3:39 AM Wednesday18 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ರೈಲಿನಲ್ಲೇ ಕೂತು ಪಶ್ಚಿಮಘಟ್ಟ ಸೊಬಗು ಆಸ್ವಾದಿಸಿ!: ಗಾಜಿನ ಚಾವಣಿಯಬೆಂಗಳೂರು- ಮಂಗಳೂರು ಟ್ರೈನ್ ಜು.7ರಂದು ಆರಂಭ

04/07/2021, 19:13

ಮಂಗಳೂರು(reporterkarnataka news): ಶಿರಾಡಿ ಘಾಟಿಯ ಪ್ರಕೃತಿ ಸೌಂದರ್ಯವನ್ನು ಅಸ್ವಾದಿಸಲು ಗಾಜಿನ ಛಾವಣಿ(ವಿಸ್ಟಾಡೋಮ್) ಹೊಂದಿರುವ ಬೋಗಿಗಳನ್ನೊಳಗೊಂಡ ಬೆಂಗಳೂರು- ಮಂಗಳೂರು ರೈಲು ಸಂಚಾರ ಜುಲೈ 7ರಿಂದ ಆರಂಭವಾಗಲಿದೆ.

ಬೆಂಗಳೂರು- ಮಂಗಳೂರು ಮಧ್ಯೆ ಸಂಚರಿಸುವ ಮೂರು ರೈಲುಗಳ ದ್ವಿತೀಯ ದರ್ಜೆಯ ಬೋಗಿಯನ್ನು ತೆಗೆದು ತಲಾ ಎರಡು ವಿಸ್ಟಾಡೋಮ್ ಬೋಗಿಗಳನ್ನು ಜೋಡಿಸಲಾಗುತ್ತದೆ. ಇದರಿಂದ ಸಕಲೇಶಪುರ ಹಾಗೂ ಸುಬ್ರಹ್ಮಣ್ಯ ರೋಡ್ ನಿಲ್ದಾಣದವರೆಗೆ 56 ಕಿಮೀ. ಉದ್ದದ ಹಚ್ಚ ಹಸಿರಿನ ಪ್ರಕೃತಿ ಸೌಂದರ್ಯ, ನದಿ, ತೊರೆ, ಜಲಪಾತಗಳು ಸೊಬಗನ್ನು ಪ್ರಯಾಣಿಕರು ಆಸ್ವಾದಿಸಬಹುದಾಗಿದೆ.

ಗಾಜಿನ ಚಾವಣಿಯ ಬೋಗಿಯೊಳಗೆ 360 ಡಿಗ್ರಿಯಲ್ಲಿ ಸುತ್ತುವ ಆಸನದ ವ್ಯವಸ್ಥೆ ಅಳವಡಿಸಲಾಗಿದೆ. ಪಾರದರ್ಶಕ ಗಾಜಿನ ಕೋಚ್ ಆಗಿರುವುದರಿಂದ ಪ್ರಯಾಣಿಕರು ತನ್ನ ಇಕ್ಕಲೆಗಳ ಪ್ರಕೃತಿ ಸೊಬಗಿನ ಜತೆಗೆ ಎತ್ತರದ ಬೆಟ್ಟ, ಗಿರಿ, ಕಾನನ ಹಾಗೂ ಜಲಪಾತಗಳ ವೈಭವವನ್ನು ಕುಳಿತಲ್ಲೇ ಸವಿಯಬಹುದಾಗಿದೆ. ಬೋಗಿಯಲ್ಲಿ ಜಿಪಿಎಸ್ ಆಧಾರಿತ ಮಾಹಿತಿ ವ್ಯವಸ್ಥೆ, ಮೈಕ್ರೋ ಓವೆನ್, ಸಣ್ಣ ಫ್ರಿಡ್ಜ್ ಮತ್ತು ಎಸಿ ಸೌಲಭ್ಯವಿರುತ್ತದೆ. ಟಿಕೆಟ್ ದರ 1470 ರೂ. ನಿಗದಿಪಡಿಸಲಾಗಿದೆ. ಮೊದಲ ರೈಲು ಜುಲೈ 7ರಂದು ಯಶವಂತಪುರ ಜಂಕ್ಷನ್ ನಿಂದ ಹೊರಡಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು