8:03 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ರೈತರ ಸಾಲ ಮನ್ನಾ, ಬೀಜ, ರಸಗೊಬ್ಬರ ಉಚಿತ ವಿತರಣೆ: ರಾಜ್ಯ ಸರಕಾರಕ್ಕೆ ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಠೋಡ ಆಗ್ರಹ

04/06/2021, 12:19

ಭೀಮಣ್ಣ ಪೂಜಾರ್ ವಿಜಯಪುರ

info.reporterkarnataka@mail.com

ಕೊರೊನಾದಿಂದ ಅನ್ನದಾತರು ತೀವ್ರ ಸಂಕಷ್ಟದಲ್ಲಿದ್ದು, ಸರಕಾರ ತಕ್ಷಣ ರೈತರಿಗೆ ಉಚಿತ ಬೀಜ ಮತ್ತು ರಸಗೊಬ್ಬರ ಒದಗಿಸಬೇಕು. ರೈತರ ಸಾಲಮನ್ನಾ ಮಾಡಬೇಕೆಂದು ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ನಾಯಕ ಪ್ರಕಾಶ್ ರಾಠೋಡ ಒತ್ತಾಯಿಸಿದರು.

ವಿಜಯಪುರದ ಆಲಮಟ್ಟಿಯಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ರಾಜ್ಯ ಸರಕಾರ ಕೊರೊನಾದ ಹಿನ್ನೆಲೆಯಲ್ಲಿ ರೈತರಿಗೆ ಯಾವುದೇ ಪ್ಯಾಕೇಜ್ ಘೋಷಣೆ ಮಾಡಿಲ್ಲ. ರೈತರ ಸಾಲ ಕೂಡ ಮನ್ನಾ ಮಾಡಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿ, ಹಸಿರು ಶಾಲು ಹಾಕಿಕೊಂಡು ರೈತರಿಗೆ ದ್ರೋಹ ಮಾಡಿದ್ದಾರೆ. ಎರಡು ವರ್ಷ ಮುಖ್ಯಮಂತ್ರಿಯಾದರೂ ರೈತರಿಗೆ ಒಂದು ಪೈಸೆ ಪ್ಯಾಕೇಜ್ ಕೊಡುವಲ್ಲಿ ವಿಫಲರಾಗಿದ್ದಾರೆ ಎಂದು ಅವರು ದೂರಿದರು.

ಯಡಿಯೂರಪ್ಪ ಸರಕಾರಕ್ಕೆ ಕಣ್ಣು ಕಾಣುತ್ತಿಲ್ಲ. ಕಿವಿ ಕೇಳಿಸುತ್ತಿಲ್ಲ. ರಾಜಕೀಯದಲ್ಲಿ ಅಷ್ಟೇ ಅಲ್ಲದೆ, ಅಭಿವೃದ್ಧಿಯಲ್ಲೂ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ರಾಠೋಡ್ ಆರೋಪಿಸಿದರು.

ವಿಜಯಪುರ ಜಿಲ್ಲೆಯ ಎಲ್ಲ ಕಡೆಗಳಲ್ಲಿ ಪ್ರವಾಸೋದ್ಯಮಕ್ಕೆ ಅವಕಾಶ ಮಾಡಿಕೊಡಬೇಕು. ಆಲಮಟ್ಟಿಯಲ್ಲಿ ಮೈಸೂರಿನ ಕೆಎಸ್ ಆರ್ ಮಾದರಿ ಉದ್ಯಾವನ ನಿರ್ಮಿಸಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ ವಿಮಾನ ನಿಲ್ದಾಣ ಮಾಡುವುದಾಗಿ ಹೇಳಿದ್ದಾರೆ. ಆದರೆ ಮಾತನಾಡುವುದನ್ನು ಬಿಟ್ಟರೆ ಬೇರೆ ಯಾವುದೇ ಕೆಲಸ ಮಾಡಿಲ್ಲ. ನೂತನ ತಾಲೂಕು ರಚನೆಯಾಗಿ ತಿಂಗಳುಗಳು ಕಳೆದರೂ ರಾಜ್ಯ ಸರಕಾರ ನೂತನ ಕೇಂದ್ರಗಳಲ್ಲಿ ಮೂಲಸೌಕರ್ಯ ಒದಗಿಸಿಲ್ಲ. ಹೊಸ ತಾಲೂಕಿಗೆ ಬೇಕಾಗಿರುವ ಎಲ್ಲ ಕ್ರಮಗಳನ್ನು ತಕ್ಷಣ ತೆಗೆದು ಕೊಳ್ಳಬೇಕೆಂದು ಒತ್ತಾಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು