5:45 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:…

ಇತ್ತೀಚಿನ ಸುದ್ದಿ

ಮಳೆ ನೀರಿನಿಂದ ತುಂಬಿ ಸಂಚಾರ ಸ್ಥಗಿತಗೊಂಡ ಬಜಾಲ್ ಅಂಡರ್ ಪಾಸ್: ಪಾಲಿಕೆ ಕಮಿಷನರ್ ಸ್ಥಳಕ್ಕೆ ಭೇಟಿ; ಪರಿಶೀಲನೆ

26/06/2024, 16:45

ಮಂಗಳೂರು(reporterkarnataka.com):ನಗರದ ಹೊರವಲಯದ ಪಡೀಲ್ ಸಮೀಪದ ಬಜಾಲ್ ನ ಅಂಡರ್ ಪಾಸ್ ನಲ್ಲಿ ಮಳೆ ನೀರು ನಿಂತು ವಾಹನ ಸಂಚಾರ ಸ್ಥಗಿತಗೊಂಡಿದ್ದು, ಸ್ಥಳಕ್ಕೆ ಮಂಗಳೂರು ಮಹಾನಗರಪಾಲಿಕೆ ಕಮಿಷನರ್ ಆನಂದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಈ ಸಂದರ್ಭದಲ್ಲಿ ಪಾಲಿಕೆಯ ಸ್ಥಳೀಯ ಕಾರ್ಪೊರೇಟರ್ ಹಾಗೂ ಪಾಲಿಕೆಯ ಚೀಫ್ ಎಂಜಿನಿಯರ್ ನರೇಶ್ ಶೆಣೈ ಉಪಸ್ಥಿತರಿದ್ದರು.
ಕಳೆದ ಸರಿ ಸುಮಾರು 10-15 ವರ್ಷಗಳಿಂದ ಬಜಾಲ್ ಅಂಡರ್ ಪಾಸ್ ಸಮಸ್ಯೆ ಜೀವಂತವಾಗಿದೆ.
ಜಿಲ್ಲೆಯ ವಿವಿಧ ಭಾಗಗಳಿಂದ ಬಜಾಲ್, ಜಲ್ಲಿಗುಡ್ಡೆ, ವೀರನಗರ, ವಿಜಯನಗರ ಕಡೆಗೆ, ಎಕ್ಕೂರು, ಜಪ್ಪಿನ ಮೊಗರು ಪ್ರಯಾಣಿಸುವವರು ಇದೇ ಅಂಡರ್ ಪಾಸ್ ಮೂಲಕವೇ ಸಂಚರಿಸಬೇಕು. ಅಷ್ಟೇ ಅಲ್ಲದೆ ಜಂಕ್ಷನ್ ರೈಲ್ವೆ ಸ್ಟೇಷನಿಗೆ ಕೂಡ ಇದೇ ದಾರಿಯಾಗಿ ಸಾಗಬೇಕು. ಇದೀಗ ಸಂಚಾರ ಕಡಿತಗೊಂಡಿದೆ. ವಾಹನ ಕೆಟ್ಟು ನಿಂತಿದೆ. ಬಸ್ ಸಂಚಾರ ನಿಂತಿದೆ. ಜತೆಗೆ ಕಾಲ್ನಡಿಗೆಯಲ್ಲಿ ಕೂಡ ಈ ಅಂಡರ್ ಪಾಸ್ ಮೂಲಕ ತೆರಳಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರತಿ ವರ್ಷ ಮಳೆಗಾಲದಲ್ಲಿ ಇಲ್ಲಿ ಎರಡೆರಡು ಪಂಪ್ ಅಳವಡಿಸಿ ನೀರು ಖಾಲಿ ಮಾಡುವ ಕ್ರಿಯೆ ನಡೆಯುತ್ತಿತ್ರು. ಪಂಪ್ ಗೆ ಬಾಡಿಗೆ ಮತ್ತು ಡೀಸೆಲ್ ಹಣವನ್ನು ಸ್ಥಳೀಯಾಡಳಿತ ಭರಿಸಬೇಕಾಗಿದೆ. ಅಂದ್ರೆ ನಮ್ಮ ನಿಮ್ಮ ತೆರಿಗೆ ಹಣವನ್ನು ನೀರು ಖಾಲಿ ಮಾಡಲು ಉಪಯೋಗಿಸುತ್ತಿದ್ದರು. ಈ ವರ್ಷವೂ ಅದರ ಪುನರಾವರ್ತನೆ ಆಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು