12:35 AM Wednesday22 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ರೈಲ್ವೆ ಮೇಲ್ಸೇತುವೆಗೆ ಮಾಜಿ ಸಂಸದ ದಿವಂಗತ ಶ್ರೀನಿವಾಸ್ ಪ್ರಸಾದ್ ಹೆಸರಿಡುವಂತೆ ಬಿಜೆಪಿ ಒತ್ತಾಯ

16/10/2024, 21:42

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡಿನಲ್ಲಿ ನಿರ್ಮಾಣಗೊಂಡಿರುವ ನೂತನ ನಾಲ್ಕು ಪಥದ ರೈಲ್ವೆ ಮೇಲ್ಸೇತುವೆಗೆ ಹಿರಿಯ ಮುತ್ಸದ್ದಿ ಕೇಂದ್ರದ ಮಾಜಿ ಸಚಿವ ಹಾಗೂ ಸಂಸದರಾಗಿದ್ದ ದಿವಂಗತ ವಿ ಶ್ರೀನಿವಾಸ ಪ್ರಸಾದ್ ಅವರ ಹೆಸರನ್ನು ನಾಮಕರಣ ಮಾಡುವಂತೆ ಬಿಜೆಪಿ ಮುಖಂಡ ಹಾಗೂ ನಗರಸಭಾ ಸದಸ್ಯ ಮಹೇಶ್ ಅತ್ತಿಖಾನೆ ಸರ್ಕಾರವನ್ನು ಒತ್ತಾಯಿಸಿದ್ದಾರೆ .
ಇಂದು ತಾಲೂಕು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,ಶ್ರೀನಿವಾಸ್ ಪ್ರಸಾದ್ ಅವರು ಮೈಸೂರು ಮತ್ತು ಚಾಮರಾಜನಗರ ಎರಡು ಜಿಲ್ಲೆಗಳ ಪ್ರಭಾವಿ ನಾಯಕರಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಚಿವರಾಗಿ, ಸಂಸದರಾಗಿ, ಶಾಸಕರಾಗಿ ಈ ಭಾಗದಲ್ಲಿ ಹಲವಾರು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಹಾಗಾಗಿ ಅವರ ನೆನಪಿಗಾಗಿ ಅವರ ಅವಧಿಯಲ್ಲಿ ನಡೆದ ಈ ರೈಲ್ವೆ ಮೇಲ್ಸೇತುವೆಗೆ ಅವರ ಹೆಸರಿಡಬೇಕೆಂದು ಒತ್ತಾಯಿಸಿದರು.
ಎರಡು ಜಿಲ್ಲೆಗಳಲ್ಲಿ ಪ್ರಮುಖವಾಗಿ ಎಲ್ಲೂ ಯಾವುದೇ ರಸ್ತೆಗಳಿಗಾಗಲಿ, ಸೇತುವೆಗಳಿಗಾಗಲಿ, ವೃತ್ತಗಳಿಗಾಗಲಿ ಅವರ ಹೆಸರಿಟ್ಟಿರುವುದಿಲ್ಲ. ಆ ಕಾರಣಕ್ಕಾಗಿ ಅವರ ಹೆಸರು ಶಾಶ್ವತವಾಗಿ ಉಳಿಯಬೇಕಾದರೆ ಈ ಸೇತುವೆಗೆ ಅವರ ಹೆಸರು ಸೂಕ್ತ ಇದರಲ್ಲಿ ಯಾವುದೇ ರಾಜಕೀಯ ಬೇಡ ಎಂದು ತಿಳಿಸಿದರು.
ಈ ಸಂದರ್ಭ ಮುಂದುವರೆದು ಮಾತನಾಡಿದ ಅವರು, ನಿನ್ನೆ ನಡೆದ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಚರ್ಚೆಗೆ ಬಂದ ನಗರ ಸಭೆಯ ಅಧಿಕಾರಿಗಳು ನಡೆಸಿರುವ ಹಗರಣಗಳ ಬಗ್ಗೆ ಲೋಕಾಯುಕ್ತ ತನಿಖೆ ನಡೆಸುವಂತೆ ಖುದ್ದು ಶಾಸಕರೇ ಹೇಳಿದ್ದಾರೆ. ಹಾಗಾಗಿ ನಾವು ಅವರಿಗೆ ಅಭಿನಂದಿಸುತ್ತೇವೆ. ಆದರೆ ಅಂತಹ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿಯೋ ಇಲ್ಲ ವರ್ಗಾವಣೆ ಮಾಡಿಯೂ ತನಿಖೆ ನಡೆಸಿದರೆ ಸೂಕ್ತ ಇಲ್ಲವಾದಲ್ಲಿ ಅವರೇ ಇದ್ದರೆ ಸಾಕ್ಷ್ಯ ನಾಶಪಡಿಸಿ ತನಿಖೆಗೆ ಅಡಚಣೆ ಉಂಟು ಮಾಡುತ್ತಾರೆ. ಅದಕ್ಕಾಗಿ ಶಾಸಕರು ಅಂಥವರ ವಿರುದ್ಧ ಕ್ರಮ ಕೈಗೊಂಡು ನಂತರ ತನಿಖೆ ನಡೆಸಲಿ ಎಂದು ಮನವಿ ಮಾಡಿಕೊಂಡರು.
ಗೋಷ್ಠಿಯಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷ ಸಿದ್ದರಾಜು, ನಗರಸಭಾ ಸದಸ್ಯರುಗಳಾದ ಮಹದೇವಪ್ರಸಾದ್,ದೇವ, ಕಪಿಲೇಶ್,ಶಂಕರಪ್ಪ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು