11:17 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ: ಸಂಸದ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

21/10/2024, 23:32

ಮಂಗಳೂರು(reporterkarnataka.com): ಮಂಗಳೂರು-ಕೇರಳ ಮಾರ್ಗವಾದ ಉಳ್ಳಾಲದ ತೊಕ್ಕೊಟ್ಟು ರೈಲ್ವೆ ಓವರ್‌ ಬ್ರಿಡ್ಜ್‌ ಹಳಿ ಮೇಲೆ ಕಲ್ಲುಗಳನ್ನು ಇಟ್ಟು ಅಪಾಯಕಾರಿ ಕೃತ್ಯವೆಸಗಿರುವುದು ಗಂಭೀರ ವಿಚಾರವಾಗಿದ್ದು, ಪೊಲೀಸರು ಕೂಡಲೇ ದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಆಗ್ರಹಿಸಿದ್ದಾರೆ.
ಮಂಗಳೂರಿನಲ್ಲಿ ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಕ್ಯಾ. ಚೌಟ ಅವರು, ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟು ವಿಕೃತಿ ಮೆರೆದಿರುವ ಈ ಕೃತ್ಯದ ಬಗ್ಗೆ ಈಗಾಗಲೇ ನಾನು ಸಂಬಂಧಪಟ್ಟ ಪೊಲೀಸರು ಹಾಗೂ ರೈಲ್ವೆ ಇಲಾಖೆ ರಕ್ಷಣಾ ಪಡೆ(RPF) ಅಧಿಕಾರಿಗಳ ಜತೆ ಮಾತನಾಡಿದ್ದೇನೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಬಾರಿಗೆ ಈ ರೀತಿಯ ಘಟನೆ ನಡೆಯುತ್ತಿದೆ. ರೈಲ್ವೆ ಇಲಾಖೆಗೆ ಸೇರಿದ ನಮ್ಮ ರಾಷ್ಟ್ರೀಯ ಸಂಪತ್ತಿನ ಮೇಲೆ ಈ ರೀತಿ ದಾಳಿ ಮಾಡಿ ಅದನ್ನು ಹಾನಿಗೊಳಿಸುವುದಕ್ಕೆ ಪ್ರಯತ್ನಿಸಿರುವುದು ದೇಶದ್ರೋಹದ ಕೆಲಸವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾರ್ವಜನಿಕರು ಕೂಡ ನಮ್ಮ ರಾಷ್ಟ್ರೀಯ ಸಂಪತ್ತುಗಳನ್ನು ನಮ್ಮ ಸೊತ್ತು ಎನ್ನುವ ರೀತಿಯಲ್ಲಿ ರಕ್ಷಿಸುವ ಕೆಲಸವನ್ನು ಮಾಡಬೇಕು. ಜತೆಗೆ, ಸಮಾಜದಲ್ಲಿ ಈ ರೀತಿಯ ಮಾನಸಿಕತೆ ಹೊಂದಿರುವ ವ್ಯಕ್ತಿಗಳು ಯಾರಿದ್ದಾರೆಯೋ ಅಂಥಹ ದೇಶದ್ರೋಹಿಗಳನ್ನು ಗುರುತಿಸುವ ಕೆಲಸವನ್ನು ಜನತೆ ಕೂಡ ಮಾಡಬೇಕೆಂದು ಕ್ಯಾ. ಚೌಟ ಅವರು ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು