1:42 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ರೈಲ್ವೆ ನಿಲ್ದಾಣದಲ್ಲಿ 16 ಕೋಟಿ ಮೌಲ್ಯದ GST ದಾಖಲೆಯಿಲ್ಲದ 32 ಕೆ.ಜಿ ಚಿನ್ನ ವಶ: ಕೋನಾರ್ಕ್ ಎಕ್ಸ್ ಪ್ರೆಸ್‍ನಲ್ಲಿ ಸಾಗಾಟ

03/03/2022, 13:53

ಭುವನೇಶ್ವರ(reporterkarnataka.com): ಕೋನಾರ್ಕ್ ಎಕ್ಸ್ ಪ್ರೆಸ್‍ನಲ್ಲಿ ಸಾಗಿಸುತ್ತಿದ್ದ ಸುಮಾರು 16 ಕೋಟಿ ಮೌಲ್ಯದ 32 ಕೆ.ಜಿ ಚಿನ್ನವನ್ನು ಗವರ್ನ್‍ಮೆಂಟ್ ರೈಲ್ವೇ ಪೊಲೀಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಮುಂಬೈಯಿಂದ ಮಂಗಳವಾರ ರಾತ್ರಿ 11.30ರ ಸುಮಾರಿಗೆ ಭುವನೇಶ್ವರಕ್ಕೆ ಆಗಮಿಸಿದ ರೈಲಿನಲ್ಲಿ ಅಕ್ರಮ ಚಿನ್ನ ಪತ್ತೆಯಾಗಿದ್ದು, ಬುಧವಾರ ಅವುಗಳನ್ನು ವಶಕ್ಕೆ ಪಡೆಯಲಾಗಿದೆ. ಜೊತೆಗೆ ನಾಲ್ವರನ್ನು ಕೂಡ ವಶಕ್ಕೆ ಪಡೆದುಕೊಳ್ಳಲಾಗಿದೆ.

ಅಧಿಕಾರಿಗಳ ವಶವಾದ ನಾಲ್ವರನ್ನು ಹಸ್ಮುಖಲಾಲ್ ದೀಕ್ಷಿತ್, ಮಹೇಶ್ ಭೋಮ್ಸರ್, ಸುರೇಶ್ ಸಹದೇವ್ ಖರೆ ಮತ್ತು ದೀಪಕ್ ಪಟೇಲ್ ಎಂದು ಗುರುತಿಸಲಾಗಿದೆ. ಸರಕು ಮತ್ತು ಸೇವಾ ತೆರಿಗೆ(GST) ದಾಖಲೆಗಳನ್ನು ಸಲ್ಲಿಸಲು ವಿಫಲರಾದ ಹಿನ್ನೆಲೆಯಲ್ಲಿ ವಿಚಾರಣೆಗಾಗಿ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಆರ್ ಪಿ  ಸ್ಪಷ್ಟಪಡಿಸಿದೆ.ನಾಲ್ವರು ವ್ಯಕ್ತಿಗಳು ಮುಂಬೈಯಿಂದ ನಾಲ್ಕು ಬ್ಯಾಗ್ ಗಳ ಜೊತೆ ಬಂದಿದ್ದರು. ಒಂದೊಂದು ಬ್ಯಾಗ್ ನಲ್ಲಿ ಸುಮಾರು 8 ಕೆ.ಜಿಯಷ್ಟು ಬಂಗಾರ ತುಂಬಿದ್ದರು. ಭುವನೇಶ್ವರದಲ್ಲಿ ಚಿನ್ನದ ವ್ಯಾಪಾರಿಗಳಿಗೆ ಮಾರಾಟ ಮಾಡುವುದು ಅವರ ಪ್ಲ್ಯಾನ್ ಆಗಿತ್ತು. ಈ ವೇಳೆ ನಾಲ್ವರು ವ್ಯಕ್ತಿಗಳ ಮೇಲೆ ಅನುಮಾನ ಬಂದು ಪರಿಶೀಲನೆ ನಡೆಸಿದಾಗ ಚಿನ್ನ ಸಾಗಾಟ ಮಾಡುತ್ತಿರುವುದು ಬಯಲಾಗಿದೆ ಎಂದು ಭುವನೇಶ್ವರದ ಜಿಆರ್ ಪಿ ಇನ್ಸ್ ಪೆಕ್ಟರ್ ತಿಳಿಸಿದ್ದಾರೆ.ಈ ಆಭರಣಗಳಿಗೆ ಅವರು ತೆರಿಗೆ ಪಾವತಿಸುತ್ತಿರಲಿಲ್ಲ. ಹೀಗಾಗಿ ಈ ಚಿನ್ನವನ್ನು ಯಾರಿಗೆ ನೀಡುತ್ತಿದ್ದೇವೆ ಎಂಬುದನ್ನು ಸರಿಯಾಗಿ ಬಾಯಿಬಿಟ್ಟಿಲ್ಲ. ಒಟ್ಟಿನಲ್ಲಿ ಈ ಸಂಬಂಧ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಇತ್ತ 32 ಕೆ.ಜಿ ಚಿನ್ನವನ್ನು ಜಿಆರ್‍ಪಿ ಅಧಿಕಾರಿಗಳು ಕೈಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು