7:33 PM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ರೈತ ಸಂಪರ್ಕ ಕೇಂದ್ರಗಳಲ್ಲಿ ಮುಂಗಾರು ಹಂಗಾಮಿಗೆ ಭತ್ತಬಿತ್ತನೆ ಬೀಜ, ಇತರ ಪರಿಕರ ಲಭ್ಯ: ಕೃಷಿಕರು ಸಂಪರ್ಕಿಸಬಹುದು

20/05/2021, 11:58

ಮಂಗಳೂರು (reporterkarnataka news): ಪ್ರಸ್ತುತ ಸಾಲಿನ ಮುಂಗಾರು ಹಂಗಾಮಿಗೆ ಭತ್ತದ ಬಿತ್ತನೆಗಾಗಿ ಒಔ4 ತಳಿಯ ಬೀಜವನ್ನು ರೈತ ಸಂಪರ್ಕ ಕೇಂದ್ರದಲ್ಲಿ ದಾಸ್ತಾನಿಕರಿಸಲಾಗಿದೆ. ಲಾಕ್‍ಡೌನ್ ಅವಧಿಯಲ್ಲಿ ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ರೈತಭಾಂದವರು ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಬಿತ್ತನೆ ಬೀಜ ಹಾಗೂ ಇತರೆ ಪರಿಕರಗಳಿಗೆ ಬೇಡಿಕೆಯನ್ನು ಸಲ್ಲಿಸಬಹುದಾಗಿದೆ. 
ರೈತ ಸಂಪರ್ಕ ಕೇಂದ್ರದ ಹೆಸರು ಹಾಗೂ ದಾಸ್ತಾನು ವಿವರ: ಮಂಗಳೂರು-ಬಿ ಹೋಬಳಿ ದಾಸ್ತಾನು 25 ಕ್ವಿಂಟಾಲ್, ದೂ. ಸಂಖ್ಯೆ: 0824-2423609, ಸುರತ್ಕಲ್ ಹೋಬಳಿ ದಾಸ್ತಾನು 25 ಕ್ವಿಂಟಾಲ್, ದೂ. ಸಂಖ್ಯೆ: 0824-2477914, ಮುಲ್ಕಿ ಹೋಬಳಿ ದಾಸ್ತಾನು 50ಕ್ವಿಂಟಾಲ್, ದೂ. ಸಂಖ್ಯೆ: 0824-2290837, ಗುರುಪುರ ಹೋಬಳಿ ದಾಸ್ತಾನು 25 ಕ್ವಿಂಟಾಲ್ ದೂ. ಸಂಖ್ಯೆ: 9448252523, ಮೂಡಬಿದ್ರೆ ಹೋಬಳಿ ದಾಸ್ತಾನು 25 ಕ್ವಿಂಟಾಲ್ ದೂ. ಸಂಖ್ಯೆ: 9448252523.   
ಆಸಕ್ತ ರೈತರು  ಆರ್.ಟಿ.ಸಿ ಪ್ರತಿ, ಆಧಾರ್ ಸಂಖ್ಯೆ ಹಾಗೂ ಬ್ಯಾಂಕಿನ ಪಾಸ್ ಪುಸ್ತಕದ ವಿವರದೊಂದಿಗೆ ಫ್ರೂಟ್ಸ್ ಪೋರ್ಟಲ್‍ನಲ್ಲಿ ನೋಂದಾಯಿಸಿಕೊಂಡು ಬಿತ್ತನೆ ಬೀಜವನ್ನು ಪಡೆಯಬಹುದಾಗಿದೆ ಎಂದು ಮಂಗಳೂರು ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು