1:52 PM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ರೈತರ ಸಾಲ ಮನ್ನಾ, ಬೀಜ, ರಸಗೊಬ್ಬರ ಉಚಿತ ವಿತರಣೆ: ರಾಜ್ಯ ಸರಕಾರಕ್ಕೆ ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಠೋಡ ಆಗ್ರಹ

04/06/2021, 12:19

ಭೀಮಣ್ಣ ಪೂಜಾರ್ ವಿಜಯಪುರ

info.reporterkarnataka@mail.com

ಕೊರೊನಾದಿಂದ ಅನ್ನದಾತರು ತೀವ್ರ ಸಂಕಷ್ಟದಲ್ಲಿದ್ದು, ಸರಕಾರ ತಕ್ಷಣ ರೈತರಿಗೆ ಉಚಿತ ಬೀಜ ಮತ್ತು ರಸಗೊಬ್ಬರ ಒದಗಿಸಬೇಕು. ರೈತರ ಸಾಲಮನ್ನಾ ಮಾಡಬೇಕೆಂದು ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ನಾಯಕ ಪ್ರಕಾಶ್ ರಾಠೋಡ ಒತ್ತಾಯಿಸಿದರು.

ವಿಜಯಪುರದ ಆಲಮಟ್ಟಿಯಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ರಾಜ್ಯ ಸರಕಾರ ಕೊರೊನಾದ ಹಿನ್ನೆಲೆಯಲ್ಲಿ ರೈತರಿಗೆ ಯಾವುದೇ ಪ್ಯಾಕೇಜ್ ಘೋಷಣೆ ಮಾಡಿಲ್ಲ. ರೈತರ ಸಾಲ ಕೂಡ ಮನ್ನಾ ಮಾಡಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿ, ಹಸಿರು ಶಾಲು ಹಾಕಿಕೊಂಡು ರೈತರಿಗೆ ದ್ರೋಹ ಮಾಡಿದ್ದಾರೆ. ಎರಡು ವರ್ಷ ಮುಖ್ಯಮಂತ್ರಿಯಾದರೂ ರೈತರಿಗೆ ಒಂದು ಪೈಸೆ ಪ್ಯಾಕೇಜ್ ಕೊಡುವಲ್ಲಿ ವಿಫಲರಾಗಿದ್ದಾರೆ ಎಂದು ಅವರು ದೂರಿದರು.

ಯಡಿಯೂರಪ್ಪ ಸರಕಾರಕ್ಕೆ ಕಣ್ಣು ಕಾಣುತ್ತಿಲ್ಲ. ಕಿವಿ ಕೇಳಿಸುತ್ತಿಲ್ಲ. ರಾಜಕೀಯದಲ್ಲಿ ಅಷ್ಟೇ ಅಲ್ಲದೆ, ಅಭಿವೃದ್ಧಿಯಲ್ಲೂ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ರಾಠೋಡ್ ಆರೋಪಿಸಿದರು.

ವಿಜಯಪುರ ಜಿಲ್ಲೆಯ ಎಲ್ಲ ಕಡೆಗಳಲ್ಲಿ ಪ್ರವಾಸೋದ್ಯಮಕ್ಕೆ ಅವಕಾಶ ಮಾಡಿಕೊಡಬೇಕು. ಆಲಮಟ್ಟಿಯಲ್ಲಿ ಮೈಸೂರಿನ ಕೆಎಸ್ ಆರ್ ಮಾದರಿ ಉದ್ಯಾವನ ನಿರ್ಮಿಸಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ ವಿಮಾನ ನಿಲ್ದಾಣ ಮಾಡುವುದಾಗಿ ಹೇಳಿದ್ದಾರೆ. ಆದರೆ ಮಾತನಾಡುವುದನ್ನು ಬಿಟ್ಟರೆ ಬೇರೆ ಯಾವುದೇ ಕೆಲಸ ಮಾಡಿಲ್ಲ. ನೂತನ ತಾಲೂಕು ರಚನೆಯಾಗಿ ತಿಂಗಳುಗಳು ಕಳೆದರೂ ರಾಜ್ಯ ಸರಕಾರ ನೂತನ ಕೇಂದ್ರಗಳಲ್ಲಿ ಮೂಲಸೌಕರ್ಯ ಒದಗಿಸಿಲ್ಲ. ಹೊಸ ತಾಲೂಕಿಗೆ ಬೇಕಾಗಿರುವ ಎಲ್ಲ ಕ್ರಮಗಳನ್ನು ತಕ್ಷಣ ತೆಗೆದು ಕೊಳ್ಳಬೇಕೆಂದು ಒತ್ತಾಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು