4:57 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ರೈಲಿನಲ್ಲೇ ಕೂತು ಪಶ್ಚಿಮಘಟ್ಟ ಸೊಬಗು ಆಸ್ವಾದಿಸಿ!: ಗಾಜಿನ ಚಾವಣಿಯಬೆಂಗಳೂರು- ಮಂಗಳೂರು ಟ್ರೈನ್ ಜು.7ರಂದು ಆರಂಭ

04/07/2021, 19:13

ಮಂಗಳೂರು(reporterkarnataka news): ಶಿರಾಡಿ ಘಾಟಿಯ ಪ್ರಕೃತಿ ಸೌಂದರ್ಯವನ್ನು ಅಸ್ವಾದಿಸಲು ಗಾಜಿನ ಛಾವಣಿ(ವಿಸ್ಟಾಡೋಮ್) ಹೊಂದಿರುವ ಬೋಗಿಗಳನ್ನೊಳಗೊಂಡ ಬೆಂಗಳೂರು- ಮಂಗಳೂರು ರೈಲು ಸಂಚಾರ ಜುಲೈ 7ರಿಂದ ಆರಂಭವಾಗಲಿದೆ.

ಬೆಂಗಳೂರು- ಮಂಗಳೂರು ಮಧ್ಯೆ ಸಂಚರಿಸುವ ಮೂರು ರೈಲುಗಳ ದ್ವಿತೀಯ ದರ್ಜೆಯ ಬೋಗಿಯನ್ನು ತೆಗೆದು ತಲಾ ಎರಡು ವಿಸ್ಟಾಡೋಮ್ ಬೋಗಿಗಳನ್ನು ಜೋಡಿಸಲಾಗುತ್ತದೆ. ಇದರಿಂದ ಸಕಲೇಶಪುರ ಹಾಗೂ ಸುಬ್ರಹ್ಮಣ್ಯ ರೋಡ್ ನಿಲ್ದಾಣದವರೆಗೆ 56 ಕಿಮೀ. ಉದ್ದದ ಹಚ್ಚ ಹಸಿರಿನ ಪ್ರಕೃತಿ ಸೌಂದರ್ಯ, ನದಿ, ತೊರೆ, ಜಲಪಾತಗಳು ಸೊಬಗನ್ನು ಪ್ರಯಾಣಿಕರು ಆಸ್ವಾದಿಸಬಹುದಾಗಿದೆ.

ಗಾಜಿನ ಚಾವಣಿಯ ಬೋಗಿಯೊಳಗೆ 360 ಡಿಗ್ರಿಯಲ್ಲಿ ಸುತ್ತುವ ಆಸನದ ವ್ಯವಸ್ಥೆ ಅಳವಡಿಸಲಾಗಿದೆ. ಪಾರದರ್ಶಕ ಗಾಜಿನ ಕೋಚ್ ಆಗಿರುವುದರಿಂದ ಪ್ರಯಾಣಿಕರು ತನ್ನ ಇಕ್ಕಲೆಗಳ ಪ್ರಕೃತಿ ಸೊಬಗಿನ ಜತೆಗೆ ಎತ್ತರದ ಬೆಟ್ಟ, ಗಿರಿ, ಕಾನನ ಹಾಗೂ ಜಲಪಾತಗಳ ವೈಭವವನ್ನು ಕುಳಿತಲ್ಲೇ ಸವಿಯಬಹುದಾಗಿದೆ. ಬೋಗಿಯಲ್ಲಿ ಜಿಪಿಎಸ್ ಆಧಾರಿತ ಮಾಹಿತಿ ವ್ಯವಸ್ಥೆ, ಮೈಕ್ರೋ ಓವೆನ್, ಸಣ್ಣ ಫ್ರಿಡ್ಜ್ ಮತ್ತು ಎಸಿ ಸೌಲಭ್ಯವಿರುತ್ತದೆ. ಟಿಕೆಟ್ ದರ 1470 ರೂ. ನಿಗದಿಪಡಿಸಲಾಗಿದೆ. ಮೊದಲ ರೈಲು ಜುಲೈ 7ರಂದು ಯಶವಂತಪುರ ಜಂಕ್ಷನ್ ನಿಂದ ಹೊರಡಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು