7:05 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ರೈತರು ಅಡವಿಟ್ಟಿದ್ದ ಚಿನ್ನಾಭರಣ ಫೈನಾನ್ಸ್‌ ಗೆ ಮಾರಿ ರಿಯಲ್ ಎಸ್ಟೇಟ್ ದಂಧೆ: ಬ್ಯಾಂಕ್‌ ಮ್ಯಾನೇಜರ್‌ ಬಂಧನ

28/03/2022, 10:05

ರಾಮನಗರ(reporterkarnataka.com): ಸಹಕಾರ ಬ್ಯಾಂಕ್ ವೊಂದರಲ್ಲಿ ರೈತರು ಅಡವಿಟ್ಟಿದ್ದ ಚಿನ್ನವನ್ನು ಬ್ಯಾಂಕ್ ನ ವ್ಯವಸ್ಥಾಪಕ ಖಾಸಗಿ ಫೈನಾನ್ಸ್ ಕಂಪನಿಗೆ ಮಾರಾಟ ಮಾಡಿ ರಿಯಲ್ ಎಸ್ಟೇಟ್ ವ್ಯವಹಾರ ನಡೆಸಿರುವುದು ಬೆಳಕಿಗೆ ಬಂದಿದೆ.

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮರಳವಾಡಿಯ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಬ್ಯಾಂಕ್ ನಲ್ಲಿ ರೈತರು ಅಡವಿಟ್ಟಿದ್ದ ಸುಮಾರು 8 ಕೆಜಿಯ ಚಿನ್ನಾಭರಣವನ್ನು ಬ್ಯಾಂಕ್ ನ ವ್ಯವಸ್ಥಾಪಕ ಗೋವಿಂದಪ್ಪ ಎನ್ನುವವರು ಫೈನಾನ್ಸ್‌ ಗೆ ಮಾರಾಟ ಮಾಡಿದ್ದಾರೆ.

ರೈತರು ತಾನು ಅಡವಿಟ್ಟಿದ್ದ ಚಿನ್ನವನ್ನು ಬಿಡಿಸಿಕೊಳ್ಳಲು ಬಂದಾಗ ಅವರಿಗೆ ಒಡವೆ ನೀಡದೆ ಮ್ಯಾನೇಜರ್‌ ಸತಾಯಿಸುತ್ತಿದ್ದ. ಈ ಬಗ್ಗೆ ಮೇಲಧಿಕಾರಿಗಳಿಗೆ ರೈತ ದೂರು ಸಲ್ಲಿಸಿದ್ದರು.

ರೈತನ ದೂರಿನ ಆಧಾರದ ಮೇಲೆ ಗೋವಿಂದಪ್ಪನನ್ನು ವಿಚಾರಿಸಿದಾಗ ಬಸ್ ನಲ್ಲಿ ಹೋಗುವಾಗ ಚಿನ್ನಾಭರಣ ಕಳತನವಾಯಿತು ಎಂದು ಸುಳ್ಳು ಹೇಳಿದ.‌ ಅನುಮಾನಗೊಂಡು ವಿಚಾರಣೆ ನಡೆಸಿದಾಗ ಸತ್ಯಾಂಶ ಹೊರಬಂದಿದೆ.

ಪ್ರಕರಣ ಸಂಬಂಧ ಗೋವಿಂದಪ್ಪನನ್ನು ಬಂಧಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆದರೆ ಎಷ್ಟು ಮೊತ್ತದ ಚಿನ್ನಾಭರಣ ಮಾರಾಟ ಮಾಡಿದ್ದಾನೆ ಎಂಬುದು ಆಡಿಟ್ ನಂತರವೇ ಹೊರಬೀಳಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು