2:22 PM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ರಸ್ತೆಯಲ್ಲೇ ಹರಿಯುವ ಮಳೆ ನೀರು: ಅವೈಜ್ಞಾನಿಕ ಕಾಮಗಾರಿ ವಿರುದ್ಧ ಹಾರೆ ಹಿಡಿದು ತೋಡು ಮಾಡಿಕೊಟ್ಟ ಪುತ್ತೂರು ಶಾಸಕ ಅಶೋಕ್ ರೈ!

15/06/2025, 20:00

ಪುತ್ತೂರು(reporterkarnataka.com): ಪುತ್ತೂರು ತಾಲ್ಲೂಕಿನಲ್ಲಿ ವರ್ಷದಿಂದ ವರ್ಷಕ್ಕೆ ಮಳೆಗಾಲದಲ್ಲಿ ಉಂಟಾಗುತ್ತಿರುವ ನೀರು ನಿಲ್ಲುವ ಸಮಸ್ಯೆ, ಹಳ್ಳ-ಮೋರಿಯ ತೊಂದರೆ, ರಸ್ತೆಗಳ ಹಾಳುಸ್ಥಿತಿ ಮತ್ತು ವಿಳಂಬದ ಕಾಮಗಾರಿಗಳು ಜನರಲ್ಲಿ ಆಕ್ರೋಶ ಹುಟ್ಟಿಸುತ್ತಿವೆ. ಲಕ್ಷ ಲಕ್ಷ ಸಂಬಳ ಪಡೆಯುವ ಅಧಿಕಾರಿಗಳು ತಮ್ಮ ಕರ್ತವ್ಯಕ್ಕೆ ಸ್ಪಂದಿಸದಂತಾಗಿರುವ ಸ್ಥಿತಿಯಲ್ಲಿ, ರಾಜ್ಯದ ಸರಕಾರದ ಶಾಸಕರೇ ಕಾರ್ಯರೂಪದಲ್ಲಿ ಇಳಿದು ಕೆಲಸ ಮಾಡಬೇಕಾದ ಅಗತ್ಯ ಉಂಟಾಗಿದೆ.


ಇದಕ್ಕೆ ಸ್ಪಷ್ಟ ಉದಾಹರಣೆ ಪುತ್ತೂರಿನ ಶಾಸಕ ಅಶೋಕ್ ರೈ ಮಳೆ ನೀರು ಹೋಗಲು ದಾರಿ ಕಲ್ಪಿಸುವ ಕೆಲಸವನ್ನು ಸ್ವತಃ ಕೈಹಿಡಿದು, ಕಾರ್ಮಿಕನಂತೆ ಅವೈಜ್ಞಾನಿಕ ರಸ್ತೆಗಳ ಕಾಮಗಾರಿ ಕಾರ್ಯದ ವಿರುದ್ದ ತಾನೆ ಪಿಕ್ಕಾಸು ಹಿಡಿದು ಕೆಲಸಕ್ಕೆ ಇಳಿದಿದ್ದಾರೆ. ಇದೊಂದು ರಾಜಕೀಯ ಪ್ರತಿಭಟನೆ ಮಾತ್ರವಲ್ಲ; ಇದು ಸತ್ತಿರುವ ಅಧಿಕಾರ ವ್ಯವಸ್ಥೆಯ ವಿರುದ್ಧ ಪಟ್ಟು ಹಿಡಿದಿರುವ ಹೋರಾಟವಾಗಿದೆ.

*ಪ್ರಶ್ನೆಗೆ ಒಳಪಡುವುದು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಅವರೆಲ್ಲಿ ?*

ಮಳೆಗಾಲದ ಮುನ್ನೆಚ್ಚರಿಕೆ, ಮುಂಜಾಗ್ರತಾ ಕ್ರಮಗಳ ಜವಾಬ್ದಾರಿ ಹೊತ್ತ ಅಧಿಕಾರಿಗಳು ಏನು ಮಾಡಿದ್ದಾರೆ?

*ಜಿಲ್ಲಾಡಳಿತ ಜಿಲ್ಲಾಧಿಕಾರಿ ಏಕೆ ಸುಮ್ಮನಾಗಿದ್ದಾರೆ?*

*ಜಿಲ್ಲಾಧಿಕಾರಿಗಳು, ಜಿಳ ಜಿಲ್ಲಾ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿಗಳು , ಜಿಲ್ಲಾಡಳಿತದ ಅಧಿಕಾರಿಗಳು ಯಾವ ಮಟ್ಟಿಗೆ ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದಾರೆ?*

ಜನಪ್ರತಿನಿಧಿಗಳು ರಸ್ತೆಗೆ ಇಳಿಯಬೇಕಾದರೆ, ವಿದೇಶಿ ವಾಹನಗಳಲ್ಲಿ ಓಡಾಡುವ ಸಚಿವರು ಹಾಗೂ ಅಧಿಕಾರಿಗಳು ಎ.ಸಿ. ರೂಮಿನಿಂದ ಹೊರಗೆ ಬರಬೇಕಾದ ಅಗತ್ಯ ಎಷ್ಟಿದೆ ಎಂಬುದನ್ನು ಜನತೆ ಈಗ ಗಟ್ಟಿಯಾಗಿ ಕೇಳುತ್ತಿದ್ದಾರೆ.

ಜವಾಬ್ದಾರಿಯ ಯುಗದಲ್ಲಿ ನಾವು ಬದುಕುತ್ತಿದ್ದರೆ, ಅಧಿಕಾರಿಗಳಿಂದ ಕಾರ್ಯಕ್ಷಮತೆ ನಿರೀಕ್ಷಿಸುವುದು ಜನರ ಹಕ್ಕು. ಪುತ್ತೂರಿನ ಜನತೆ ಈಗ ಎಚ್ಚರಕ್ಕೆ ಬಂದಿದ್ದಾರೆ. ಅಧಿಕಾರಿಗಳು ಕಾರ್ಯನಿರತವಾಗದಿದ್ದರೆ, ಜನತೆಯೇ ರಸ್ತೆಗಿಳಿದು ಅವರನ್ನು ಹೊರಗೆ ಕರೆತರುತ್ತಾರೆ ಎಂಬ ಎಚ್ಚರಿಕೆಯ ಸಂದೇಶ ಈಗ ರಾಜ್ಯವ್ಯಾಪಿಯಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು