9:38 PM Sunday18 - January 2026
ಬ್ರೇಕಿಂಗ್ ನ್ಯೂಸ್
ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ರೈತರ ಸಾಲ ಮನ್ನಾ, ಬೀಜ, ರಸಗೊಬ್ಬರ ಉಚಿತ ವಿತರಣೆ: ರಾಜ್ಯ ಸರಕಾರಕ್ಕೆ ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಠೋಡ ಆಗ್ರಹ

04/06/2021, 12:19

ಭೀಮಣ್ಣ ಪೂಜಾರ್ ವಿಜಯಪುರ

info.reporterkarnataka@mail.com

ಕೊರೊನಾದಿಂದ ಅನ್ನದಾತರು ತೀವ್ರ ಸಂಕಷ್ಟದಲ್ಲಿದ್ದು, ಸರಕಾರ ತಕ್ಷಣ ರೈತರಿಗೆ ಉಚಿತ ಬೀಜ ಮತ್ತು ರಸಗೊಬ್ಬರ ಒದಗಿಸಬೇಕು. ರೈತರ ಸಾಲಮನ್ನಾ ಮಾಡಬೇಕೆಂದು ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ನಾಯಕ ಪ್ರಕಾಶ್ ರಾಠೋಡ ಒತ್ತಾಯಿಸಿದರು.

ವಿಜಯಪುರದ ಆಲಮಟ್ಟಿಯಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ರಾಜ್ಯ ಸರಕಾರ ಕೊರೊನಾದ ಹಿನ್ನೆಲೆಯಲ್ಲಿ ರೈತರಿಗೆ ಯಾವುದೇ ಪ್ಯಾಕೇಜ್ ಘೋಷಣೆ ಮಾಡಿಲ್ಲ. ರೈತರ ಸಾಲ ಕೂಡ ಮನ್ನಾ ಮಾಡಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿ, ಹಸಿರು ಶಾಲು ಹಾಕಿಕೊಂಡು ರೈತರಿಗೆ ದ್ರೋಹ ಮಾಡಿದ್ದಾರೆ. ಎರಡು ವರ್ಷ ಮುಖ್ಯಮಂತ್ರಿಯಾದರೂ ರೈತರಿಗೆ ಒಂದು ಪೈಸೆ ಪ್ಯಾಕೇಜ್ ಕೊಡುವಲ್ಲಿ ವಿಫಲರಾಗಿದ್ದಾರೆ ಎಂದು ಅವರು ದೂರಿದರು.

ಯಡಿಯೂರಪ್ಪ ಸರಕಾರಕ್ಕೆ ಕಣ್ಣು ಕಾಣುತ್ತಿಲ್ಲ. ಕಿವಿ ಕೇಳಿಸುತ್ತಿಲ್ಲ. ರಾಜಕೀಯದಲ್ಲಿ ಅಷ್ಟೇ ಅಲ್ಲದೆ, ಅಭಿವೃದ್ಧಿಯಲ್ಲೂ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ರಾಠೋಡ್ ಆರೋಪಿಸಿದರು.

ವಿಜಯಪುರ ಜಿಲ್ಲೆಯ ಎಲ್ಲ ಕಡೆಗಳಲ್ಲಿ ಪ್ರವಾಸೋದ್ಯಮಕ್ಕೆ ಅವಕಾಶ ಮಾಡಿಕೊಡಬೇಕು. ಆಲಮಟ್ಟಿಯಲ್ಲಿ ಮೈಸೂರಿನ ಕೆಎಸ್ ಆರ್ ಮಾದರಿ ಉದ್ಯಾವನ ನಿರ್ಮಿಸಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ ವಿಮಾನ ನಿಲ್ದಾಣ ಮಾಡುವುದಾಗಿ ಹೇಳಿದ್ದಾರೆ. ಆದರೆ ಮಾತನಾಡುವುದನ್ನು ಬಿಟ್ಟರೆ ಬೇರೆ ಯಾವುದೇ ಕೆಲಸ ಮಾಡಿಲ್ಲ. ನೂತನ ತಾಲೂಕು ರಚನೆಯಾಗಿ ತಿಂಗಳುಗಳು ಕಳೆದರೂ ರಾಜ್ಯ ಸರಕಾರ ನೂತನ ಕೇಂದ್ರಗಳಲ್ಲಿ ಮೂಲಸೌಕರ್ಯ ಒದಗಿಸಿಲ್ಲ. ಹೊಸ ತಾಲೂಕಿಗೆ ಬೇಕಾಗಿರುವ ಎಲ್ಲ ಕ್ರಮಗಳನ್ನು ತಕ್ಷಣ ತೆಗೆದು ಕೊಳ್ಳಬೇಕೆಂದು ಒತ್ತಾಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು