4:23 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:…

ಇತ್ತೀಚಿನ ಸುದ್ದಿ

Raichuru | ಮಸ್ಕಿ: ಸಮಾಜದ ಅಭಿವೃದ್ಧಿಗಾಗಿ ಸಂಘಟನೆ ಬಲಪಡಿಸಲು ಸಿಂಪಿ ಸಮಾಜದ ಮುಖಂಡರ ಸಭೆ

02/06/2025, 20:38

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಶ್ರೀ ಜಡೆಯ ಶಂಕರಲಿಂಗ ದೇವಸ್ಥಾನದ ಆವರಣದಲ್ಲಿ ನಾಗಲೀಕ ಸಿಂಪಿ ಸಮಾಜದ ಬಾಂಧವರ ಸಮಾಜದ ತಾಲೂಕು ಮಟ್ಟದ ಹಾಗೂ ಜಿಲ್ಲಾ ಮಟ್ಟದ ಸಂಘಟನೆಗಾಗಿ ಸಭೆ ನಡೆಸಿದರು.
ಸಮಾಜದ ಅಭಿವೃದ್ಧಿಗಾಗಿ ಮತ್ತು ಉನ್ನತಿಗಾಗಿ ಸಂಘಟನೆಯು ಅತ್ಯಂತ ಅವಶ್ಯಕವಾಗಿದೆ ಸಮಾಜದ ಶ್ರೇಯೋಭಿವೃದ್ಧಿಗಾಗಿ ಎಲ್ಲರೂ ಒಗ್ಗಟ್ಟಾಗಿ ಸಮಾಜ ಬಾಂಧವರ ನೋವುಗಳಿಗೆ ಎಲ್ಲರೂ ಸ್ಪಂದಿಸಬೇಕೆಂದು ಸಾಮಾಜದ ಗೌರವ ಅಧ್ಯಕ್ಷರಾದ ದೊಡ್ಡಪ್ಪ ಬುಳ್ಳಾರವರು ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ಸಿಂಪಿ ಸಮಾಜ ಭಾಂದವರಲ್ಲಿ ಎಲ್ಲಾ ಗುಣಗಳು ಅಡಕವಾಗಿವೆ. ಸದ್ಬಳಕೆ ಮಾಡಿಕೊಂಡು ರಾಜ್ಯ ಮಟ್ಟದ ಸಂಘಟನೆಗಾಗಿ ಎಲ್ಲರೂ ಒಂದಾಗೋಣ ಎಂದು ಮಸ್ಕಿ ನಾಗಲೀಕ ಸಿಂಪಿ ಸಾಮಾಜದ ಅಧ್ಯಕ್ಷರು ಮತ್ತು ಪುರಸಭೆ ಸದಸ್ಯರಾದ ಸುರೇಶ ಹರಸೂರ ಜಾಗೃತಿ ಮೂಡಿಸುವ ಕಾರ್ಯ ಆಗಬೇಕು ಎಂದು ಅವರು ನುಡಿದರು.
ಸಮಾಜದ ಮಹಿಳಾ ಸಬಲೀಕರಣ ಮತ್ತು ಕರಕುಶಲ ಕಲೆಗಳು ಮತ್ತು ಟೈಲರಿಂಗ್ ವೃತ್ತಿಗಳಿಗೆ ಆದ್ಯತೆ ನೀಡಿ ಆರ್ಥಿಕವಾಗಿ ಸುಧಾರಣೆಗೆ ಒತ್ತು ನೀಡಬೇಕು ಎಂದು ಬಳ್ಳಾರಿ ಜಿಲ್ಲಾ ಸಂಘಟನಾ ಸಂಚಾಲಕರಾದ ಸುರೇಶ ನಾಗ್ಲಿಕರ ತಿಳಿಸಿದರು.
ನಮ್ಮ ಸಮಾಜದ ಪ್ರತಿಭಾನ್ವಿತ ಯುವಕರು ರಾಜ್ಯಮಟ್ಟ ಹಾಗೂ ರಾಷ್ಟ್ರ ಮಟ್ಟದ ಸಂಘಟನೆಗಾಗಿ ಒತ್ತು ನೀಡಬೇಕು ಮತ್ತು ಸಮುದಾಯದ ಉನ್ನತಿಗಾಗಿ ಸಂಘಟನೆಯನ್ನು ಮಾಡಬೇಕೆಂದು ರಾಯಚೂರು ಜಿಲ್ಲಾ ಸಂಘಟನಾ ಸಂಚಾಲಕರು ಮತ್ತು ಮಸ್ಕಿ ಸಮಾಜದ ಕಾರ್ಯದರ್ಶಿಯಾದ ಶ್ರೀಧರ ಮಸ್ಕಿ ಹೇಳಿದರು.
ನಮ್ಮ ಸಮಾಜದ ಸಮಾವೇಶಗಳು ಸಾಮಾಜಿಕ ಸುಧಾರಣೆಯ ದೃಷ್ಟಿಯಿಂದಲೂ ಹಾಗೂ ಸ್ಥಳೀಯ ಸಂಘಟನೆಗೆ ಸಮಾವೇಶಗಳು ಅತ್ಯಂತ ಅವಶ್ಯಕ ಹಾಗೂ ಶೀಘ್ರದಲ್ಲೇ ಸಮಾಜ ಮುಖಂಡರ ಸಭೆ ಕರೆದು ಸಮಾವೇಶ ಮಾಡಲು ಚರ್ಚೆ ನಡೆಸಬೇಕೆಂದು ಯಾದಗಿರಿ ಜಿಲ್ಲಾ ಸಂಘಟನಾ ಸಂಚಾಲಕರಾದ ಪ್ರಕಾಶ ಬಣಗಾರ ಹೇಳಿದರು.
ರಾಯಚೂರು ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಸಿಂಪಿ ಸಮಾಜದ ಬಾಂಧವರು ಇರುವ ಸ್ಥಳ ಮಸ್ಕಿ ಇಲ್ಲಿ ಎಲ್ಲರೂ ಶ್ರಮವಹಿಸಿ ಕಾರ್ಯಕ್ರಮ ಯಶಸ್ವಿಗಾಗಿ ದುಡಿಯುತ್ತಿರುವ ಸಮಾಜ ಎಂದು ಸಾಮಾಜದ ಉಪಾಧ್ಯಕ್ಷ ಮಲ್ಲಿಕಾರ್ಜುನ ಕಂದ್ಗಲ ತಿಳಿಸಿದರು.
ಈ ಸಭೆಯಲ್ಲಿ ಸಾಂಬಾಶಿವಪ್ಪ ಧನ ಶೆಟ್ಟಿ,ವೀರೇಶ ಆನೆಹೊಸೂರ,ಶರಣಪ್ಪ ಅನ್ವರಿ.ಶಿವಪ್ಪ ಮುದ್ಗಲ್,ವೀರಭದ್ರಪ್ಪ ಧನಶೆಟ್ಟಿ,ಶಿವಪುತ್ರಪ್ಪ ಧನಶೆಟ್ಟಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು