6:23 AM Saturday17 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

Raichuru | ಮಸ್ಕಿ ಕೊಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ, 3.24 ಲಕ್ಷ ರೂ. ದಂಡ

09/10/2025, 19:13

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಮಸ್ಕಿ ರಾಯಚೂರು

info.reporterkarnataka@gmail.com

ಜಮೀನಿಗೆ ಹೋಗಲು ದಾರಿ ಕೊಡದೆ ಇರುವುದರ ವಿಚಾರವಾಗಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪಿಗೆ ನಗರದ ಮೂರನೆಯ ಹೆಚ್ಚುವರಿ ಜಿಲ್ಲಾ ಸತ್ಯ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 3.24 ಲಕ್ಷ ರೂ. ದಂಡ ವಿಧಿಸಿದೆ.
ಬಳಗಾನೂರ ಪೊಲೀಸ್ ಠಾಣೆ ವ್ಯಾಪ್ತಿಯ ಬರುವ ರಂಗಾಪುರ ಸರ್ವೇ ನಂಬರ್ 07ರಲ್ಲಿ
ಮೃತ ಶಿವರುದ್ರಪ್ಪ ಅವರ ಜಮೀನಿಗೆ ಹೋಗಲು ಆರೋಪಿತರು ದಾರಿ ರಸ್ತೆ ಕೊಡದೆ ಇದ್ದಿದ್ದರಿಂದ ಮೃತ ಶಿವರುದ್ರಪ್ಪನನ್ನು ತಮ್ಮ ಹೊಲದಿಂದ ಆರೋಪಿತರ ಹೊಲಕ್ಕೆ ಹೋಗುತ್ತಿದ್ದ ಕಾಲುವೆ ನೀರನ್ನು ಬಂದು ಮಾಡಿರುವುದರಿಂದ ಅದೇ ದ್ವೇಷದ ಹಿನ್ನೆಲೆಯಲ್ಲಿ..
ಆರೋಪಿತರು ಕೊಡಲೇ ಬಡಿಗೆಗಳನ್ನು ಹಿಡಿದು ಜಮೀನಿನಲ್ಲಿ ಅತಿಕ್ರಮಣವಾಗಿ ಪ್ರವೇಶ ಮಾಡಿ ಜಗಳ ತೆಗೆದು ಕೊಡಲಿ ಕಾವಿನಿಂದ ಮತ್ತು ಬಡಿಗೆಗಳಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದರು. ದೂರದ ವಿರುದ್ಧ ಬೆಳಗನೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಬಿ.ಬಿ. ಜಕಾತಿ ಸಿಂಧನೂರ್ ಅವರ ಪ್ರಕರಣ ವಾದಗಳನ್ನು ಆಲಿಸಿದ ಮೂರನೆಯ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಆರೋಪಿತರು ಅಪರಾಧ ಎಸಿಗಿದ್ದಾರೆಂದು ಪರಿಗಣಿಸಿ ಆರೋಪಿತರಿಗೆ ಜೀವಾವಧಿ ಶಿಕ್ಷೆ ಹಾಗೂ 3.24 ಲಕ್ಷ ರೂ. ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದ್ದಾರೆ. ಸರಕಾರದ ಪರವಾಗಿ ಸರ್ವ ಮಂಗಳ ಆರ್. ಗಡಕರಿ ವಾದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು