9:41 PM Saturday12 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಮಳೆ ನೀರಿನಿಂದ ತುಂಬಿ ಸಂಚಾರ ಸ್ಥಗಿತಗೊಂಡ ಬಜಾಲ್ ಅಂಡರ್ ಪಾಸ್: ಪಾಲಿಕೆ ಕಮಿಷನರ್ ಸ್ಥಳಕ್ಕೆ ಭೇಟಿ; ಪರಿಶೀಲನೆ

26/06/2024, 16:45

ಮಂಗಳೂರು(reporterkarnataka.com):ನಗರದ ಹೊರವಲಯದ ಪಡೀಲ್ ಸಮೀಪದ ಬಜಾಲ್ ನ ಅಂಡರ್ ಪಾಸ್ ನಲ್ಲಿ ಮಳೆ ನೀರು ನಿಂತು ವಾಹನ ಸಂಚಾರ ಸ್ಥಗಿತಗೊಂಡಿದ್ದು, ಸ್ಥಳಕ್ಕೆ ಮಂಗಳೂರು ಮಹಾನಗರಪಾಲಿಕೆ ಕಮಿಷನರ್ ಆನಂದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಈ ಸಂದರ್ಭದಲ್ಲಿ ಪಾಲಿಕೆಯ ಸ್ಥಳೀಯ ಕಾರ್ಪೊರೇಟರ್ ಹಾಗೂ ಪಾಲಿಕೆಯ ಚೀಫ್ ಎಂಜಿನಿಯರ್ ನರೇಶ್ ಶೆಣೈ ಉಪಸ್ಥಿತರಿದ್ದರು.
ಕಳೆದ ಸರಿ ಸುಮಾರು 10-15 ವರ್ಷಗಳಿಂದ ಬಜಾಲ್ ಅಂಡರ್ ಪಾಸ್ ಸಮಸ್ಯೆ ಜೀವಂತವಾಗಿದೆ.
ಜಿಲ್ಲೆಯ ವಿವಿಧ ಭಾಗಗಳಿಂದ ಬಜಾಲ್, ಜಲ್ಲಿಗುಡ್ಡೆ, ವೀರನಗರ, ವಿಜಯನಗರ ಕಡೆಗೆ, ಎಕ್ಕೂರು, ಜಪ್ಪಿನ ಮೊಗರು ಪ್ರಯಾಣಿಸುವವರು ಇದೇ ಅಂಡರ್ ಪಾಸ್ ಮೂಲಕವೇ ಸಂಚರಿಸಬೇಕು. ಅಷ್ಟೇ ಅಲ್ಲದೆ ಜಂಕ್ಷನ್ ರೈಲ್ವೆ ಸ್ಟೇಷನಿಗೆ ಕೂಡ ಇದೇ ದಾರಿಯಾಗಿ ಸಾಗಬೇಕು. ಇದೀಗ ಸಂಚಾರ ಕಡಿತಗೊಂಡಿದೆ. ವಾಹನ ಕೆಟ್ಟು ನಿಂತಿದೆ. ಬಸ್ ಸಂಚಾರ ನಿಂತಿದೆ. ಜತೆಗೆ ಕಾಲ್ನಡಿಗೆಯಲ್ಲಿ ಕೂಡ ಈ ಅಂಡರ್ ಪಾಸ್ ಮೂಲಕ ತೆರಳಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರತಿ ವರ್ಷ ಮಳೆಗಾಲದಲ್ಲಿ ಇಲ್ಲಿ ಎರಡೆರಡು ಪಂಪ್ ಅಳವಡಿಸಿ ನೀರು ಖಾಲಿ ಮಾಡುವ ಕ್ರಿಯೆ ನಡೆಯುತ್ತಿತ್ರು. ಪಂಪ್ ಗೆ ಬಾಡಿಗೆ ಮತ್ತು ಡೀಸೆಲ್ ಹಣವನ್ನು ಸ್ಥಳೀಯಾಡಳಿತ ಭರಿಸಬೇಕಾಗಿದೆ. ಅಂದ್ರೆ ನಮ್ಮ ನಿಮ್ಮ ತೆರಿಗೆ ಹಣವನ್ನು ನೀರು ಖಾಲಿ ಮಾಡಲು ಉಪಯೋಗಿಸುತ್ತಿದ್ದರು. ಈ ವರ್ಷವೂ ಅದರ ಪುನರಾವರ್ತನೆ ಆಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು