8:18 PM Monday16 - June 2025
ಬ್ರೇಕಿಂಗ್ ನ್ಯೂಸ್
Bangalore | ಮೋದಿ ಎದುರು ನಿಲ್ಲಬಲ್ಲ ಇನ್ನೊಬ್ಬ ನಾಯಕ ಇಲ್ಲ: ಮಾಜಿ ಪ್ರಧಾನಿ… ಬಸವಸಾಗರ ಜಲಾಶಯ ಭರ್ತಿ: 8 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ… ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ: ಆರೋಗ್ಯ ಸಚಿವ ದಿನೇಶ್… Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ… ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ… ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್;… ಅಹಮದಾಬಾದ್: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ಬೋಯಿಂಗ್ ಪತನ; ಬೆಂಕಿಯುಂಡೆಯಾದ… New Delhi | ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ… Mangaluru | ಕೋಮು ನಿಗ್ರಹ ಪಡೆ ಮುಖ್ಯಸ್ಥರಾಗಿ ಅಮಿತ್ ಸಿಂಗ್ ನೇಮಕ: ತುಳುನಾಡು,…

ಇತ್ತೀಚಿನ ಸುದ್ದಿ

ರೈಲಿನಲ್ಲೇ ಕೂತು ಪಶ್ಚಿಮಘಟ್ಟ ಸೊಬಗು ಆಸ್ವಾದಿಸಿ!: ಗಾಜಿನ ಚಾವಣಿಯಬೆಂಗಳೂರು- ಮಂಗಳೂರು ಟ್ರೈನ್ ಜು.7ರಂದು ಆರಂಭ

04/07/2021, 19:13

ಮಂಗಳೂರು(reporterkarnataka news): ಶಿರಾಡಿ ಘಾಟಿಯ ಪ್ರಕೃತಿ ಸೌಂದರ್ಯವನ್ನು ಅಸ್ವಾದಿಸಲು ಗಾಜಿನ ಛಾವಣಿ(ವಿಸ್ಟಾಡೋಮ್) ಹೊಂದಿರುವ ಬೋಗಿಗಳನ್ನೊಳಗೊಂಡ ಬೆಂಗಳೂರು- ಮಂಗಳೂರು ರೈಲು ಸಂಚಾರ ಜುಲೈ 7ರಿಂದ ಆರಂಭವಾಗಲಿದೆ.

ಬೆಂಗಳೂರು- ಮಂಗಳೂರು ಮಧ್ಯೆ ಸಂಚರಿಸುವ ಮೂರು ರೈಲುಗಳ ದ್ವಿತೀಯ ದರ್ಜೆಯ ಬೋಗಿಯನ್ನು ತೆಗೆದು ತಲಾ ಎರಡು ವಿಸ್ಟಾಡೋಮ್ ಬೋಗಿಗಳನ್ನು ಜೋಡಿಸಲಾಗುತ್ತದೆ. ಇದರಿಂದ ಸಕಲೇಶಪುರ ಹಾಗೂ ಸುಬ್ರಹ್ಮಣ್ಯ ರೋಡ್ ನಿಲ್ದಾಣದವರೆಗೆ 56 ಕಿಮೀ. ಉದ್ದದ ಹಚ್ಚ ಹಸಿರಿನ ಪ್ರಕೃತಿ ಸೌಂದರ್ಯ, ನದಿ, ತೊರೆ, ಜಲಪಾತಗಳು ಸೊಬಗನ್ನು ಪ್ರಯಾಣಿಕರು ಆಸ್ವಾದಿಸಬಹುದಾಗಿದೆ.

ಗಾಜಿನ ಚಾವಣಿಯ ಬೋಗಿಯೊಳಗೆ 360 ಡಿಗ್ರಿಯಲ್ಲಿ ಸುತ್ತುವ ಆಸನದ ವ್ಯವಸ್ಥೆ ಅಳವಡಿಸಲಾಗಿದೆ. ಪಾರದರ್ಶಕ ಗಾಜಿನ ಕೋಚ್ ಆಗಿರುವುದರಿಂದ ಪ್ರಯಾಣಿಕರು ತನ್ನ ಇಕ್ಕಲೆಗಳ ಪ್ರಕೃತಿ ಸೊಬಗಿನ ಜತೆಗೆ ಎತ್ತರದ ಬೆಟ್ಟ, ಗಿರಿ, ಕಾನನ ಹಾಗೂ ಜಲಪಾತಗಳ ವೈಭವವನ್ನು ಕುಳಿತಲ್ಲೇ ಸವಿಯಬಹುದಾಗಿದೆ. ಬೋಗಿಯಲ್ಲಿ ಜಿಪಿಎಸ್ ಆಧಾರಿತ ಮಾಹಿತಿ ವ್ಯವಸ್ಥೆ, ಮೈಕ್ರೋ ಓವೆನ್, ಸಣ್ಣ ಫ್ರಿಡ್ಜ್ ಮತ್ತು ಎಸಿ ಸೌಲಭ್ಯವಿರುತ್ತದೆ. ಟಿಕೆಟ್ ದರ 1470 ರೂ. ನಿಗದಿಪಡಿಸಲಾಗಿದೆ. ಮೊದಲ ರೈಲು ಜುಲೈ 7ರಂದು ಯಶವಂತಪುರ ಜಂಕ್ಷನ್ ನಿಂದ ಹೊರಡಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು