ರಾಮದಲ್ಲಿ ಇಂದು ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಗ್ರಾಮದ ಸಮುದಾಯ ಭವನದ ನಾಮಫಲಕದ ಸಿಮೆಂಟ್ ಬೋರ್ಡ್ ಕುಸಿದು ಬಿದ್ದ ಪರಿಣಾಮ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಘಟನೆಯಲ್ಲಿ ನಾಲ್ವರಿಗೆ ಗಂಭೀರವಾದ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸಮ್ಮ ಎನ್ನುವ ಮಹಿಳೆಯ ಒಂದು ಕಾಲು ಕಟ್ ಆಗಿದ್ದು, ಪುತ್ರಿ ಲಕ್ಷ್ಮಿ ಎರಡು ಕಾಲುಗಳು ಸಹ ಕಟ್ ಆಗಿವೆ. ವಿಶಾಲಮ್ಮ (20) ಹಾಗೂ ಎಲ್ಲಮ್ಮ (4) ಎಂಬ ಬಾಲಕಿಗೆ ಗಂಭೀರವಾದ ಗಾಯಗಳಾಗಿದ್ದು ರಾಯಚೂರಿನ ಒಪೆಕ್ ಆಸ್ಪತ್ರೆಗೆ ದಾಖಲಿಸಿ ನಾಲ್ವರಿಗೂ ಚಿಕಿತ್ಸೆ ನೀಡಲಾಗುತ್ತಿದೆ. ಗ್ರಾಮದಲ್ಲಿ ನಿನ್ನೆ ರಾತ್ರಿ ಬಯಲಾಟ ನೋಡುತ್ತಿದ್ದ ಗ್ರಾಮಸ್ಥರು, ಸಮುದಾಯ ಭವನದ ಕಟ್ಟೆಯ ಕೆಳಗೆ ಕೂತು ಬೈರಾಟ ವೀಕ್ಷಣೆ ಮಾಡುತ್ತಿದ್ದರು. ಈ ವೇಳೆ ನಾಮಫಲಕದ ಸಿಮೆಂಟ್ ಬೋರ್ಡ್ ಕುಸಿದು ದುರಂತ ಸಂಭವಿಸಿದೆ ಮಾನ್ವಿ ಪೊಲೀಸ್ ಠಾಣೆಯಲ್ಲಿ ಕುರಿತು ಪ್ರಕರಣ ದಾಖಲಾಗಿದೆ.
*ದುರಂತದ ಹಿನ್ನೆಲೆ:* ಮಕ್ಕಳು ನಾಮಫಲಕದ ಬಳಿ ಇದ್ದ ಸಂದರ್ಭದಲ್ಲಿ ಈ ಅನಾಹುತ ಸಂಭವಿಸಿದೆ ಎನ್ನಲಾಗಿದೆ. ಬೃಹತ್ ಗಾತ್ರದ ಸಿಮೆಂಟ್ ಬೋರ್ಡ್ ಇದ್ದಕ್ಕಿದ್ದಂತೆ ಕುಸಿದು ಮಕ್ಕಳ ಮೇಲೆ ಬಿದ್ದಿದೆ. ಬೋರ್ಡ್‌ನ ಭಾರಕ್ಕೆ ಸಿಲುಕಿದ ಮಕ್ಕಳು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಈ ದೃಶ್ಯ ಕಂಡು ಗ್ರಾಮಸ್ಥರು ಮಮ್ಮಲ ಮರುಗಿದ್ದಾರೆ. ಮೃತ ಮಕ್ಕಳನ್ನ ಒಂದೂವರೆ ವರ್ಷದ ಸಮಾನ್ವಿತಾ ಹಾಗೂ 8 ವರ್ಷದ ವಿಶ್ವನಾಥ್ ಎಂದು ತಿಳಿದುಬಂದಿದೆ.

*ಗ್ರಾಮಸ್ಥರ ಆಕ್ರೋಶ:* “ಯಾವುದೇ ಮುನ್ನೆಚ್ಚರಿಕೆ ಇಲ್ಲದೆ ನಿರ್ಮಿಸಲಾದ ಇಂತಹ ನಾಮಫಲಕಗಳು ಸಾವಿನ ಬಲೆಗಳಾಗಿವೆ” ಎಂದು ಗ್ರಾಮಸ್ಥರು ಕಿಡಿಕಾರಿದ್ದಾರೆ. ಕಳಪೆ ಕಾಮಗಾರಿಯೇ ಮಕ್ಕಳ ಸಾವಿಗೆ ನೇರ ಕಾರಣ ಎಂದು ಆರೋಪಿಸಿರುವ ಸ್ಥಳೀಯರು, ಘಟನೆಗೆ ಕಾರಣರಾದ ಗುತ್ತಿಗೆದಾರರು ಮತ್ತು ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ್ದಾರೆ. ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ಮೌನ ಆವರಿಸಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು