9:55 PM Sunday5 - October 2025
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಸಂಬಂಧಿಕರ ಸಾವಿಗೆ ತೆರಳಿದ್ದ ಯುವಕ ಹಾರಂಗಿ ಮುಖ್ಯ ನಾಲೆಯಲ್ಲಿ ಈಜಲು ಹೋಗಿ… ಮೈಸೂರು ದಸರಾ ಜಂಬೂ ಸವಾರಿ: ಚಿತ್ರದುರ್ಗದ ಸ್ತಬ್ದಚಿತ್ರಕ್ಕೆ ಪ್ರಥಮ ಸ್ಥಾನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ

ಇತ್ತೀಚಿನ ಸುದ್ದಿ

Raichur | ಮಸ್ಕಿ: 55ನೇ ವರ್ಷದ ಮಹಾದೇವಿ ಪುರಾಣ ಮಹೋತ್ಸವ, ರಥೋತ್ಸವ

05/10/2025, 21:48

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಮಸ್ಕಿ ರಾಯಚೂರು

info.reporterkarnata@gmail.com

ಮಸ್ಕಿ ಪಟ್ಟಣದ ಭ್ರಮರಾಂಬ ಕಲ್ಯಾಣ ಮಂಟಪದಲ್ಲಿ 55ನೇ ವರ್ಷದ ಮಹಾದೇವಿ ಪುರಾಣ ಮಹೋತ್ಸವ ರಥೋತ್ಸವ ಪರಂಪರೆಯ ಗುರುಗಳಾದ ಶ್ರೀ ಷಟಸ್ಥಲ ಬ್ರಹ್ಮ ಪರ ರುದ್ರಮುನಿ ಶಿವಾಚಾರ್ಯ ಮಹಾಸ್ವಾಮಿಗಳ ನೇತೃತ್ವದಲ್ಲಿ ನಡೆಯಿತು.
ಪ್ರತಿವರ್ಷದಂತೆ ಈ ವರ್ಷವೂ ಮಹಾದೇವಿ ಪುರಾಣ ಮಸ್ಕಿ ದಸರಾ ಉತ್ಸವ ಮೈಸೂರು ದಸರಾ ಜಂಬೂಸವಾರಿ ಮಾದರಿಯಲ್ಲಿ ವೇದಮೂರ್ತಿ ಚಂದ್ರಯ್ಯ ತಾರಾನಗರ ಸಂಡೂರು ತರ ಕಲಾತಂಡದಿಂದ ವೀರಗಾಸೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರಿಂದ ವಿವಿಧ ಜನ ಜಾನಪದ ಕಲಾತಂಡ ವೈಭವ ಶ್ರೀ ಬ್ರಹ್ಮರಂಭದ ದಸರಾ ವೈಭವ ದಂದು ಬೆಳಿಗ್ಗೆ 6:00 ಗಂಟೆಗೆ ನಡೆಯುವುದು.

ಇಂದು ನಡೆದ ಕಾರ್ಯಕ್ರಮದಲ್ಲಿ ಅಂತರಗಂಗೆ ಪಂಪಾಯಸ್ವಾಮಿ ಸಾಲಿಮಠ ಇವರ ವಿರಚಿತ ಸುಕ್ಷೇತ್ರ ಮಸ್ಕಿ ಬ್ರಹ್ಮರಂಬ ಕರುಣೆ ಕವನ ಸಂಕಲನ ಬಿಡುಗಡೆ ಮಾಡಲಾಯಿತು. ಉಪನ್ಯಾಸ ನೀಡಿದ ಜಗದ್ಗುರು ಶ್ರೀ ಸದಾಶಿವ ಮಹಾಸ್ವಾಮಿಗಳು ಶಿವಾನಂದ ಬ್ರಹ್ಮಮಠ ಗದಗ್ ಮಹಿಳೆಯರು ಮೊದಲು ಸಂಸ್ಕಾರ ಕಲೆತು ಗುರುವಿನ ಕೃಪೆಗೆ ಪಾತ್ರರಾಗಬೇಕೆಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಪ್ರತಾಪ್ ಗೌಡ ಮಾಜಿ ಶಾಸಕ ಹಾಗೂ ಮಸ್ಕಿಯ ಕೇಂದ್ರ ಬಿಂದು ವರ ರುದ್ರಮುನಿ ಶಿವಾಚಾರ್ಯ ಮಹಾದೇವರು ನೇತೃತ್ವದಲ್ಲಿ ಕಾರ್ಯಕ್ರಮ ನೆರವೇರಿತು.
ಈ ಕಾರ್ಯಕ್ರಮದಲ್ಲಿ ಭಕ್ತಾದಿಗಳು ಸುತ್ತಮುತ್ತ ಗ್ರಾಮಗಳಿಂದ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು .

ಇತ್ತೀಚಿನ ಸುದ್ದಿ

ಜಾಹೀರಾತು