6:36 AM Saturday12 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ರೈತರ ಖಾತೆಗೆ 48 ತಾಸಲ್ಲೇ ಬೆಂಬಲ ಬೆಲೆ ನೇರ ಜಮೆ; ಸಂಸತ್ ನಲ್ಲಿ ಆಹಾರ, ಗ್ರಾಹಕ ವ್ಯವಹಾರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ

04/02/2025, 22:32

ನವದೆಹಲಿ(reporterkarnataka.com): ರೈತರ ಖಾತೆಗೆ 48 ಗಂಟೆಗಳಲ್ಲೇ ಬೆಂಬಲ ಬೆಲೆ ಖರೀದಿ ಹಣ ನೇರ ಜಮೆಯಾಗುತ್ತದೆ. ವಿಳಂಬವಾಗುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಖಾತೆ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ಸಂಸತ್ ಅಧಿವೇಶನದಲ್ಲಿ ಇಂದು ಬಿಹಾರದ ಸಂಸದ ಉಪೇಂದ್ರ ಕುಶ್ವಾ ಅವರ ಪ್ರಶ್ನೆಗೆ ಉತ್ತರಿಸಿ, ರೈತರಿಂದ ಬೆಂಬಲ ಬೆಲೆಯಲ್ಲಿ ಧಾನ್ಯ ಖರೀದಿಸಿದ ಮೇಲೆ ಅಷ್ಟೇ ತ್ವರಿತವಾಗಿ ಅವರ ಖಾತೆಗೆ ನೇರವಾಗಿ ಹಣ ಜಮೆಯಾಗುತ್ತಿದೆ. ಇದರಲ್ಲಿ ಯಾವುದೇ ರೀತಿ ಲೋಪವಾಗುತ್ತಿಲ್ಲ ಎಂದು ಹೇಳಿದರು.
ಬೆಂಬಲ ಬೆಲೆಯಲ್ಲಿ ಧಾನ್ಯ ಖರೀದಿ DCP ಮತ್ತು Non DCP ಎರಡು ರೀತಿಯ ವ್ಯವಸ್ಥೆಯಲ್ಲಿ ನಡೆಯುತ್ತಿದೆ. Non DCP ವ್ಯವಸ್ಥೆಯುಳ್ಳ ರಾಜ್ಯಗಳಲ್ಲಿ ಸಹ ತಕ್ಷಣವೇ ರೈತರ ಖಾತೆಗೆ ಹಣ ಜಮೆ ಮಾಡಲು ಆಯಾ ರಾಜ್ಯ ಸರ್ಕಾರಗಳಿಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ ಎಂದರು.
ರೈತರಿಗೆ ತೊಂದರೆ ಆಗಬಾರದು ಎಂಬುದು ಪ್ರಧಾನಮಂತ್ರಿ ಮೋದಿಜಿ ಅವರ ಆಶಯವಾಗಿದೆ. ಅದರಂತೆ ಕೇಂದ್ರ ಸರ್ಕಾರ FCI ಮತ್ತು ಇತರೆ ಏಜೆನ್ಸಿ, ರಾಜ್ಯ ಸರ್ಕಾರಗಳ ಮೂಲಕ ಗೋಧಿ ಸೇರಿದಂತೆ ಬೆಂಬಲ ಬೆಲೆಯಲ್ಲಿ ಧಾನ್ಯ ಖರೀದಿ ಮಾಡುತ್ತಿದೆ. ಅಷ್ಟೇ ತ್ವರಿತವಾಗಿ ರೈತರ ಖಾತೆಗೆ ನೇರ ಹಣ ವರ್ಗಾವಣೆ ಮಾಡಲಾಗುತ್ತಿದೆ ಎಂದು ಹೇಳಿದರು.
ರೈತರ ಸಬಲೀಕರಣ ನಮ್ಮ ಸರ್ಕಾರದ ಬದ್ಧತೆಯಾಗಿದ್ದು, ಬೆಲೆ ಕುಸಿತದ ವೇಳೆ ಬೆಂಬಲ ಬೆಲೆಯಲ್ಲಿ ಧಾನ್ಯ ಖರೀದಿಸಿ ರೈತರಿಗೆ ಆರ್ಥಿಕ ಚೈತನ್ಯ ನೀಡುವ ಮೂಲಕ ಅವರ ಹಿತ ಕಾಪಾಡುವ ಕೆಲಸ ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ನಡೆದಿದೆ. ಇದರಲ್ಲೇನೂ ವ್ಯತ್ಯಾಸ, ಲೋಪವಾಗಲು ಸಾಧ್ಯವಿಲ್ಲ ಎಂದು ಹೇಳಿದರು.
ಬೆಂಬಲ ಬೆಲೆಯಲ್ಲಿ ಧಾನ್ಯ ಖರೀದಿ ಮತ್ತು ರೈತರ ಖಾತೆಗೆ ನೇರ ಹಣ ವರ್ಗಾವಣೆಯಲ್ಲಿ ಮಧ್ಯವರ್ತಿಗಳಿಗೆ ಅವಕಾಶವೇ ಇಲ್ಲ. ಇಂಥ ಯಾವುದೇ ದೂರುಗಳು ಬಂದಿಲ್ಲ. ತಮ್ಮ ಗಮನಕ್ಕೆ ಬಂದರೆ ತಕ್ಷಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು