11:07 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ರೈತರ ಖಾತೆಗೆ 48 ತಾಸಲ್ಲೇ ಬೆಂಬಲ ಬೆಲೆ ನೇರ ಜಮೆ; ಸಂಸತ್ ನಲ್ಲಿ ಆಹಾರ, ಗ್ರಾಹಕ ವ್ಯವಹಾರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ

04/02/2025, 22:32

ನವದೆಹಲಿ(reporterkarnataka.com): ರೈತರ ಖಾತೆಗೆ 48 ಗಂಟೆಗಳಲ್ಲೇ ಬೆಂಬಲ ಬೆಲೆ ಖರೀದಿ ಹಣ ನೇರ ಜಮೆಯಾಗುತ್ತದೆ. ವಿಳಂಬವಾಗುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಖಾತೆ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ಸಂಸತ್ ಅಧಿವೇಶನದಲ್ಲಿ ಇಂದು ಬಿಹಾರದ ಸಂಸದ ಉಪೇಂದ್ರ ಕುಶ್ವಾ ಅವರ ಪ್ರಶ್ನೆಗೆ ಉತ್ತರಿಸಿ, ರೈತರಿಂದ ಬೆಂಬಲ ಬೆಲೆಯಲ್ಲಿ ಧಾನ್ಯ ಖರೀದಿಸಿದ ಮೇಲೆ ಅಷ್ಟೇ ತ್ವರಿತವಾಗಿ ಅವರ ಖಾತೆಗೆ ನೇರವಾಗಿ ಹಣ ಜಮೆಯಾಗುತ್ತಿದೆ. ಇದರಲ್ಲಿ ಯಾವುದೇ ರೀತಿ ಲೋಪವಾಗುತ್ತಿಲ್ಲ ಎಂದು ಹೇಳಿದರು.
ಬೆಂಬಲ ಬೆಲೆಯಲ್ಲಿ ಧಾನ್ಯ ಖರೀದಿ DCP ಮತ್ತು Non DCP ಎರಡು ರೀತಿಯ ವ್ಯವಸ್ಥೆಯಲ್ಲಿ ನಡೆಯುತ್ತಿದೆ. Non DCP ವ್ಯವಸ್ಥೆಯುಳ್ಳ ರಾಜ್ಯಗಳಲ್ಲಿ ಸಹ ತಕ್ಷಣವೇ ರೈತರ ಖಾತೆಗೆ ಹಣ ಜಮೆ ಮಾಡಲು ಆಯಾ ರಾಜ್ಯ ಸರ್ಕಾರಗಳಿಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ ಎಂದರು.
ರೈತರಿಗೆ ತೊಂದರೆ ಆಗಬಾರದು ಎಂಬುದು ಪ್ರಧಾನಮಂತ್ರಿ ಮೋದಿಜಿ ಅವರ ಆಶಯವಾಗಿದೆ. ಅದರಂತೆ ಕೇಂದ್ರ ಸರ್ಕಾರ FCI ಮತ್ತು ಇತರೆ ಏಜೆನ್ಸಿ, ರಾಜ್ಯ ಸರ್ಕಾರಗಳ ಮೂಲಕ ಗೋಧಿ ಸೇರಿದಂತೆ ಬೆಂಬಲ ಬೆಲೆಯಲ್ಲಿ ಧಾನ್ಯ ಖರೀದಿ ಮಾಡುತ್ತಿದೆ. ಅಷ್ಟೇ ತ್ವರಿತವಾಗಿ ರೈತರ ಖಾತೆಗೆ ನೇರ ಹಣ ವರ್ಗಾವಣೆ ಮಾಡಲಾಗುತ್ತಿದೆ ಎಂದು ಹೇಳಿದರು.
ರೈತರ ಸಬಲೀಕರಣ ನಮ್ಮ ಸರ್ಕಾರದ ಬದ್ಧತೆಯಾಗಿದ್ದು, ಬೆಲೆ ಕುಸಿತದ ವೇಳೆ ಬೆಂಬಲ ಬೆಲೆಯಲ್ಲಿ ಧಾನ್ಯ ಖರೀದಿಸಿ ರೈತರಿಗೆ ಆರ್ಥಿಕ ಚೈತನ್ಯ ನೀಡುವ ಮೂಲಕ ಅವರ ಹಿತ ಕಾಪಾಡುವ ಕೆಲಸ ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ನಡೆದಿದೆ. ಇದರಲ್ಲೇನೂ ವ್ಯತ್ಯಾಸ, ಲೋಪವಾಗಲು ಸಾಧ್ಯವಿಲ್ಲ ಎಂದು ಹೇಳಿದರು.
ಬೆಂಬಲ ಬೆಲೆಯಲ್ಲಿ ಧಾನ್ಯ ಖರೀದಿ ಮತ್ತು ರೈತರ ಖಾತೆಗೆ ನೇರ ಹಣ ವರ್ಗಾವಣೆಯಲ್ಲಿ ಮಧ್ಯವರ್ತಿಗಳಿಗೆ ಅವಕಾಶವೇ ಇಲ್ಲ. ಇಂಥ ಯಾವುದೇ ದೂರುಗಳು ಬಂದಿಲ್ಲ. ತಮ್ಮ ಗಮನಕ್ಕೆ ಬಂದರೆ ತಕ್ಷಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು