1:15 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ರೈತರ ಸಾಲ ಮನ್ನಾ, ಬೀಜ, ರಸಗೊಬ್ಬರ ಉಚಿತ ವಿತರಣೆ: ರಾಜ್ಯ ಸರಕಾರಕ್ಕೆ ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಠೋಡ ಆಗ್ರಹ

04/06/2021, 12:19

ಭೀಮಣ್ಣ ಪೂಜಾರ್ ವಿಜಯಪುರ

info.reporterkarnataka@mail.com

ಕೊರೊನಾದಿಂದ ಅನ್ನದಾತರು ತೀವ್ರ ಸಂಕಷ್ಟದಲ್ಲಿದ್ದು, ಸರಕಾರ ತಕ್ಷಣ ರೈತರಿಗೆ ಉಚಿತ ಬೀಜ ಮತ್ತು ರಸಗೊಬ್ಬರ ಒದಗಿಸಬೇಕು. ರೈತರ ಸಾಲಮನ್ನಾ ಮಾಡಬೇಕೆಂದು ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ನಾಯಕ ಪ್ರಕಾಶ್ ರಾಠೋಡ ಒತ್ತಾಯಿಸಿದರು.

ವಿಜಯಪುರದ ಆಲಮಟ್ಟಿಯಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ರಾಜ್ಯ ಸರಕಾರ ಕೊರೊನಾದ ಹಿನ್ನೆಲೆಯಲ್ಲಿ ರೈತರಿಗೆ ಯಾವುದೇ ಪ್ಯಾಕೇಜ್ ಘೋಷಣೆ ಮಾಡಿಲ್ಲ. ರೈತರ ಸಾಲ ಕೂಡ ಮನ್ನಾ ಮಾಡಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿ, ಹಸಿರು ಶಾಲು ಹಾಕಿಕೊಂಡು ರೈತರಿಗೆ ದ್ರೋಹ ಮಾಡಿದ್ದಾರೆ. ಎರಡು ವರ್ಷ ಮುಖ್ಯಮಂತ್ರಿಯಾದರೂ ರೈತರಿಗೆ ಒಂದು ಪೈಸೆ ಪ್ಯಾಕೇಜ್ ಕೊಡುವಲ್ಲಿ ವಿಫಲರಾಗಿದ್ದಾರೆ ಎಂದು ಅವರು ದೂರಿದರು.

ಯಡಿಯೂರಪ್ಪ ಸರಕಾರಕ್ಕೆ ಕಣ್ಣು ಕಾಣುತ್ತಿಲ್ಲ. ಕಿವಿ ಕೇಳಿಸುತ್ತಿಲ್ಲ. ರಾಜಕೀಯದಲ್ಲಿ ಅಷ್ಟೇ ಅಲ್ಲದೆ, ಅಭಿವೃದ್ಧಿಯಲ್ಲೂ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ರಾಠೋಡ್ ಆರೋಪಿಸಿದರು.

ವಿಜಯಪುರ ಜಿಲ್ಲೆಯ ಎಲ್ಲ ಕಡೆಗಳಲ್ಲಿ ಪ್ರವಾಸೋದ್ಯಮಕ್ಕೆ ಅವಕಾಶ ಮಾಡಿಕೊಡಬೇಕು. ಆಲಮಟ್ಟಿಯಲ್ಲಿ ಮೈಸೂರಿನ ಕೆಎಸ್ ಆರ್ ಮಾದರಿ ಉದ್ಯಾವನ ನಿರ್ಮಿಸಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ ವಿಮಾನ ನಿಲ್ದಾಣ ಮಾಡುವುದಾಗಿ ಹೇಳಿದ್ದಾರೆ. ಆದರೆ ಮಾತನಾಡುವುದನ್ನು ಬಿಟ್ಟರೆ ಬೇರೆ ಯಾವುದೇ ಕೆಲಸ ಮಾಡಿಲ್ಲ. ನೂತನ ತಾಲೂಕು ರಚನೆಯಾಗಿ ತಿಂಗಳುಗಳು ಕಳೆದರೂ ರಾಜ್ಯ ಸರಕಾರ ನೂತನ ಕೇಂದ್ರಗಳಲ್ಲಿ ಮೂಲಸೌಕರ್ಯ ಒದಗಿಸಿಲ್ಲ. ಹೊಸ ತಾಲೂಕಿಗೆ ಬೇಕಾಗಿರುವ ಎಲ್ಲ ಕ್ರಮಗಳನ್ನು ತಕ್ಷಣ ತೆಗೆದು ಕೊಳ್ಳಬೇಕೆಂದು ಒತ್ತಾಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು