2:35 AM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

Raichuru | ವಿರೋಧಿಗಳು ಎಷ್ಟೇ ಅಪ ಪ್ರಚಾರ ಮಾಡಿದರೂ ಬಂಗ್ಲೆ ಕೀರ್ತಿ ಜಾಸ್ತಿ ಆಗುತ್ತದೆ: ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ

29/08/2025, 10:10

ರಾಯಚೂರು(reporterkarnataka.com): ಗ್ರಾಮೀಣ ಭಾಗದ ಪತ್ರಕರ್ತರಿಗೆ ಸೌಲಭ್ಯ ಸಿಗಲು ಬಂಗ್ಲೆ ಮಲ್ಲಿಕಾರ್ಜುನ ಅವರು ಪ್ರತ್ಯೇಕ ಸಂಘಟನೆ ಮಾಡಿ ಧ್ವನಿ ಎತ್ತಿದವರು ಎಂದು ಪತ್ರಕರ್ತರ ಸಹಕಾರ ಸಂಘದ ನಿರ್ದೇಶಕ ರಮೇಶ ಹಿರೇಜಂಬೂರು ಹೇಳಿದರು.
ಮಾನ್ವಿ ಪಟ್ಟಣದ ಶಾಸಕರ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತ ಧ್ವನಿ ಸಂಘಟನೆಯ ವತಿಯಿಂದ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅಂಬೇಡ್ಕರ್, ವಾಲ್ಮೀಕಿ ಹಾಗೂ ಬಸವಣ್ಣನವರ ವಿಚಾರಧಾರೆ ಅಳವಡಿಸಿಕೊಳ್ಳುವುದರ ಜೊತೆಗೆ ಪತ್ರಕರ್ತರು ಸುದ್ದಿಯ ರೂಪ ಹುಡುಕಿಕೊಳ್ಳುತ್ತಾ ಸಾಗಬೇಕು. ಈ ಹಿಂದೆ ಪತ್ರಿಕೋದ್ಯಮ ಅನ್ನೋದು ಕಷ್ಟಕರವಾಗಿತ್ತು. ಆದರೆ ಇಂದು ಡಿಜಿಟಲ್‌ ಮಾಧ್ಯಮದ ಮುನ್ನೋಟದಿಂದ ಕ್ಷಣಾರ್ಧದಲ್ಲಿ ನಾವು ಸುದ್ದಿಗಳನ್ನು ನೋಡಬಹುದಾಗಿದೆ ಎಂದರು.
ಮಸ್ಕಿ ತಾಲೂಕು ಅಧ್ಯಕ್ಷ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಮಾತನಾಡಿ ಬಂಗ್ಲೆ ಮಲ್ಲಿಕಾರ್ಜುನ್ ಅವರ ಬಗ್ಗೆ ಎಷ್ಟೇ ಅಪಪ್ರಚಾರ ಮಾಡಿದರೂ ಅವರ ಕೀರ್ತಿ ಹೆಚ್ಚಿಸುತ್ತದೆ. ಮಲ್ಲಿಕಾರ್ಜುನ ಒಂದು ಅದ್ಭುತ ಶಕ್ತಿ ಎಂದು ಹೇಳಿದರು.
ಮಾಜಿ ಶಾಸಕ ಬಸನಗೌಡ ಬ್ಯಾಗವಾಟ್ ಮಾತನಾಡಿ,
ಪತ್ರಕರ್ತರ ಭದ್ರತೆಗೆ ಇಂತಹ ಮಹತ್ವದ 10 ಲಕ್ಷ ರೂಪಾಯಿ ಇನ್ಸೂರೆನ್ಸ್ ಯೋಜನೆ ಬಹಳ ಶ್ಲಾಘನೀಯ, ಇದು ಇತರ ಸಂಘಟನೆಗಳಿಗೆ ಮಾದರಿಯಾಗಬೇಕು ಎಂದರು.
ನೂತನ ಅಧ್ಯಕ್ಷ ಪರಶುರಾಮ ಚೌಡ್ಕಿ ಅವರ ನೇತೃತ್ವದಲ್ಲಿ ಧ್ವನಿ ಸಂಘಟನೆ ಸದಸ್ಯರಿಗೆ 10 ಲಕ್ಷ ಇನ್ಸೂರೆನ್ಸ್ ಬಗ್ಗೆ ಆಲೋಚನೆ ಮಾಡಿ ಕುಟುಂಬಕ್ಕೆ ಭದ್ರತೆ ನೀಡುವ ಯೋಜನೆ ಹಮ್ಮಿಕೊಂಡಿರುವುದು ಪ್ರಶಂಸನೀಯ ಕೊಟ್ಟಂತಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಅಂಬಣ್ಣ ನಾಯಕ ಬ್ಯಾಗವಾಟ್, ಕಾಂಗ್ರೆಸ್ ಮುಖಂಡ ಖಾಲೀದ್ ಖಾದ್ರಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮಾನ್ವಿ ಘಟಕ ಅಧ್ಯಕ್ಷ ಸುರೇಶ ಕುರ್ಡಿ, ಧ್ವನಿ ಸಂಘಟನೆಯ ರಾಜ್ಯ ಉಪಾಧ್ಯಕ್ಷ ಇಸಾಕ್, ಮಸ್ಕಿ ತಾಲೂಕು ಅಧ್ಯಕ್ಷ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಭಾಗಯ್ಯ, ಇತರರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಕಾರ್ಯಕ್ರಮ ಯಶಸ್ವಿ ಗೊಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು