2:22 PM Tuesday13 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ರೈಲ್ವೆ ಮೇಲ್ಸೇತುವೆಗೆ ಮಾಜಿ ಸಂಸದ ದಿವಂಗತ ಶ್ರೀನಿವಾಸ್ ಪ್ರಸಾದ್ ಹೆಸರಿಡುವಂತೆ ಬಿಜೆಪಿ ಒತ್ತಾಯ

16/10/2024, 21:42

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡಿನಲ್ಲಿ ನಿರ್ಮಾಣಗೊಂಡಿರುವ ನೂತನ ನಾಲ್ಕು ಪಥದ ರೈಲ್ವೆ ಮೇಲ್ಸೇತುವೆಗೆ ಹಿರಿಯ ಮುತ್ಸದ್ದಿ ಕೇಂದ್ರದ ಮಾಜಿ ಸಚಿವ ಹಾಗೂ ಸಂಸದರಾಗಿದ್ದ ದಿವಂಗತ ವಿ ಶ್ರೀನಿವಾಸ ಪ್ರಸಾದ್ ಅವರ ಹೆಸರನ್ನು ನಾಮಕರಣ ಮಾಡುವಂತೆ ಬಿಜೆಪಿ ಮುಖಂಡ ಹಾಗೂ ನಗರಸಭಾ ಸದಸ್ಯ ಮಹೇಶ್ ಅತ್ತಿಖಾನೆ ಸರ್ಕಾರವನ್ನು ಒತ್ತಾಯಿಸಿದ್ದಾರೆ .
ಇಂದು ತಾಲೂಕು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,ಶ್ರೀನಿವಾಸ್ ಪ್ರಸಾದ್ ಅವರು ಮೈಸೂರು ಮತ್ತು ಚಾಮರಾಜನಗರ ಎರಡು ಜಿಲ್ಲೆಗಳ ಪ್ರಭಾವಿ ನಾಯಕರಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಚಿವರಾಗಿ, ಸಂಸದರಾಗಿ, ಶಾಸಕರಾಗಿ ಈ ಭಾಗದಲ್ಲಿ ಹಲವಾರು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಹಾಗಾಗಿ ಅವರ ನೆನಪಿಗಾಗಿ ಅವರ ಅವಧಿಯಲ್ಲಿ ನಡೆದ ಈ ರೈಲ್ವೆ ಮೇಲ್ಸೇತುವೆಗೆ ಅವರ ಹೆಸರಿಡಬೇಕೆಂದು ಒತ್ತಾಯಿಸಿದರು.
ಎರಡು ಜಿಲ್ಲೆಗಳಲ್ಲಿ ಪ್ರಮುಖವಾಗಿ ಎಲ್ಲೂ ಯಾವುದೇ ರಸ್ತೆಗಳಿಗಾಗಲಿ, ಸೇತುವೆಗಳಿಗಾಗಲಿ, ವೃತ್ತಗಳಿಗಾಗಲಿ ಅವರ ಹೆಸರಿಟ್ಟಿರುವುದಿಲ್ಲ. ಆ ಕಾರಣಕ್ಕಾಗಿ ಅವರ ಹೆಸರು ಶಾಶ್ವತವಾಗಿ ಉಳಿಯಬೇಕಾದರೆ ಈ ಸೇತುವೆಗೆ ಅವರ ಹೆಸರು ಸೂಕ್ತ ಇದರಲ್ಲಿ ಯಾವುದೇ ರಾಜಕೀಯ ಬೇಡ ಎಂದು ತಿಳಿಸಿದರು.
ಈ ಸಂದರ್ಭ ಮುಂದುವರೆದು ಮಾತನಾಡಿದ ಅವರು, ನಿನ್ನೆ ನಡೆದ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಚರ್ಚೆಗೆ ಬಂದ ನಗರ ಸಭೆಯ ಅಧಿಕಾರಿಗಳು ನಡೆಸಿರುವ ಹಗರಣಗಳ ಬಗ್ಗೆ ಲೋಕಾಯುಕ್ತ ತನಿಖೆ ನಡೆಸುವಂತೆ ಖುದ್ದು ಶಾಸಕರೇ ಹೇಳಿದ್ದಾರೆ. ಹಾಗಾಗಿ ನಾವು ಅವರಿಗೆ ಅಭಿನಂದಿಸುತ್ತೇವೆ. ಆದರೆ ಅಂತಹ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿಯೋ ಇಲ್ಲ ವರ್ಗಾವಣೆ ಮಾಡಿಯೂ ತನಿಖೆ ನಡೆಸಿದರೆ ಸೂಕ್ತ ಇಲ್ಲವಾದಲ್ಲಿ ಅವರೇ ಇದ್ದರೆ ಸಾಕ್ಷ್ಯ ನಾಶಪಡಿಸಿ ತನಿಖೆಗೆ ಅಡಚಣೆ ಉಂಟು ಮಾಡುತ್ತಾರೆ. ಅದಕ್ಕಾಗಿ ಶಾಸಕರು ಅಂಥವರ ವಿರುದ್ಧ ಕ್ರಮ ಕೈಗೊಂಡು ನಂತರ ತನಿಖೆ ನಡೆಸಲಿ ಎಂದು ಮನವಿ ಮಾಡಿಕೊಂಡರು.
ಗೋಷ್ಠಿಯಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷ ಸಿದ್ದರಾಜು, ನಗರಸಭಾ ಸದಸ್ಯರುಗಳಾದ ಮಹದೇವಪ್ರಸಾದ್,ದೇವ, ಕಪಿಲೇಶ್,ಶಂಕರಪ್ಪ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು