3:12 PM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ರೈಲಿನಲ್ಲೇ ಕೂತು ಪಶ್ಚಿಮಘಟ್ಟ ಸೊಬಗು ಆಸ್ವಾದಿಸಿ!: ಗಾಜಿನ ಚಾವಣಿಯಬೆಂಗಳೂರು- ಮಂಗಳೂರು ಟ್ರೈನ್ ಜು.7ರಂದು ಆರಂಭ

04/07/2021, 19:13

ಮಂಗಳೂರು(reporterkarnataka news): ಶಿರಾಡಿ ಘಾಟಿಯ ಪ್ರಕೃತಿ ಸೌಂದರ್ಯವನ್ನು ಅಸ್ವಾದಿಸಲು ಗಾಜಿನ ಛಾವಣಿ(ವಿಸ್ಟಾಡೋಮ್) ಹೊಂದಿರುವ ಬೋಗಿಗಳನ್ನೊಳಗೊಂಡ ಬೆಂಗಳೂರು- ಮಂಗಳೂರು ರೈಲು ಸಂಚಾರ ಜುಲೈ 7ರಿಂದ ಆರಂಭವಾಗಲಿದೆ.

ಬೆಂಗಳೂರು- ಮಂಗಳೂರು ಮಧ್ಯೆ ಸಂಚರಿಸುವ ಮೂರು ರೈಲುಗಳ ದ್ವಿತೀಯ ದರ್ಜೆಯ ಬೋಗಿಯನ್ನು ತೆಗೆದು ತಲಾ ಎರಡು ವಿಸ್ಟಾಡೋಮ್ ಬೋಗಿಗಳನ್ನು ಜೋಡಿಸಲಾಗುತ್ತದೆ. ಇದರಿಂದ ಸಕಲೇಶಪುರ ಹಾಗೂ ಸುಬ್ರಹ್ಮಣ್ಯ ರೋಡ್ ನಿಲ್ದಾಣದವರೆಗೆ 56 ಕಿಮೀ. ಉದ್ದದ ಹಚ್ಚ ಹಸಿರಿನ ಪ್ರಕೃತಿ ಸೌಂದರ್ಯ, ನದಿ, ತೊರೆ, ಜಲಪಾತಗಳು ಸೊಬಗನ್ನು ಪ್ರಯಾಣಿಕರು ಆಸ್ವಾದಿಸಬಹುದಾಗಿದೆ.

ಗಾಜಿನ ಚಾವಣಿಯ ಬೋಗಿಯೊಳಗೆ 360 ಡಿಗ್ರಿಯಲ್ಲಿ ಸುತ್ತುವ ಆಸನದ ವ್ಯವಸ್ಥೆ ಅಳವಡಿಸಲಾಗಿದೆ. ಪಾರದರ್ಶಕ ಗಾಜಿನ ಕೋಚ್ ಆಗಿರುವುದರಿಂದ ಪ್ರಯಾಣಿಕರು ತನ್ನ ಇಕ್ಕಲೆಗಳ ಪ್ರಕೃತಿ ಸೊಬಗಿನ ಜತೆಗೆ ಎತ್ತರದ ಬೆಟ್ಟ, ಗಿರಿ, ಕಾನನ ಹಾಗೂ ಜಲಪಾತಗಳ ವೈಭವವನ್ನು ಕುಳಿತಲ್ಲೇ ಸವಿಯಬಹುದಾಗಿದೆ. ಬೋಗಿಯಲ್ಲಿ ಜಿಪಿಎಸ್ ಆಧಾರಿತ ಮಾಹಿತಿ ವ್ಯವಸ್ಥೆ, ಮೈಕ್ರೋ ಓವೆನ್, ಸಣ್ಣ ಫ್ರಿಡ್ಜ್ ಮತ್ತು ಎಸಿ ಸೌಲಭ್ಯವಿರುತ್ತದೆ. ಟಿಕೆಟ್ ದರ 1470 ರೂ. ನಿಗದಿಪಡಿಸಲಾಗಿದೆ. ಮೊದಲ ರೈಲು ಜುಲೈ 7ರಂದು ಯಶವಂತಪುರ ಜಂಕ್ಷನ್ ನಿಂದ ಹೊರಡಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು