6:03 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ರೈತರಿಗೆ ಬಿತ್ತನೆ ಬೀಜ ವಿತರಣೆ ಹಾಗೂ ಬಿತ್ತನೆ ಬಗ್ಗೆ ರೈತ ಸಂಪರ್ಕ ಕೇಂದ್ರದ ಸಹಾಯಕ ನಿರ್ದೇಶಕಿ ಜಯಶ್ರೀ ಹಿರೇಮಠ್ ಸಲಹೆ

29/05/2021, 07:32

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ರೈತ ಸಂಪರ್ಕ ಕೇಂದ್ರ ಅಥಣಿ ಘಟಕದ  ಸಹಾಯಕ ನಿರ್ದೇಶಕರಾದ ಜಯಶ್ರೀ ಹಿರೇಮಠ್ ಅವರು ರೈತರಿಗೆ ಬೀಜ ವಿತರಣೆ ಹಾಗೂ ಬಿತ್ತನೆಯ ಬಗ್ಗೆ ಸಲಹೆ ನೀಡಿದರು.

ಕಾಗವಾಡ, ಅನಂತಪುರ ಮತ್ತು ಐಗಳಿ ಎಂಬ ಹೋಬಳಿಗಳನ್ನು ಒಳಗೊಂಡಿದ್ದು, ಇಲ್ಲಿ ಒಣ ಬೇಸಾಯ ಹಾಗೂ ನೀರಾವರಿ ಬೇಸಾಯವನ್ನು ಕೂಡ ಮಾಡಲಾಗುತ್ತದೆ.

ರೈತರಿಗೆ ಉದ್ದು, ತೊಗರಿ, ಹೆಸರು, ಸೋಯಾಬಿನ್ ಬೀಜಗಳನ್ನು ದಾಸ್ತಾನು ಮಾಡಲಾಗಿದೆ. ಅದೇ ರೀತಿ ಗೋವಿನ ಜೋಳ ಬೀಜವನ್ನು ಕೂಡ ಮುಂದಿನ ಒಂದು ವಾರದಲ್ಲಿ ಸಂಗ್ರಹಣೆ ಮಾಡಲಾಗುವುದು.

ರೈತರಿಗೆ ಬೀಜಗಳ ವಿತರಣೆಯನ್ನು ಈ ಕೊರೊನಾ ಎಂಬ ಮಹಾಮಾರಿ ಇರುವುದರಿಂದ ಜನ ದಟ್ಟನೆ ಮಾಡಬಾರದೆಂದು ನಿಯಮ ಜಾರಿಯಲ್ಲಿರುವ ಕಾರಣ  ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಮೀಪದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಸಹಯೋಗದಲ್ಲಿ ಸುಮಾರು 14 ಕಡೆ ವಿತರಣಾ ಕೇಂದ್ರವನ್ನು ತೆರೆಯಲಾಗಿದೆ. ರೈತರು ಇದರ ಸದುಪಯೋಗ ಪಡೆದು ಕೊಳ್ಳಬೇಕು.

ಬಿತ್ತನೆಯನ್ನು ಯಾವ ಸಮಯದಲ್ಲಿ ಯಾವ ರೀತಿ ಮಾಡಬೇಕೆಂಬುದನ್ನು ಕೂಡ ಹಂಸ ಟಿವಿ ಕನ್ನಡ ಮಾಧ್ಯಮದ ಮೂಲಕ ರೈತ ಜನರಿಗೆ ತಿಳಿಸಿದರು. 

ಬೀಜ ಪಡೆದುಕೊಳ್ಳಲು  ಆಧಾರ್ ಕಾರ್ಡ್, ಜಮೀನಿನ ಪಹಣಿ ಪತ್ರ ಅಥವಾ ಬ್ಯಾಂಕ್ ಪಾಸ್ ಬುಕ್ ಯಾವದಾರೊಂದು ದಾಖಲೆಯನ್ನು ತರಬೇಕೆಂದು  ಅವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು