10:38 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ರೈತರಿಗೆ ಬರೇ 2 ತಾಸು ವಿದ್ಯುತ್!: ಪೂರಕ ವಿದ್ಯುತ್ ನೀಡದ ಹೆಸ್ಕಾಂ ವಿರುದ್ಧ ಅಥಣಿ ರೈತರ ಆಕ್ರೋಶ

25/03/2022, 22:48

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ ಉಪ ವಿಭಾಗ ಜಂಬಗಿ ಸೆಕ್ಷನ್ ವಿಭಾಗದ ನಾಗನೂರ್ ಪಿಎ ಹಾಗೂ ಸಂಬರಗಿ ಗ್ರಾಮದ ರೈತರಿಗೆ ಬರಿ 2 ಗಂಟೆ ವಿದ್ಯುತ್ ನೀಡುತ್ತಿರುವ ಹಿನ್ನೆಲೆ ಪೂರಕ ವಿದ್ಯುತ್ ನೀಡುವಂತೆ ಸ್ಥಳೀಯ ರೈತರು ಬೇಡಿಕೆ ಮುಂದಿಟ್ಟಿದ್ದಾರೆ.


ವಿದ್ಯುತ್ ನೀಡುವಲ್ಲಿ ತಾರತಮ್ಯವೇಕೆ? ಮೊದಲೇ ಬರಗಾಲ ಭವಣೆಯಲ್ಲಿ ಬೆಯುತ್ತಿರುವ ನಮಗೆ ಯಾಕಿ ಅನ್ಯಾಯ ಮಾಡುತ್ತಿದ್ದೀರಿ? ಅಲ್ಪ ನೀರಿನಲ್ಲಿ ಸ್ವಲ್ಪ ಬೆಳೆ ನಿರ್ವಹಣೆ ಮಾಡುತ್ತಿರುವ ನಮಗೆ ಪೂರಕ ವಿದ್ಯುತ್ ನೀಡದೆ ಇದ್ದಲ್ಲಿ ನೀವು ನಿಮ್ಮ ಕಂಬ- ವಯರ್ ಗಳನ್ನು ಕಿತ್ತು ಹಾಕಿ.ನಮಗ್ಯಾಕೆ ನಿಮ್ಮ ಕರೆಂಟು ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೇಸಿಗೆ ಬಿಸಿಲಿನ ತಾಪಕ್ಕೆ ಬೆಳೆಗಳು ನೀರಿಲ್ಲದೆ ಒಣಗಿ ನಿಂತಿವೆ. ವಿದ್ಯುತ್ ಕಡಿತದಿಂದ ರೈತರಿಗೆ ಸಾಕಷ್ಟು ತೊಂದರೆ ಆಗುತ್ತಿದ್ದು, ಆದಷ್ಟು ಬೇಗ ಹೆಸ್ಕಾಂ ಅಧಿಕಾರಿಗಳು ಗಮನ ಹರಿಸಿ ರೈತರಿಗೆ ಸ್ಪಂದಿಸ ಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು