7:10 AM Wednesday4 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

Raichuru | ಮಸ್ಕಿ ಶ್ರೀ ಚಿಕ್ಕ ಅಂತರಗಂಗೆ ದುರ್ಗಾದೇವಿ ಜಾತ್ರೆ: ಹರಿದು ಬಂದ ಭಕ್ತ ಸಾಗರ

28/05/2025, 21:46

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ತಾಲೂಕಿನ ಅಂತರಗಂಗೆ ಗ್ರಾಮದ ಶ್ರೀ ಚಿಕ್ಕ ಅಂತರಗಂಗೆಯಲ್ಲಿ ನೆಲೆಸಿರುವ ಬಳ್ಳಾರಿ ದುರ್ಗಮ್ಮ ಎಂದು ಪ್ರಸಿದ್ಧಿಯಾಗಿದ್ದ ಶ್ರೀ ದುರ್ಗಾದೇವಿ ಜಾತ್ರೆ ಅದ್ದೂರಿಯಾಗಿ ಮಂಗಳವಾರ ನಡೆಯಿತು.


ನಡೆದಾಡುವ ದೇವರು ಬಳ್ಳಾರಿ ದುರ್ಗಮ್ಮ ಹೆಸರುವಾಸಿಯಾಗಿ ತನ್ನದೇ ಆದ ಒಂದು ಇತಿಹಾಸವಿದೆ. ಅಂತಹ ಶ್ರೀ ದುರ್ಗಾದೇವಿ ಜಾತ್ರೆ ಐದು ವರ್ಷಕ್ಕೊಮ್ಮೆ ನಡೆಯುತ್ತದೆ.
ಏಳು ಊರಿನ ಗೌಡರು ಸೇರಿ ಈ ಜಾತ್ರೆ ಅದ್ದೂರಿಯಿಂದ ಸಡಗರದಿಂದ ಮಾಡುತ್ತಾರೆ. ಭಕ್ತರು ತಮ್ಮ ಹರಕೆಗಳನ್ನು ತೀರಿಸಿಕೊಳ್ಳಲು ದೇವರಿಗೆ ತಮ್ಮ ಮುಡುಪನ್ನು ಅರ್ಪಿಸುವ ದೃಶ್ಯ ಕಂಡು ಬಂತು. ಭಕ್ತಿಯಿಂದ ಬೇಡಿಕೊಳ್ಳುವ ದೃಶ್ಯ ಕಂಡ ಬಂತು.
ಭಜನೆ, ಮಂಗಳಾರತಿ, ರುದ್ರಾಭಿಷೇಕ ವಾದ್ಯಗಳೊಂದಿಗೆ ಭಕ್ತರು ಕಳಸ ಕನ್ನಡಿ ಡೊಳ್ಳು ಕುಣಿತದೊಂದಿಗೆ ಜೈಕಾರದೊಂದಿಗೆ ಹುಚ್ಚಯ್ಯ ಕಾರ್ಯಕ್ರಮ ಜರಗಿತು.
ಸುತ್ತಮುತ್ತಲಿನ ಗ್ರಾಮಗಳಾದ ಗೊಲ್ಲರಟ್ಟಿ, ಮ್ಯಾದಹಾಳು, ಅಂತರಗಂಗೆ, ನಾಗರಬೆಂಚಿ, ಮೆದಿಕಿನಾಳ, ಬೈಲಗುಡ್ಡ ಹಾಗೂ ತಾಂಡ ದೊಡ್ಡಿಗಳಿಂದ ಭಕ್ತರ ಆಗಮಿಸಿ ತಮ್ಮ ತನು ಮನ ಧನದಿಂದ ದುರ್ಗಾದೇವಿ ಪೂಜಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು