7:03 PM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ರೈತರಿಗೆ ಬಿತ್ತನೆ ಬೀಜ ವಿತರಣೆ ಹಾಗೂ ಬಿತ್ತನೆ ಬಗ್ಗೆ ರೈತ ಸಂಪರ್ಕ ಕೇಂದ್ರದ ಸಹಾಯಕ ನಿರ್ದೇಶಕಿ ಜಯಶ್ರೀ ಹಿರೇಮಠ್ ಸಲಹೆ

29/05/2021, 07:32

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ರೈತ ಸಂಪರ್ಕ ಕೇಂದ್ರ ಅಥಣಿ ಘಟಕದ  ಸಹಾಯಕ ನಿರ್ದೇಶಕರಾದ ಜಯಶ್ರೀ ಹಿರೇಮಠ್ ಅವರು ರೈತರಿಗೆ ಬೀಜ ವಿತರಣೆ ಹಾಗೂ ಬಿತ್ತನೆಯ ಬಗ್ಗೆ ಸಲಹೆ ನೀಡಿದರು.

ಕಾಗವಾಡ, ಅನಂತಪುರ ಮತ್ತು ಐಗಳಿ ಎಂಬ ಹೋಬಳಿಗಳನ್ನು ಒಳಗೊಂಡಿದ್ದು, ಇಲ್ಲಿ ಒಣ ಬೇಸಾಯ ಹಾಗೂ ನೀರಾವರಿ ಬೇಸಾಯವನ್ನು ಕೂಡ ಮಾಡಲಾಗುತ್ತದೆ.

ರೈತರಿಗೆ ಉದ್ದು, ತೊಗರಿ, ಹೆಸರು, ಸೋಯಾಬಿನ್ ಬೀಜಗಳನ್ನು ದಾಸ್ತಾನು ಮಾಡಲಾಗಿದೆ. ಅದೇ ರೀತಿ ಗೋವಿನ ಜೋಳ ಬೀಜವನ್ನು ಕೂಡ ಮುಂದಿನ ಒಂದು ವಾರದಲ್ಲಿ ಸಂಗ್ರಹಣೆ ಮಾಡಲಾಗುವುದು.

ರೈತರಿಗೆ ಬೀಜಗಳ ವಿತರಣೆಯನ್ನು ಈ ಕೊರೊನಾ ಎಂಬ ಮಹಾಮಾರಿ ಇರುವುದರಿಂದ ಜನ ದಟ್ಟನೆ ಮಾಡಬಾರದೆಂದು ನಿಯಮ ಜಾರಿಯಲ್ಲಿರುವ ಕಾರಣ  ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಮೀಪದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಸಹಯೋಗದಲ್ಲಿ ಸುಮಾರು 14 ಕಡೆ ವಿತರಣಾ ಕೇಂದ್ರವನ್ನು ತೆರೆಯಲಾಗಿದೆ. ರೈತರು ಇದರ ಸದುಪಯೋಗ ಪಡೆದು ಕೊಳ್ಳಬೇಕು.

ಬಿತ್ತನೆಯನ್ನು ಯಾವ ಸಮಯದಲ್ಲಿ ಯಾವ ರೀತಿ ಮಾಡಬೇಕೆಂಬುದನ್ನು ಕೂಡ ಹಂಸ ಟಿವಿ ಕನ್ನಡ ಮಾಧ್ಯಮದ ಮೂಲಕ ರೈತ ಜನರಿಗೆ ತಿಳಿಸಿದರು. 

ಬೀಜ ಪಡೆದುಕೊಳ್ಳಲು  ಆಧಾರ್ ಕಾರ್ಡ್, ಜಮೀನಿನ ಪಹಣಿ ಪತ್ರ ಅಥವಾ ಬ್ಯಾಂಕ್ ಪಾಸ್ ಬುಕ್ ಯಾವದಾರೊಂದು ದಾಖಲೆಯನ್ನು ತರಬೇಕೆಂದು  ಅವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು