3:53 PM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

Raichuru | ಮಸ್ಕಿ ಕೊಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ, 3.24 ಲಕ್ಷ ರೂ. ದಂಡ

09/10/2025, 19:13

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಮಸ್ಕಿ ರಾಯಚೂರು

info.reporterkarnataka@gmail.com

ಜಮೀನಿಗೆ ಹೋಗಲು ದಾರಿ ಕೊಡದೆ ಇರುವುದರ ವಿಚಾರವಾಗಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪಿಗೆ ನಗರದ ಮೂರನೆಯ ಹೆಚ್ಚುವರಿ ಜಿಲ್ಲಾ ಸತ್ಯ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 3.24 ಲಕ್ಷ ರೂ. ದಂಡ ವಿಧಿಸಿದೆ.
ಬಳಗಾನೂರ ಪೊಲೀಸ್ ಠಾಣೆ ವ್ಯಾಪ್ತಿಯ ಬರುವ ರಂಗಾಪುರ ಸರ್ವೇ ನಂಬರ್ 07ರಲ್ಲಿ
ಮೃತ ಶಿವರುದ್ರಪ್ಪ ಅವರ ಜಮೀನಿಗೆ ಹೋಗಲು ಆರೋಪಿತರು ದಾರಿ ರಸ್ತೆ ಕೊಡದೆ ಇದ್ದಿದ್ದರಿಂದ ಮೃತ ಶಿವರುದ್ರಪ್ಪನನ್ನು ತಮ್ಮ ಹೊಲದಿಂದ ಆರೋಪಿತರ ಹೊಲಕ್ಕೆ ಹೋಗುತ್ತಿದ್ದ ಕಾಲುವೆ ನೀರನ್ನು ಬಂದು ಮಾಡಿರುವುದರಿಂದ ಅದೇ ದ್ವೇಷದ ಹಿನ್ನೆಲೆಯಲ್ಲಿ..
ಆರೋಪಿತರು ಕೊಡಲೇ ಬಡಿಗೆಗಳನ್ನು ಹಿಡಿದು ಜಮೀನಿನಲ್ಲಿ ಅತಿಕ್ರಮಣವಾಗಿ ಪ್ರವೇಶ ಮಾಡಿ ಜಗಳ ತೆಗೆದು ಕೊಡಲಿ ಕಾವಿನಿಂದ ಮತ್ತು ಬಡಿಗೆಗಳಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದರು. ದೂರದ ವಿರುದ್ಧ ಬೆಳಗನೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಬಿ.ಬಿ. ಜಕಾತಿ ಸಿಂಧನೂರ್ ಅವರ ಪ್ರಕರಣ ವಾದಗಳನ್ನು ಆಲಿಸಿದ ಮೂರನೆಯ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಆರೋಪಿತರು ಅಪರಾಧ ಎಸಿಗಿದ್ದಾರೆಂದು ಪರಿಗಣಿಸಿ ಆರೋಪಿತರಿಗೆ ಜೀವಾವಧಿ ಶಿಕ್ಷೆ ಹಾಗೂ 3.24 ಲಕ್ಷ ರೂ. ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದ್ದಾರೆ. ಸರಕಾರದ ಪರವಾಗಿ ಸರ್ವ ಮಂಗಳ ಆರ್. ಗಡಕರಿ ವಾದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು