3:30 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ರೈಲ್ವೆ ನಿಲ್ದಾಣದಲ್ಲಿ 16 ಕೋಟಿ ಮೌಲ್ಯದ GST ದಾಖಲೆಯಿಲ್ಲದ 32 ಕೆ.ಜಿ ಚಿನ್ನ ವಶ: ಕೋನಾರ್ಕ್ ಎಕ್ಸ್ ಪ್ರೆಸ್‍ನಲ್ಲಿ ಸಾಗಾಟ

03/03/2022, 13:53

ಭುವನೇಶ್ವರ(reporterkarnataka.com): ಕೋನಾರ್ಕ್ ಎಕ್ಸ್ ಪ್ರೆಸ್‍ನಲ್ಲಿ ಸಾಗಿಸುತ್ತಿದ್ದ ಸುಮಾರು 16 ಕೋಟಿ ಮೌಲ್ಯದ 32 ಕೆ.ಜಿ ಚಿನ್ನವನ್ನು ಗವರ್ನ್‍ಮೆಂಟ್ ರೈಲ್ವೇ ಪೊಲೀಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಮುಂಬೈಯಿಂದ ಮಂಗಳವಾರ ರಾತ್ರಿ 11.30ರ ಸುಮಾರಿಗೆ ಭುವನೇಶ್ವರಕ್ಕೆ ಆಗಮಿಸಿದ ರೈಲಿನಲ್ಲಿ ಅಕ್ರಮ ಚಿನ್ನ ಪತ್ತೆಯಾಗಿದ್ದು, ಬುಧವಾರ ಅವುಗಳನ್ನು ವಶಕ್ಕೆ ಪಡೆಯಲಾಗಿದೆ. ಜೊತೆಗೆ ನಾಲ್ವರನ್ನು ಕೂಡ ವಶಕ್ಕೆ ಪಡೆದುಕೊಳ್ಳಲಾಗಿದೆ.

ಅಧಿಕಾರಿಗಳ ವಶವಾದ ನಾಲ್ವರನ್ನು ಹಸ್ಮುಖಲಾಲ್ ದೀಕ್ಷಿತ್, ಮಹೇಶ್ ಭೋಮ್ಸರ್, ಸುರೇಶ್ ಸಹದೇವ್ ಖರೆ ಮತ್ತು ದೀಪಕ್ ಪಟೇಲ್ ಎಂದು ಗುರುತಿಸಲಾಗಿದೆ. ಸರಕು ಮತ್ತು ಸೇವಾ ತೆರಿಗೆ(GST) ದಾಖಲೆಗಳನ್ನು ಸಲ್ಲಿಸಲು ವಿಫಲರಾದ ಹಿನ್ನೆಲೆಯಲ್ಲಿ ವಿಚಾರಣೆಗಾಗಿ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಆರ್ ಪಿ  ಸ್ಪಷ್ಟಪಡಿಸಿದೆ.ನಾಲ್ವರು ವ್ಯಕ್ತಿಗಳು ಮುಂಬೈಯಿಂದ ನಾಲ್ಕು ಬ್ಯಾಗ್ ಗಳ ಜೊತೆ ಬಂದಿದ್ದರು. ಒಂದೊಂದು ಬ್ಯಾಗ್ ನಲ್ಲಿ ಸುಮಾರು 8 ಕೆ.ಜಿಯಷ್ಟು ಬಂಗಾರ ತುಂಬಿದ್ದರು. ಭುವನೇಶ್ವರದಲ್ಲಿ ಚಿನ್ನದ ವ್ಯಾಪಾರಿಗಳಿಗೆ ಮಾರಾಟ ಮಾಡುವುದು ಅವರ ಪ್ಲ್ಯಾನ್ ಆಗಿತ್ತು. ಈ ವೇಳೆ ನಾಲ್ವರು ವ್ಯಕ್ತಿಗಳ ಮೇಲೆ ಅನುಮಾನ ಬಂದು ಪರಿಶೀಲನೆ ನಡೆಸಿದಾಗ ಚಿನ್ನ ಸಾಗಾಟ ಮಾಡುತ್ತಿರುವುದು ಬಯಲಾಗಿದೆ ಎಂದು ಭುವನೇಶ್ವರದ ಜಿಆರ್ ಪಿ ಇನ್ಸ್ ಪೆಕ್ಟರ್ ತಿಳಿಸಿದ್ದಾರೆ.ಈ ಆಭರಣಗಳಿಗೆ ಅವರು ತೆರಿಗೆ ಪಾವತಿಸುತ್ತಿರಲಿಲ್ಲ. ಹೀಗಾಗಿ ಈ ಚಿನ್ನವನ್ನು ಯಾರಿಗೆ ನೀಡುತ್ತಿದ್ದೇವೆ ಎಂಬುದನ್ನು ಸರಿಯಾಗಿ ಬಾಯಿಬಿಟ್ಟಿಲ್ಲ. ಒಟ್ಟಿನಲ್ಲಿ ಈ ಸಂಬಂಧ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಇತ್ತ 32 ಕೆ.ಜಿ ಚಿನ್ನವನ್ನು ಜಿಆರ್‍ಪಿ ಅಧಿಕಾರಿಗಳು ಕೈಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು