12:16 PM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ರೈತರಿಗೆ ಬರೇ 2 ತಾಸು ವಿದ್ಯುತ್!: ಪೂರಕ ವಿದ್ಯುತ್ ನೀಡದ ಹೆಸ್ಕಾಂ ವಿರುದ್ಧ ಅಥಣಿ ರೈತರ ಆಕ್ರೋಶ

25/03/2022, 22:48

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ ಉಪ ವಿಭಾಗ ಜಂಬಗಿ ಸೆಕ್ಷನ್ ವಿಭಾಗದ ನಾಗನೂರ್ ಪಿಎ ಹಾಗೂ ಸಂಬರಗಿ ಗ್ರಾಮದ ರೈತರಿಗೆ ಬರಿ 2 ಗಂಟೆ ವಿದ್ಯುತ್ ನೀಡುತ್ತಿರುವ ಹಿನ್ನೆಲೆ ಪೂರಕ ವಿದ್ಯುತ್ ನೀಡುವಂತೆ ಸ್ಥಳೀಯ ರೈತರು ಬೇಡಿಕೆ ಮುಂದಿಟ್ಟಿದ್ದಾರೆ.


ವಿದ್ಯುತ್ ನೀಡುವಲ್ಲಿ ತಾರತಮ್ಯವೇಕೆ? ಮೊದಲೇ ಬರಗಾಲ ಭವಣೆಯಲ್ಲಿ ಬೆಯುತ್ತಿರುವ ನಮಗೆ ಯಾಕಿ ಅನ್ಯಾಯ ಮಾಡುತ್ತಿದ್ದೀರಿ? ಅಲ್ಪ ನೀರಿನಲ್ಲಿ ಸ್ವಲ್ಪ ಬೆಳೆ ನಿರ್ವಹಣೆ ಮಾಡುತ್ತಿರುವ ನಮಗೆ ಪೂರಕ ವಿದ್ಯುತ್ ನೀಡದೆ ಇದ್ದಲ್ಲಿ ನೀವು ನಿಮ್ಮ ಕಂಬ- ವಯರ್ ಗಳನ್ನು ಕಿತ್ತು ಹಾಕಿ.ನಮಗ್ಯಾಕೆ ನಿಮ್ಮ ಕರೆಂಟು ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೇಸಿಗೆ ಬಿಸಿಲಿನ ತಾಪಕ್ಕೆ ಬೆಳೆಗಳು ನೀರಿಲ್ಲದೆ ಒಣಗಿ ನಿಂತಿವೆ. ವಿದ್ಯುತ್ ಕಡಿತದಿಂದ ರೈತರಿಗೆ ಸಾಕಷ್ಟು ತೊಂದರೆ ಆಗುತ್ತಿದ್ದು, ಆದಷ್ಟು ಬೇಗ ಹೆಸ್ಕಾಂ ಅಧಿಕಾರಿಗಳು ಗಮನ ಹರಿಸಿ ರೈತರಿಗೆ ಸ್ಪಂದಿಸ ಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು