11:54 AM Sunday28 - June 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ…

ಇತ್ತೀಚಿನ ಸುದ್ದಿ

Raichuru | ಪತ್ರಕರ್ತರ ರಕ್ಷಣೆ ಕಾಯ್ದೆ ಜಾರಿಗೆ ಬರಲಿ: ಡಾ. ಎಸ್. ಎಸ್. ಪಾಟೀಲ್ ಹುಬ್ಬಳ್ಳಿ

30/09/2025, 20:56

ವಿರೂಪಾಕ್ಷ ಸ್ವಾಮಿ ಮಸ್ಕಿ ರಾಯಚೂರು

info.reporterkarnataka@gmail.com

ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಪತ್ರಿಕಾ ರಂಗಕ್ಕೆ ತನ್ನದೇ ಆದ ಇತಿಹಾಸವಿದ್ದು ಅಂತಹ ನಿಟ್ಟಿನಲ್ಲಿ ಮಸ್ಕಿ ತಾಲೂಕು ಕರ್ನಾಟಕ ತಾಲೂಕು ಘಟಕದ ವತಿಯಿಂದ ನಾಲ್ಕನೇ ವರ್ಷದ ವಿಶ್ವ ಪತ್ರಿಕಾ ದಿನಾಚರಣೆ ಹಾಗೂ ಪ್ರಜಾ ಪವರ್ ಹಾಗೂ ಎಂ. ಕೆ. ಎಸ್. ವಾಹಿನಿಯ ಸಂಭ್ರಮೋತ್ಸವ ಪತ್ರಕರ್ತರ ಹಬ್ಬ ಕಾರ್ಯಕ್ರಮ ನಡೆಯಿತು.
ಪೂಜ್ಯ ಶ್ರೀ ಅಮರೇಶ್ ಗೌಡನಬಾವಿ (ರಾಜ್ಯ ಉಪಾಧ್ಯಕ್ಷರು) ಎಂ. ಇಸಾಕ್ ತಕಲಕೋಟೆ, ಡಾ. ಎಸ್. ಎಸ್. ಪಾಟೀಲ್ ಹುಬ್ಬಳ್ಳಿ, ಡಾ. ಜಲಾನುದ್ದೀನ್ ಅಕ್ಬರ್, ನಗರಸಭೆ ಅಧ್ಯಕ್ಷೆ ಮಂಜುಳಾ ಪ್ರಭುರಾಜ್ ಹಾಗೂ ಅಧ್ಯಕ್ಷ ವಿರೂಪಾಕ್ಷಯ್ಯ ಸ್ವಾಮಿ ಶಿವು ಸಾಲಿಮಠ ಸೇರಿದಂತೆ ಅನೇಕರು ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ವೇದಿಕೆಯನ್ನು ಉದ್ದೇಶಿಸಿ ಪ್ರಾಸ್ತಾವಿಕ ಮಾತುಗಳನ್ನು ಡಾ. ಜಲಾನುದ್ದೀನ್ ಅಕ್ಬರ್ ಆಡಿದರು. ಮಂಜುಳಾ ಪ್ರಭುರಾಜ್ , ಎಂ. ಇಸಾಕ್, ವಿರೂಪಾಕ್ಷಯ್ಯ ಸಾಲಿಮಠ, ವೆಂಕನಗೌಡ (ಶಿಕ್ಷಕರು ಸಿಂಧನೂರು) ಪತ್ರಿಕೆ ಬಗ್ಗೆ ಬದಲಾಗುತ್ತಿರುವ ಪತ್ರಿಕೋದ್ಯಮದ ಬಗ್ಗೆ ಮಾತನಾಡಿದರು.
ಡಾ. ಎಸ್. ಎಸ್. ಪಾಟೀಲ್ ಮಾತನಾಡಿ, ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಪತ್ರಕರ್ತರಿಗೆ ರಕ್ಷಣೆ ಕಾಯ್ದೆ ಜಾರಿಗೆ ತರಬೇಕು, ಪತ್ರಕರ್ತರಿಗೆ ಮೂಲ ಸೌಕರ್ಯಗಳನ್ನು ಒದಗಿಸಿಕೊಡಬೇಕು, ಪತ್ರಕರ್ತರಿಗೆ ಬಸ್ ಪಾಸ್ ಕೇವಲ ಮಹಿಳೆಯರಿಗೆ ಆಧಾರ್ ಕಾರ್ಡ್ ತೋರಿಸಿದ್ದರು ಅದೇ ರೀತಿಯಲ್ಲಿ ಪತ್ರಕರ್ತರಿಗೂ ಪತ್ರಕರ್ತರ ಐಡಿ ಕಾರ್ಡ್ ತೋರಿಸಿದರೆ ಬಸ್ಸಿನಲ್ಲಿ ಉಚಿತವಾಗಿ ಬಿಡಬೇಕು ಎಂದು ಹೇಳಿದರು.
ಪ್ರಜಾ ಪವರ್ ಎನ್ಕೆಎಸ್ ಸುದ್ದಿ ವಾಹಿನಿ ಸಂಭ್ರಮಾಚರಣೆಗೆ ಶಶಿಗೆ ನೀರು ಹಾಕುವ ಮೂಲಕ ರಿಬ್ಬನ್ ಕಟ್ ಮಾಡುವ ಮೂಲಕ ಮಾಡುವ ಮೂಲಕ ಪತ್ರಕರ್ತರ ಹಬ್ಬ ಆಚರಣೆ ಮಾಡಲಾಯಿತು. ಎಂ. ಕೆ. ಎಸ್. ಸುದ್ದಿ ವಾಹಿನಿ ಸಮಾಜದಲ್ಲಿ ಒಳ್ಳೆಯ ಹೆಸರು ಮಾಡಿದೆ. ನಾವು ಎಲ್ಲರೂ ಮೂಲಕ ಪ್ರಜಾ ಪವರ್ ವಾಹಿನಿ ಎಲ್ಲರೂ ಫಾಲೋ ಮಾಡಿ ಎಂದು ಎಸ್ ಎಸ್ ಪಾಟೀಲ್ ಹೇಳಿದರು.


ಈ ಕಾರ್ಯಕ್ರಮದಲ್ಲಿ ಎಲ್ಲಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ದಾವಣಗೆರೆ, ಹಾವೇರಿ, ಚಿತ್ರದುರ್ಗ, ಬೆಂಗಳೂರು, ಹುಬ್ಬಳ್ಳಿ, ಮೈಸೂರು, ರಾಯಚೂರು, ಸಿಂಧನೂರು, ಮಾನ್ವಿ, ಸಿರಿವಾರ್, ಬಾಗಲಕೋಟೆ ಇಲ್ಕಲ್ ಪಟ್ಟಣದಿಂದ ಪತ್ರಕರ್ತರು ಆಗಮಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು