9:34 AM Monday20 - April 2026
ಬ್ರೇಕಿಂಗ್ ನ್ಯೂಸ್
ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

Raichuru | ಮಸ್ಕಿಯಲ್ಲಿ ಕಾರ್ಗಿಲ್ ವಿಜಯೋತ್ಸವ ಸಂಭ್ರಮಾಚರಣೆ: ಯೋಧರಿಗೆ ಸನ್ಮಾನ

26/07/2025, 22:52

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಯೋಧರಿಗೆ ಸನ್ಮಾನ ಕಾರ್ಯಕ್ರಮವನ್ನು ಮಸ್ಕಿ ಪ್ರಭುವಿತಂ ಪದವಿ ಪೂರ್ವ ಕಾಲೇಜಿನಲ್ಲಿ ವಿಜಯೋತ್ಸವ ದಿವಸ್ ಕಾರ್ಯಕ್ರಮವನ್ನು ಮಾಡಲಾಯಿತು.
ಇದೇ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷರಾದ ಶರಣಬಸವ ಸೊಪ್ಪಿಮಠ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ನಮ್ಮ ಸೈನ್ಯದಲ್ಲಿ ಅಂದು ಹುತಾತ್ಮರಾದ ವೀರ ಯೋಧರಿಗೆ ನಮನ ಸಲ್ಲಿಸೋಣ. ಕಾರ್ಗಿಲ್ ವಿಜಯೋತ್ಸವ ದಿನ
ದೇಶದ ಸಂರಕ್ಷಣೆಗೆ ಪ್ರಾಣವನ್ನೇ ಅರ್ಪಿಸಿದ ವೀರ ಯೋಧರಿಗೆ ಭಕ್ತಿಪೂರ್ವಕ ನಮನಗಳು ಎಂದರು.
1999 ರ ಕಾರ್ಗಿಲ್ ಯುದ್ಧವು ಭಾರತದ ಇತಿಹಾಸದಲ್ಲೇ ಅತ್ಯಂತ ಸಾಹಸಿಕ ಮತ್ತು ಶೂರವೀರರ ಹೋರಾಟದ ಅಧ್ಯಾಯವಾಗಿದೆ. ಹಿಮಪಾತ, ದಟ್ಟ ಪರ್ವತಗಳು ಮತ್ತು ಅಸಹನೀಯ ವಾತಾವರಣದಲ್ಲಿಯೂ ನಮ್ಮ ಯೋಧರು ತಮ್ಮ ಜೀವದ ಹಂಗು ಕಾಣದೆ ಶತ್ರುಗಳಿಗೆ ತಕ್ಕ ಉತ್ತರ ನೀಡಿ, ವಿಜಯದ ಧ್ವಜ ಹಾರಿಸಿದರು ಎಂದು ಅವರು ಕೊಂಡಾಡಿದರು.
ಶತ್ರುಗಳನ್ನು ಶೌರ್ಯದಿಂದ ಹಿಮ್ಮೆಟ್ಟಿಸಿ, ತವರಿಗೆ ಹಿಂತಿರುಗದೆ ದೇಶದ ಭೂಭಾಗವನ್ನು ರಕ್ಷಿಸಲು ಜೀವವನ್ನೇ ತ್ಯಾಗ ಮಾಡಿದ ವೀರಪುತ್ತರು – ಅವರು ಸ್ಮರಣೆಗೂ ಮೀರಿದ ಮಹಾಪುರುಷರು ಎಂದರು.
ಅವರ ತ್ಯಾಗ, ಬಲಿದಾನ ಮತ್ತು ರಾಷ್ಟ್ರಪ್ರೇಮ – ಇವುವೆಲ್ಲಾ ಪ್ರತಿಯೊಬ್ಬ ಭಾರತೀಯನ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿರುವುದು. ಅವರ ವೀರಗಾಥೆಗಳು ನಮ್ಮ ಮುಂದಿನ ಪೀಳಿಗೆಗೆ ಪ್ರೇರಣೆಯಾಗಲಿ.


ಭಾರತ ಮಾತೆಗೆ ಜೀವ ಅರ್ಪಿಸಿದ ವೀರರನ್ನು ಮರೆಯಲಾರೆವು. ವೀರ ಯೋಧರ ಬಲಿದಾನಕ್ಕೆ ನಮನಗಳು ಎಂದು ಹೇಳಿದರು.
ಮಸ್ಕಿ ಕ್ಷೇತ್ರದ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಅವರು ಕಾರ್ಗಿಲ್ ವಿಜಯೋತ್ಸವ ಕುರಿತಾಗಿ ಮಾತನಾಡಿ, ಕಾರ್ಗಿಲ್ ವಿಜಯ ದಿವಸ್”. ನಮ್ಮ ವೀರ ಯೋಧರ ತ್ಯಾಗ, ಬಲಿದಾನ ಹಾಗೂ ಶೌರ್ಯದಿಂದ ಪ್ರಾಣ ಅರ್ಪಿಸಿ ದೇಶ ಗೆಲ್ಲಿಸಿ, ಭಾರತಾಂಬೆಯ ಗೌರವವನ್ನು ಮುಗಿಲೆತ್ತರಕ್ಕೆ ಹಾರಿಸಿದ ಐತಿಹಾಸಿಕ ದಿನವಿಂದು. ನಮ್ಮ ಸೈನ್ಯದ ಐತಿಹಾಸಿಕ ವಿಜಯವನ್ನು ಸಂಭ್ರಮಿಸೋಣ. ಅಂದು ಹುತಾತ್ಮರಾದ ವೀರ ಯೋಧರಿಗೆ ನಮನ ಸಲ್ಲಿಸೋಣ ಎಂದರು.
ಇದೇ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷರಾದ ಮಲ್ಲಯ್ಯ ಅಂಬಾಡಿ, ಮುಖಂಡರಾದ ಡಾ. ಬಿ.ಎಚ್. ದಿವಟರ, ಮಾಜಿ ಸೈನಿಕರಾದ ರಾಜಪ್ಪ ಮಜ್ಜಿಗೆ ಹಾಗೂ ಶಂಕ್ರಪ್ಪ ಮಾಜಿ ಯೋಧರು, ಕಾಲೇಜಿನ ಕಾರ್ಯದರ್ಶಿಗಳಾದ ಶಿವರಾಜ್ ಅರಸೂರು, ಕಾಲೇಜಿನ ಪ್ರಿನ್ಸಿಪಲ್ ಕಿರಣ್ ಇನ್ನು ಮುಂತಾದವರು ಕಾರ್ಯಕ್ರಮದಲ್ಲಿ ಹಾಜರಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು