4:47 PM Friday3 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ ಪ್ರತಿಭಟನೆ

03/07/2026, 16:46

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಇತ್ತೀಚೆಗಷ್ಟೇ ಮಸ್ಕಿ ತಾಲೂಕಿನ ಮೆದಿಕಿನಾಳ ಗ್ರಾಮದಲ್ಲಿ ಅತಿಥಿ ಶಿಕ್ಷಕರಾದ ವೀರನಗೌಡ ರವರು ಕರ್ತವ್ಯದಲ್ಲಿದ್ದಾಗಲೇ ಮೃತಪಟ್ಟ ಹಿನ್ನೆಲೆ ಯಲ್ಲಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ವಾಗಿ
ಮಸ್ಕಿ ತಾಲೂಕಿನಲ್ಲಿ ವಿವಿಧ ಶಾಲೆಯ ಅತಿಥಿ ಶಿಕ್ಷಕರು ಪ್ರತಿಭಟನೆ ಮಾಡಿದರು.
ಕರ್ನಾಟಕ ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘದ ನೇತೃತ್ವದಲ್ಲಿ
ಮಸ್ಕಿ ಪಟ್ಟಣದಲ್ಲಿ ಇಂದು ಹಮ್ಮಿಕೊಂಡಿದ್ದ ‘ಬೃಹತ್ ಆಕ್ರೋಶದ ಮುಷ್ಕರ’ ಸರ್ಕಾರದ ದ್ವಂದ್ವ ನೀತಿಯ ವಿರುದ್ಧದ ಜನಾಂದೋಲನದಂತೆ ಕಂಡು ಬಂತು.
ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಶಿಕ್ಷಕರು, ಪಟ್ಟಣದ ಪ್ರಮುಖ ವೃತ್ತಗಳ ಮೂಲಕ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿದರು.ಸರ್ಕಾರದ ಕಣ್ಣು ತೆರೆಸಲು ಶಿಕ್ಷಕರು ಮಂಡಿಸಿದ
*ಪ್ರಮುಖ ಬೇಡಿಕೆಗಳು:* 12 ತಿಂಗಳ ನಿರಂತರ ಸೇವೆ:
ಕೇವಲ 9-10 ತಿಂಗಳ ತಾತ್ಕಾಲಿಕ ವ್ಯವಸ್ಥೆ ರದ್ದಾಗಲಿ; ವರ್ಷಪೂರ್ತಿ
ಸೇವಾ ಭದ್ರತೆ ಸಿಗಲಿ., ಗೌರವಯುತ ವೇತನ, ಇಂದಿನ ಬೆಲೆ ಏರಿಕೆಗೆ ತಕ್ಕಂತೆ ಗೌರವಧನವನ್ನು ಕನಿಷ್ಠ ₹25,000 ಕ್ಕೆ ಹೆಚ್ಚಿಸಬೇಕು, ತಿಂಗಳ ಮೊದಲ ವಾರದಲ್ಲೇ ವೇತನ,ಪ್ರತಿ ತಿಂಗಳು ಸರಿಯಾದ ಸಮಯಕ್ಕೆ ಜಮೆಯಾಗಬೇಕು.ಕೃಪಾಂಕದ ಸೌಲಭ್ಯbನೀಡಬೇಕು ಎಂದು ಸರಕಾರಕ್ಕೆ ತಹಶಿಲ್ದಾರರ ಮೂಲಕ ಮನವಿಯನ್ನು ಸಲ್ಲಿಸಿದ್ದರು.
ಈ ವೇಳೆ ಮಸ್ಕಿ ತಾಲ್ಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ಅತಿಥಿ ಶಿಕ್ಷಕರು ಇದ್ದರು.

.

ಇತ್ತೀಚಿನ ಸುದ್ದಿ

ಜಾಹೀರಾತು