4:14 AM Thursday5 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ಮಳೆ ನೀರಿನಿಂದ ತುಂಬಿ ಸಂಚಾರ ಸ್ಥಗಿತಗೊಂಡ ಬಜಾಲ್ ಅಂಡರ್ ಪಾಸ್: ಪಾಲಿಕೆ ಕಮಿಷನರ್ ಸ್ಥಳಕ್ಕೆ ಭೇಟಿ; ಪರಿಶೀಲನೆ

26/06/2024, 16:45

ಮಂಗಳೂರು(reporterkarnataka.com):ನಗರದ ಹೊರವಲಯದ ಪಡೀಲ್ ಸಮೀಪದ ಬಜಾಲ್ ನ ಅಂಡರ್ ಪಾಸ್ ನಲ್ಲಿ ಮಳೆ ನೀರು ನಿಂತು ವಾಹನ ಸಂಚಾರ ಸ್ಥಗಿತಗೊಂಡಿದ್ದು, ಸ್ಥಳಕ್ಕೆ ಮಂಗಳೂರು ಮಹಾನಗರಪಾಲಿಕೆ ಕಮಿಷನರ್ ಆನಂದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಈ ಸಂದರ್ಭದಲ್ಲಿ ಪಾಲಿಕೆಯ ಸ್ಥಳೀಯ ಕಾರ್ಪೊರೇಟರ್ ಹಾಗೂ ಪಾಲಿಕೆಯ ಚೀಫ್ ಎಂಜಿನಿಯರ್ ನರೇಶ್ ಶೆಣೈ ಉಪಸ್ಥಿತರಿದ್ದರು.
ಕಳೆದ ಸರಿ ಸುಮಾರು 10-15 ವರ್ಷಗಳಿಂದ ಬಜಾಲ್ ಅಂಡರ್ ಪಾಸ್ ಸಮಸ್ಯೆ ಜೀವಂತವಾಗಿದೆ.
ಜಿಲ್ಲೆಯ ವಿವಿಧ ಭಾಗಗಳಿಂದ ಬಜಾಲ್, ಜಲ್ಲಿಗುಡ್ಡೆ, ವೀರನಗರ, ವಿಜಯನಗರ ಕಡೆಗೆ, ಎಕ್ಕೂರು, ಜಪ್ಪಿನ ಮೊಗರು ಪ್ರಯಾಣಿಸುವವರು ಇದೇ ಅಂಡರ್ ಪಾಸ್ ಮೂಲಕವೇ ಸಂಚರಿಸಬೇಕು. ಅಷ್ಟೇ ಅಲ್ಲದೆ ಜಂಕ್ಷನ್ ರೈಲ್ವೆ ಸ್ಟೇಷನಿಗೆ ಕೂಡ ಇದೇ ದಾರಿಯಾಗಿ ಸಾಗಬೇಕು. ಇದೀಗ ಸಂಚಾರ ಕಡಿತಗೊಂಡಿದೆ. ವಾಹನ ಕೆಟ್ಟು ನಿಂತಿದೆ. ಬಸ್ ಸಂಚಾರ ನಿಂತಿದೆ. ಜತೆಗೆ ಕಾಲ್ನಡಿಗೆಯಲ್ಲಿ ಕೂಡ ಈ ಅಂಡರ್ ಪಾಸ್ ಮೂಲಕ ತೆರಳಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರತಿ ವರ್ಷ ಮಳೆಗಾಲದಲ್ಲಿ ಇಲ್ಲಿ ಎರಡೆರಡು ಪಂಪ್ ಅಳವಡಿಸಿ ನೀರು ಖಾಲಿ ಮಾಡುವ ಕ್ರಿಯೆ ನಡೆಯುತ್ತಿತ್ರು. ಪಂಪ್ ಗೆ ಬಾಡಿಗೆ ಮತ್ತು ಡೀಸೆಲ್ ಹಣವನ್ನು ಸ್ಥಳೀಯಾಡಳಿತ ಭರಿಸಬೇಕಾಗಿದೆ. ಅಂದ್ರೆ ನಮ್ಮ ನಿಮ್ಮ ತೆರಿಗೆ ಹಣವನ್ನು ನೀರು ಖಾಲಿ ಮಾಡಲು ಉಪಯೋಗಿಸುತ್ತಿದ್ದರು. ಈ ವರ್ಷವೂ ಅದರ ಪುನರಾವರ್ತನೆ ಆಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು