3:32 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ರೈತರಿಗೆ ಬಿತ್ತನೆ ಬೀಜ ವಿತರಣೆ ಹಾಗೂ ಬಿತ್ತನೆ ಬಗ್ಗೆ ರೈತ ಸಂಪರ್ಕ ಕೇಂದ್ರದ ಸಹಾಯಕ ನಿರ್ದೇಶಕಿ ಜಯಶ್ರೀ ಹಿರೇಮಠ್ ಸಲಹೆ

29/05/2021, 07:32

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ರೈತ ಸಂಪರ್ಕ ಕೇಂದ್ರ ಅಥಣಿ ಘಟಕದ  ಸಹಾಯಕ ನಿರ್ದೇಶಕರಾದ ಜಯಶ್ರೀ ಹಿರೇಮಠ್ ಅವರು ರೈತರಿಗೆ ಬೀಜ ವಿತರಣೆ ಹಾಗೂ ಬಿತ್ತನೆಯ ಬಗ್ಗೆ ಸಲಹೆ ನೀಡಿದರು.

ಕಾಗವಾಡ, ಅನಂತಪುರ ಮತ್ತು ಐಗಳಿ ಎಂಬ ಹೋಬಳಿಗಳನ್ನು ಒಳಗೊಂಡಿದ್ದು, ಇಲ್ಲಿ ಒಣ ಬೇಸಾಯ ಹಾಗೂ ನೀರಾವರಿ ಬೇಸಾಯವನ್ನು ಕೂಡ ಮಾಡಲಾಗುತ್ತದೆ.

ರೈತರಿಗೆ ಉದ್ದು, ತೊಗರಿ, ಹೆಸರು, ಸೋಯಾಬಿನ್ ಬೀಜಗಳನ್ನು ದಾಸ್ತಾನು ಮಾಡಲಾಗಿದೆ. ಅದೇ ರೀತಿ ಗೋವಿನ ಜೋಳ ಬೀಜವನ್ನು ಕೂಡ ಮುಂದಿನ ಒಂದು ವಾರದಲ್ಲಿ ಸಂಗ್ರಹಣೆ ಮಾಡಲಾಗುವುದು.

ರೈತರಿಗೆ ಬೀಜಗಳ ವಿತರಣೆಯನ್ನು ಈ ಕೊರೊನಾ ಎಂಬ ಮಹಾಮಾರಿ ಇರುವುದರಿಂದ ಜನ ದಟ್ಟನೆ ಮಾಡಬಾರದೆಂದು ನಿಯಮ ಜಾರಿಯಲ್ಲಿರುವ ಕಾರಣ  ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಮೀಪದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಸಹಯೋಗದಲ್ಲಿ ಸುಮಾರು 14 ಕಡೆ ವಿತರಣಾ ಕೇಂದ್ರವನ್ನು ತೆರೆಯಲಾಗಿದೆ. ರೈತರು ಇದರ ಸದುಪಯೋಗ ಪಡೆದು ಕೊಳ್ಳಬೇಕು.

ಬಿತ್ತನೆಯನ್ನು ಯಾವ ಸಮಯದಲ್ಲಿ ಯಾವ ರೀತಿ ಮಾಡಬೇಕೆಂಬುದನ್ನು ಕೂಡ ಹಂಸ ಟಿವಿ ಕನ್ನಡ ಮಾಧ್ಯಮದ ಮೂಲಕ ರೈತ ಜನರಿಗೆ ತಿಳಿಸಿದರು. 

ಬೀಜ ಪಡೆದುಕೊಳ್ಳಲು  ಆಧಾರ್ ಕಾರ್ಡ್, ಜಮೀನಿನ ಪಹಣಿ ಪತ್ರ ಅಥವಾ ಬ್ಯಾಂಕ್ ಪಾಸ್ ಬುಕ್ ಯಾವದಾರೊಂದು ದಾಖಲೆಯನ್ನು ತರಬೇಕೆಂದು  ಅವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು